Homeಮುಖಪುಟನಿರುದ್ಯೋಗ, ಹಣದುಬ್ಬರಕ್ಕಿಂತ ರಾಮ ಮಂದಿರ ನೈಜ ಸಮಸ್ಯೆಯೇ: ಸ್ಯಾಮ್ ಪಿತ್ರೋಡಾ

ನಿರುದ್ಯೋಗ, ಹಣದುಬ್ಬರಕ್ಕಿಂತ ರಾಮ ಮಂದಿರ ನೈಜ ಸಮಸ್ಯೆಯೇ: ಸ್ಯಾಮ್ ಪಿತ್ರೋಡಾ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆಗೆ ಸಿದ್ಧತೆ ಚುರುಕುಗೊಂಡಿರುವ ಸಂದರ್ಭದಲ್ಲಿ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ರಾಮ ಮಂದಿರದ ಕುರಿತು ಎತ್ತಿರುವ ಪ್ರಶ್ನೆಯು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ. ‘ರಾಮ ಮಂದಿರ ನಿಜವಾದ ಸಮಸ್ಯೆಯೋ ಅಥವಾ ಅದಕ್ಕಿಂತ ನಿರುದ್ಯೋಗ, ಹಣದುಬ್ಬರವೋ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಧರ್ಮದ ಕುರಿತು ನನಗೆ ಯಾವುದೇ ಸಮಸ್ಯೆ ಇಲ್ಲ, ಒಮ್ಮೆ ದೇವಸ್ಥಾನಕ್ಕೆ ಹೋಗುವುದು ಸರಿ. ಆದರೆ, ನೀವು ಅದನ್ನೇ ಮುಖ್ಯ ವೇದಿಕೆಯನ್ನಾಗಿ ಮಾಡಲು ಸಾಧ್ಯವಿಲ್ಲ. ದೇಶದ ಶೇ.40 ರಷ್ಟು ಜನರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ. ಶೇ.60 ರಷ್ಟು ಜನರು ಬಿಜೆಪಿಗೆ ಮತ ಹಾಕಿಲ್ಲ. ಅವರು ಪ್ರತಿಯೊಬ್ಬರ ಪ್ರಧಾನ ಮಂತ್ರಿ; ಬಿಜೆಪಿಯ ಪ್ರಧಾನಿಯಲ್ಲ ಎಂಬುದನ್ನು ಭಾರತದ ಜನರು ಬಯಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ನೀವು ನಿರುದ್ಯೋಗದ ಬಗ್ಗೆ ಮಾತನಾಡಿ, ಹಣದುಬ್ಬರದ ಬಗ್ಗೆ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸವಾಲುಗಳ ಬಗ್ಗೆ ಮಾತನಾಡಿ. ದೇಶದ ನಿಜವಾದ ಸಮಸ್ಯೆಗಳೇನು ಎಂಬುದನ್ನು ಜನರೆ ನಿರ್ಧರಿಸಬೇಕು. ರಾಮಮಂದಿರ ನಿಜವಾದ ಸಮಸ್ಯೆಯೇ ಅಥವಾ ನಿರುದ್ಯೋಗ ನಿಜವಾದ ಸಮಸ್ಯೆ. ರಾಮಮಂದಿರ ನಿಜವಾದ ಸಮಸ್ಯೆಯೇ ಅಥವಾ ಹಣದುಬ್ಬರ ನಿಜವಾದ ಸಮಸ್ಯೆಯೇ’ ಎಂದು ಅವರು ಪ್ರಶ್ನಿಸಿದ್ದಾರೆ.

‘ನಿಮ್ಮ ಧರ್ಮವನ್ನು ಆಚರಿಸಿ. ಆದರೆ, ಧರ್ಮವನ್ನು ರಾಜಕೀಯದಿಂದ ಪ್ರತ್ಯೇಕವಾಗಿ ಇರಿಸಿ’ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರೂ ಆದ ಪಿತ್ರೋಡಾ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ, ‘ಸ್ಯಾಮ್ ಪಿತ್ರೋಡಾ ಭಾರತೀಯರ ಭಾವನೆಗಳನ್ನು ಎಷ್ಟು ಅರ್ಥಮಾಡಿಕೊಂಡಿದ್ದಾರೆ? ಅವರು ಭಾರತದ ಹೊರಗೆ ವಾಸಿಸುತ್ತಿದ್ದು, ಭಾರತೀಯರಿಗಿಂತ ಭಿನ್ನವಾಗಿ ಯೋಚಿಸುತ್ತಾರೆ. ನೀವು ಭಾರತದಲ್ಲಿ ರಾಜಕೀಯ ಮಾಡಲು ಬಯಸಿದರೆ, ಭಾರತ ಮತ್ತು ಭಾರತೀಯರಂತೆ ಯೋಚಿಸಿ’ ಎಂದು ತಿರುಗೇಟು ಕೊಟ್ಟಿದ್ದಾರೆ.

‘ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂಬಂಧ ದೇಶದಾದ್ಯಂತ ನಡೆಯುತ್ತಿರುವ ಆಚರಣೆಗಳ ಬಗ್ಗೆ ನನಗೆ ಬೇಸರವಿದೆ ಎಂಬ ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ನನಗೆ ಆಶ್ಚರ್ಯವಾಗಿದೆ. ಅಂತಹ ಕಾರ್ಯಕ್ರಮಗಳನ್ನು ಇಡೀ ಸಮುದಾಯ ಮಾಡುತ್ತಾರೆ. ನಾವು ಅದಕ್ಕೆ ಸರ್ಕಾರದ ಹಣವನ್ನು ಸ್ವೀಕರಿಸುವುದಿಲ್ಲ. ಸರ್ಕಾರದಿಂದ ಏನನ್ನೂ ತೆಗೆದುಕೊಳ್ಳದ ಭಕ್ತಾದಿಗಳು ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಮನೊಂದಿಗೆ ಅಂತರ ಕಾಯ್ದುಕೊಳ್ಳುತ್ತದೆ ಎಂಬುದು ದೃಢವಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ದೂರು ನೀಡಿದರೂ ಕ್ರಮ ತೆಗೆದುಕೊಳ್ಳದ ಪೊಲೀಸರು; ಎಸ್‌ಪಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡ ದಲಿತ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...