Homeಮುಖಪುಟನಿರುದ್ಯೋಗ, ಹಣದುಬ್ಬರಕ್ಕಿಂತ ರಾಮ ಮಂದಿರ ನೈಜ ಸಮಸ್ಯೆಯೇ: ಸ್ಯಾಮ್ ಪಿತ್ರೋಡಾ

ನಿರುದ್ಯೋಗ, ಹಣದುಬ್ಬರಕ್ಕಿಂತ ರಾಮ ಮಂದಿರ ನೈಜ ಸಮಸ್ಯೆಯೇ: ಸ್ಯಾಮ್ ಪಿತ್ರೋಡಾ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆಗೆ ಸಿದ್ಧತೆ ಚುರುಕುಗೊಂಡಿರುವ ಸಂದರ್ಭದಲ್ಲಿ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ರಾಮ ಮಂದಿರದ ಕುರಿತು ಎತ್ತಿರುವ ಪ್ರಶ್ನೆಯು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ. ‘ರಾಮ ಮಂದಿರ ನಿಜವಾದ ಸಮಸ್ಯೆಯೋ ಅಥವಾ ಅದಕ್ಕಿಂತ ನಿರುದ್ಯೋಗ, ಹಣದುಬ್ಬರವೋ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಧರ್ಮದ ಕುರಿತು ನನಗೆ ಯಾವುದೇ ಸಮಸ್ಯೆ ಇಲ್ಲ, ಒಮ್ಮೆ ದೇವಸ್ಥಾನಕ್ಕೆ ಹೋಗುವುದು ಸರಿ. ಆದರೆ, ನೀವು ಅದನ್ನೇ ಮುಖ್ಯ ವೇದಿಕೆಯನ್ನಾಗಿ ಮಾಡಲು ಸಾಧ್ಯವಿಲ್ಲ. ದೇಶದ ಶೇ.40 ರಷ್ಟು ಜನರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ. ಶೇ.60 ರಷ್ಟು ಜನರು ಬಿಜೆಪಿಗೆ ಮತ ಹಾಕಿಲ್ಲ. ಅವರು ಪ್ರತಿಯೊಬ್ಬರ ಪ್ರಧಾನ ಮಂತ್ರಿ; ಬಿಜೆಪಿಯ ಪ್ರಧಾನಿಯಲ್ಲ ಎಂಬುದನ್ನು ಭಾರತದ ಜನರು ಬಯಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ನೀವು ನಿರುದ್ಯೋಗದ ಬಗ್ಗೆ ಮಾತನಾಡಿ, ಹಣದುಬ್ಬರದ ಬಗ್ಗೆ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸವಾಲುಗಳ ಬಗ್ಗೆ ಮಾತನಾಡಿ. ದೇಶದ ನಿಜವಾದ ಸಮಸ್ಯೆಗಳೇನು ಎಂಬುದನ್ನು ಜನರೆ ನಿರ್ಧರಿಸಬೇಕು. ರಾಮಮಂದಿರ ನಿಜವಾದ ಸಮಸ್ಯೆಯೇ ಅಥವಾ ನಿರುದ್ಯೋಗ ನಿಜವಾದ ಸಮಸ್ಯೆ. ರಾಮಮಂದಿರ ನಿಜವಾದ ಸಮಸ್ಯೆಯೇ ಅಥವಾ ಹಣದುಬ್ಬರ ನಿಜವಾದ ಸಮಸ್ಯೆಯೇ’ ಎಂದು ಅವರು ಪ್ರಶ್ನಿಸಿದ್ದಾರೆ.

‘ನಿಮ್ಮ ಧರ್ಮವನ್ನು ಆಚರಿಸಿ. ಆದರೆ, ಧರ್ಮವನ್ನು ರಾಜಕೀಯದಿಂದ ಪ್ರತ್ಯೇಕವಾಗಿ ಇರಿಸಿ’ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರೂ ಆದ ಪಿತ್ರೋಡಾ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ, ‘ಸ್ಯಾಮ್ ಪಿತ್ರೋಡಾ ಭಾರತೀಯರ ಭಾವನೆಗಳನ್ನು ಎಷ್ಟು ಅರ್ಥಮಾಡಿಕೊಂಡಿದ್ದಾರೆ? ಅವರು ಭಾರತದ ಹೊರಗೆ ವಾಸಿಸುತ್ತಿದ್ದು, ಭಾರತೀಯರಿಗಿಂತ ಭಿನ್ನವಾಗಿ ಯೋಚಿಸುತ್ತಾರೆ. ನೀವು ಭಾರತದಲ್ಲಿ ರಾಜಕೀಯ ಮಾಡಲು ಬಯಸಿದರೆ, ಭಾರತ ಮತ್ತು ಭಾರತೀಯರಂತೆ ಯೋಚಿಸಿ’ ಎಂದು ತಿರುಗೇಟು ಕೊಟ್ಟಿದ್ದಾರೆ.

‘ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂಬಂಧ ದೇಶದಾದ್ಯಂತ ನಡೆಯುತ್ತಿರುವ ಆಚರಣೆಗಳ ಬಗ್ಗೆ ನನಗೆ ಬೇಸರವಿದೆ ಎಂಬ ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ನನಗೆ ಆಶ್ಚರ್ಯವಾಗಿದೆ. ಅಂತಹ ಕಾರ್ಯಕ್ರಮಗಳನ್ನು ಇಡೀ ಸಮುದಾಯ ಮಾಡುತ್ತಾರೆ. ನಾವು ಅದಕ್ಕೆ ಸರ್ಕಾರದ ಹಣವನ್ನು ಸ್ವೀಕರಿಸುವುದಿಲ್ಲ. ಸರ್ಕಾರದಿಂದ ಏನನ್ನೂ ತೆಗೆದುಕೊಳ್ಳದ ಭಕ್ತಾದಿಗಳು ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಮನೊಂದಿಗೆ ಅಂತರ ಕಾಯ್ದುಕೊಳ್ಳುತ್ತದೆ ಎಂಬುದು ದೃಢವಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ದೂರು ನೀಡಿದರೂ ಕ್ರಮ ತೆಗೆದುಕೊಳ್ಳದ ಪೊಲೀಸರು; ಎಸ್‌ಪಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡ ದಲಿತ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...