Homeಮುಖಪುಟಇಸ್ರೇಲ್‌ನಿಂದ ಪ್ಯಾಲೆಸ್ತೀನ್ ನಾಗರಿಕರ ಅಂಗಾಂಗ ಕಳವು: ಗಾಝಾ ಅಧಿಕಾರಿಗಳಿಂದ ಆರೋಪ

ಇಸ್ರೇಲ್‌ನಿಂದ ಪ್ಯಾಲೆಸ್ತೀನ್ ನಾಗರಿಕರ ಅಂಗಾಂಗ ಕಳವು: ಗಾಝಾ ಅಧಿಕಾರಿಗಳಿಂದ ಆರೋಪ

- Advertisement -
- Advertisement -

ಯುದ್ಧಕ್ಕೆ ಬಲಿಯಾದ ಪ್ಯಾಲೆಸ್ತೀನ್ ನಾಗರಿಕರ ಮೃತದೇಹಗಳಿಂದ ಇಸ್ರೇಲ್ ಸೇನೆ ಅಂಗಾಂಗಳನ್ನು ಕದಿಯುತ್ತಿದೆ ಎಂದು ಗಾಝಾದ ಸ್ಥಳೀಯ ಅಧಿಕಾರಿಗಳು ಆರೋಪಿಸಿದ್ದು, ಅಂತಾರಾಷ್ಟ್ರೀಯ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಅನೇಕ ಮಂದಿ ಪ್ಯಾಲೆಸ್ತೀನ್ ನಾಗರಿಕರ ಮೃತದೇಹಗಳ ಆಕಾರ ಬದಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಅಂಗಾಂಗ ಕಳವು ಮಾಡಿರುವುದು ಬಯಲಾಗಿದೆ ಎಂದು ಗಾಝಾ ಮೂಲದ ಸರ್ಕಾರಿ ಮಾಧ್ಯಮ ಕಚೇರಿಯೊಂದು ಹೇಳಿರುವುದಾಗಿ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇಸ್ರೇಲ್‌ ಸೇನೆಯು ಮೃತರ ಹೆಸರನ್ನು ಮತ್ತು ಎಲ್ಲಿ ಮೃತದೇಹಗಳು ದೊರೆತಿದೆ ಎಂಬುವುದರ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಹೂತಿಟ್ಟ ಮೃತದೇಹಗಳನ್ನೂ ಅವರು ಹೊರ ತೆಗೆದಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಆರೋಪಿಸಿದೆ.

ಇಸ್ರೇಲ್ ಇಂತಹ ಭಯಾನಕ ಅಪರಾಧ ನಡೆಸುತ್ತಿದ್ದರೂ ಗಾಝಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೆಡ್ ಕ್ರಾಸ್‌ನ ಅಂತಾರಾಷ್ಟ್ರೀಯ ಸಮಿತಿ ಮೌನ ತಾಳಿದೆ ಎಂದು ಕಿಡಿಕಾರಿದೆ. ಈ ಆರೋಪಗಳ ಬಗ್ಗೆ ಇಸ್ರೇಲ್ ಸೇನೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಾಝಾದಲ್ಲಿ ವೈಮಾನಿಕ ದಾಳಿ ಮಾತ್ರವಲ್ಲದೆ, ನಗರದ ಮನೆ ಮನೆಗೆ ನುಗ್ಗಿ ಇಸ್ರೇಲ್‌ ಸೇನೆ ಆಕ್ರಮಣ ನಡೆಸುತ್ತಿದೆ. ಕಳೆದ ಮಂಗಳವಾರ ಈ ರೀತಿಯ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಹಲವು ಮಂದಿಯ ಮೃತದೇಹಗಳನ್ನು ಹಸ್ತಾಂತರಿಸಿದೆ.

ಗಾಝಾದ ಆರೋಗ್ಯ ಸಚಿವಾಲಯ ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಕೆರೆಮ್ ಶಾಲೋಮ್ ಗಡಿಯಲ್ಲಿ ಮೃತದೇಹಗಳನ್ನು ಸ್ವೀಕರಿಸಿದೆ. ಗಾಝಾದ ಧಾರ್ಮಿಕ ವ್ಯವಹಾರಗಳ ಸಚಿವಾಲಯ ಎಲ್ಲಾ ಮೃತದೇಹಗಳನ್ನು ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಿದೆ.

ಗಾಝಾ ಪಟ್ಟಿಗೆ ಹಲವು ಮೃತದೇಹಗಳನ್ನು ಇಸ್ರೇಲ್ ಹಸ್ತಾಂತರಿಸಲಿದೆ ಎಂದು ನಮಗೆ ವಿಶ್ವಸಂಸ್ಥೆಯ ಪ್ರತಿ ನಿಧಿಗಳು ಮಾಹಿತಿ ನೀಡಿದ್ದರು. ಸುಮಾರು 80 ಮಂದಿಯ ಮೃತದೇಹಗಳನ್ನು ಸ್ವೀಕರಿಸಲಾಗಿದೆ ಎಂದು ರಾಫಾ ನಗರದ ಮೊಹಮ್ಮದ್ ಯೂಸುಫ್ ಅಲ್-ನಝರ್ ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಅಲ್-ಹಮ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಂಟೇನರ್‌ನಲ್ಲಿ ಮೃತದೇಹಗಳನ್ನು ನಮಗೆ ಹಸ್ತಾಂತರಿಸಲಾಗಿದೆ. ಅವುಗಳಲ್ಲಿ ಹಲವು ಮೃತದೇಹಗಳು ತುಂಡು ತುಂಡಾಗಿದ್ದವು, ಇನ್ನೂ ಹಲವು ಕೊಳೆತಿದ್ದವು. ಪ್ಯಾಲೆಸ್ತೀನ್ ಆರೋಗ್ಯ ಮತ್ತು ನ್ಯಾಯ ಇಲಾಖೆ ಇದನ್ನು ಇಸ್ರೇಲಿ ಯುದ್ಧಪರಾಧ ಎಂದು ಪರಿಗಣಿಸುವುದಾಗಿ ಯುದ್ಧದ ಭೀಕರತೆಯನ್ನು ಮರ್ವಾನ್ ಅಲ್-ಹಮ್ಸ್ ವಿವರಿಸಿದ್ದಾರೆ.

ಇದನ್ನೂ ಓದಿ : ಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...