Homeಮುಖಪುಟಕಿರುತೆರೆ ತರ ತರ; ಕೂಸೆ ಮುನಿಸಾಮಿ ವೀರಪ್ಪನ್ ಮತ್ತು ಮೂರು ಷೋಗಳು

ಕಿರುತೆರೆ ತರ ತರ; ಕೂಸೆ ಮುನಿಸಾಮಿ ವೀರಪ್ಪನ್ ಮತ್ತು ಮೂರು ಷೋಗಳು

- Advertisement -
- Advertisement -

1. ಕೂಸೆ ಮುನಿಸಾಮಿ ವೀರಪ್ಪನ್

ಕೆಲವು ತಿಂಗಳ ಹಿಂದೆ ನೆಟ್‌ಫ್ಲಿಕ್ಸ್‌ನಲ್ಲಿ ತೆರೆಕಂಡಿದ್ದ ’ದ ಹಂಟ್ ಫಾರ್ ವೀರಪ್ಪನ್’ ಎಂಬ ಸಾಕ್ಷ್ಯಚಿತ್ರ ಬಿಸಿಬಿಸಿ ಚರ್ಚೆಯನ್ನು ಹುಟ್ಟುಹಾಕಿತ್ತು. ’ವರ್ಕ್‌ಶಾಪ್’ ಎಂಬ ಹೆಸರಿನಲ್ಲಿ ಎಸ್‌ಟಿಎಫ್ ಪೊಲೀಸರು, ಅದರಲ್ಲಿಯೂ ಶಂಕರ ಬಿದರಿ ತಂಡ ನಡೆಸಿದ ದೌರ್ಜನ್ಯಗಳ ಬಗ್ಗೆ ಅದರ ಭಾಗವಾಗಿಯೇ ಇದ್ದ ಪೊಲೀಸ್ ಅಧಿಕಾರಿಯೊಬ್ಬರು ನಿವೇದಿಸಿಕೊಂಡಿದ್ದರು. ಆದರೆ ವೀರಪ್ಪನ್ ಒಬ್ಬ ಕಾಡುಗಳ್ಳನಾಗಿ-ಹಂತಕನಾಗಿ ರೂಪುಗೊಂಡಿದ್ದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ಅದು ಅಷ್ಟು ಮಾತಾಡಿರಲಿಲ್ಲ. ನಾಲ್ಕು ಎಪಿಸೋಡ್ ಇದ್ದ ಈ ಸಾಕ್ಷ್ಯಚಿತ್ರ ಹಲವು ಮುಖ್ಯ ಸಂಗತಿಗಳನ್ನು ಬಿಟ್ಟಿತ್ತು.

ಈ ಕೊರತೆಯನ್ನು ತುಸು ನೀಗಿಸುವ ನಿಟ್ಟಿನಲ್ಲಿ ಈಗ ಝೀ5 ಎಂಬ ಒಟಿಟಿ ವಾಹಿನಿಯಲ್ಲಿ ’ಕೂಸೆ ಮುನಿಸಾಮಿ ವೀರಪ್ಪನ್’ ಎಂಬ ಆರು ಎಪಿಸೋಡ್‌ಗಳ ಸಾಕ್ಷ್ಯಚಿತ್ರ ಬಿಡುಗಡೆಯಾಗಿದೆ. ಇದು ಮೊದಲಭಾಗ ಮಾತ್ರವಾಗಿದ್ದು ಸೀಸನ್-2 ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ನಕ್ಕೀರನ್ ಪತ್ರಿಕೆಯ ಸಂಪಾದಕ ಗೋಪಾಲ್ ಮತ್ತು ತಂಡ ಚಿತ್ರೀಕರಿಸಿದ್ದ ವೀರಪ್ಪನ್‌ನ ವಿಡಿಯೋ ಫುಟೇಜ್‌ಗಳನ್ನು ಯಥೇಚ್ಛವಾಗಿ ಬಳಸಿ ನಿರ್ಮಿಸಿರುವ ಈ ಡಾಕ್ಯುಮೆಂಟರಿ ವೀರಪ್ಪನ್‌ನನ್ನೇ ಮುಖ್ಯ ನಿರೂಪಕನನ್ನಾಗಿ ಕೇಂದ್ರೀಕರಿಸುತ್ತದೆ. ನಾಲ್ಕನೇ ಎಪಿಸೋಡ್ ಪೊಲೀಸರ ಚಿತ್ರಹಿಂಸೆಯ ಭಯಾನಕತೆಯನ್ನು ಚಿತ್ರಿಸಿದರೆ, ಐದನೇ ಎಪಿಸೋಡ್‌ನಲ್ಲಿ ವೀರಪ್ಪನ್ ನಡೆಸುವ ಮೈಂಡ್‌ಲೆಸ್ ಕಿಲ್ಲಿಂಗ್‌ನ ಚಿತ್ರಣ ವಿವರವಾಗಿದೆ. ಒಟ್ಟಿನಲ್ಲಿ ಪೊಲೀಸರ ಮತ್ತು ವೀರಪ್ಪನ್ ದೌರ್ಜನ್ಯದ ನಡುವೆ ಸ್ಪರ್ಧೆ ಇತ್ತೇನೋ ಎಂಬಂತೆ ಭಾಸವಾಗುವಂತೆ ಈ ಸೀರೀಸ್ ಮಾಡುತ್ತದೆ. ಉಳಿದ ಎಲ್ಲಾ ಚಿತ್ರಗಳಿಗೆ ಹೋಲಿಸಿದರೆ ವೀರಪ್ಪನ್ ಮತ್ತು ಸುತ್ತಮುತ್ತಲಿನ ಘಟನೆಗಳ ಬಗ್ಗೆ ತುಸು ಹೆಚ್ಚು ವಿವರಗಳನ್ನು ಈ ಸಾಕ್ಷ್ಯಚಿತ್ರ ಕಟ್ಟಿಕೊಡುತ್ತದೆ.

2. ಲೀವ್ ದ ವರ್ಲ್ಡ್ ಬಿಹೈಂಡ್

ಸ್ಯಾಮ್ ಎಸ್ಮಾಯಿಲ್ ನಿರ್ದೇಶನದ, ಜೂಲಿಯಾ ರಾಬರ್ಟ್ಸ್, ಮಾಹರ್ಶಾಲಾ ಅಲಿ, ಈಥನ್ ಹಾಕ್ ಮತ್ತು ಮೈಹಾ ಲಾ ಹೆರಾಲ್ಡ್ ಮುಖ್ಯಭೂಮಿಕೆಯಲ್ಲಿರುವ 141 ನಿಮಿಷಗಳ ಚಲನಚಿತ್ರ ’ಲೀವ್ ದ ವರ್ಲ್ಡ್ ಬಿಹೈಂಡ್’ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಅಮೆರಿಕನ್ ಅಪೋಕ್ಯಾಲಿಪ್ಟಿಕ್ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವಾದ ’ಲೀವ್ ದ ವರ್ಲ್ಡ್ ಬಿಹೈಂಡ್’ಅನ್ನು ರುಮಾನ್ ಆಲಮ್ ಅವರ 2020ರ ಅದೇ ಹೆಸರಿನ ಕಾದಂಬರಿಯಿಂದ ಅಳವಡಿಸಿಕೊಳ್ಳಲಾಗಿದೆ.

ಟೆಕ್ನಾಲಾಜಿಕಲ್ ವಾರ್‌ಫೇರ್‌ನಿಂದ ಆಗುವ ಬ್ಲಾಕ್‌ಔಟ್‌ನಿಂದ ಉಂಟಾಗುವ ಅಲ್ಲೋಲಕಲ್ಲೋಲವನ್ನು, ಐಲ್ಯಾಂಡ್ ಒಂದರಲ್ಲಿ ವೀಕೆಂಡ್ ರಜೆ ಕಳೆಯಲು ಬಂದಿರುವ ಫ್ಯಾಮಿಲಿಯ ದೃಷ್ಟಿಕೋನದಲ್ಲಿ ಈ ಸಿನಿಮಾ ಚಿತ್ರಿಸುತ್ತದೆ. ತುರ್ತು ಸನ್ನಿವೇಶಗಳಲ್ಲಿ ತಂತ್ರಜ್ಞಾನನ ಮೇಲೆ ವಿಪರೀತ ಅವಲಂಬಿಸಿರುವ ಆಧುನಿಕ ಮನುಷ್ಯನ ಅಸಹಾಯಕತೆಯನ್ನು ಕೂಡ ಚಿತ್ರಿಸುವ ಈ ಸಿನಿಮಾ, ಒಂದು ಡಿಸ್ಟೋಪಿಯನ್ ಚಿತ್ರಣವನ್ನು ಕಣ್ಣಮುಂದೆ ತರುತ್ತದೆ. ಜಿಪಿಎಸ್ ಫೇಲ್ ಆದರೆ, ವಿಮಾನಗಳು, ಡ್ರೈವರ್‌ಲೆಸ್ ಕಾರುಗಳು ಹೇಗೆ ಕೆಟಾಸ್ಟ್ರೋಫಿಕ್ ಆಗಬಲ್ಲವು ಎಂಬ ಕರಾಳ ಭವಿಷ್ಯವನ್ನು ಚಿತ್ರಿಸುವುದರ ಜೊತೆಗೆ, ಬಿಳಿಯರ ಜನಾಂಗೀಯ ದ್ವೇಷ, ಜಗತ್ತು ಮುಳುಗುತ್ತಿರುವ ಸನ್ನಿವೇಶದಲ್ಲಿಯೂ ಕಪ್ಪು ಜನರನ್ನು ತುಚ್ಛವಾಗಿ ಕಾಣುವ, ಸಹಜೀವನಕ್ಕೆ ಮುಂದಾಗದ ಬಿಳಿ ಜನರ ಒಣಪ್ರತಿಷ್ಠೆಯನ್ನು ಈ ಸಿನಿಮಾ ಹಿಡಿದಿಡಲು ಪ್ರಯತ್ನಿಸುತ್ತದೆ. ಈ ವಾರ್‌ಫೇರ್ ಹೊರಗಿನವರಿಂದ ಆಗಿರದೆ, ರಾಜಕೀಯ ಲಾಭಕ್ಕಾಗಿ ತಮ್ಮದೇ ದೇಶದ ಸಂಪ್ರದಾಯವಾದಿ ಪಕ್ಷ ನಡೆಸಿರಬಹುದಾದ ಯುದ್ಧ ಇದಾಗಿರಬಹುದು ಎಂದು ಪಾತ್ರವೊಂದು ಹೇಳುವುದು ಗಮನ ಸೆಳೆಯುತ್ತದೆ.

ಇದನ್ನೂ ಓದಿ: ಬಿಳಿಯರ ಪಾಪನಿವೇದನೆಯ ’ಕಿಲ್ಲರ್ಸ್ ಆಫ್ ದ ಫ್ಲವರ್ ಮೂನ್’

 

3. ಟ್ರೆವರ್ ನೋವ: ವೇರ್ ವಾಸ್ ಐ

ಟ್ರೆವರ್ ನೋವ ಸೌಥ್ ಆಫ್ರಿಕಾದ ಕಾಮಿಡಿಯನ್. ಸ್ಟಾಂಡ್ ಅಪ್ ಕಾಮಿಡಿ ಶೋಗಳಿಗೆ ಹೆಸರುವಾಸಿಯಾದ ಟ್ರೆವರ್, ಅಮೆರಿಕದ ಡೆಟ್ರಾಯ್ಟ್ ನಗರದ ತುಂಬಿದ ಸಭಾಂಗಣದಲ್ಲಿ ನಡೆಸಿಕೊಟ್ಟ ಸ್ಟಾಂಡ್ ಅಪ್ ಕಾಮಿಡಿ ಶೋ ಈಗ ನೆಟ್‌ಫ್ಲಿಕ್ಸ್‌ನಲ್ಲಿ ’ಟ್ರೆವರ್ ನೋವ: ವೇರ್ ವಾಸ್ ಐ’ ಹೆಸರಿನಲ್ಲಿ ಪ್ರಸಾರವಾಗುತ್ತಿದೆ.

ತಮ್ಮ ಬರ್ಲಿನ್ ಪ್ರವಾಸದಲ್ಲಿ ನಡೆಸಿಕೊಟ್ಟ ಶೋ ಬಗೆಗಿನ ಅನುಭವದೊಂದಿಗೆ ಶುರುವಾಗುವ ಈ ಕಾರ್ಯಕ್ರಮ ನಾಜಿಗಳನ್ನು, ನಾಜಿಗಳ ರಾಷ್ಟ್ರಗೀತೆಯನ್ನು ವ್ಯಂಗ್ಯ ಮಾಡುವುದಲ್ಲದೆ, ರಾಷ್ಟ್ರಗೀತೆಯ ಸಾಹಿತ್ಯ ಬದಲಿಸಿ, ಮ್ಯೂಸಿಕ್ ಮತ್ತು ಟ್ಯೂನ್‌ಅನ್ನು ಹಾಗೆಯೇ ಉಳಿಸಿಕೊಂಡ ಪೋಸ್ಟ್ ವಾರ್ ಜರ್ಮನಿಯ ನಡೆ ಎಷ್ಟು ವಿಚಿತ್ರವಾದದ್ದು ಮತ್ತು ಉಪಯೋಗವಿಲ್ಲದ್ದು ಎಂದು ಹಾಸ್ಯ ಶೈಲಿಯಲ್ಲಿ, ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ಮೂಲಕ ಟ್ರೆವರ್ ಮಾತನಾಡುತ್ತಾರೆ. ಸುಮಾರು 70 ನಿಮಿಷಗಳ ಈ ಶೋನಲ್ಲಿ ಜನಾಂಗೀಯ ತಾರತಮ್ಯ, ಲಿಂಗ ತಾರತಮ್ಯ, ಹುಸಿ ನ್ಯಾಷನಲಿಸಂ ಎಲ್ಲವೂ ಹಾದುಹೋಗುತ್ತವೆ.

2016ರಲ್ಲಿ ಟ್ರೆವರ್ ಬರೆದಿದ್ದ ’ಬಾರ್ನ್ ಇನ್ ಕ್ರೈಮ್’ (ಸ್ಟೋರೀಸ್ ಫ್ರಮ್ ಚೈಲ್ಡ್‌ಹುಡ್) ಎಂಬ ಆತ್ಮಕತೆಗಳ ಪುಸ್ತಕ ಜನಪ್ರಿಯತೆ ಪಡೆದಿತ್ತು.

4. ಚಿತ್ತ

ಅರುಣ್ ಕುಮಾರ್ ನಿರ್ದೇಶನದ ತಮಿಳು ನಟ ಸಿದ್ಧಾರ್ಥ ನಟಿಸಿರುವ ಚಿತ್ತ (ಚಿಕ್ಕಪ್ಪ) ಮೊದಲು ಥಿಯೇಟರ್‌ಗಳಲ್ಲಿ ತೆರೆಕಂಡು, ಈಗ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿದೆ. ಇದು ಮೂಲ ತಮಿಳು ಚಿತ್ರವಾದರೂ, ಕನ್ನಡ, ತೆಲುಗು, ಹಿಂದಿ ಮುಂತಾದ ಭಾಷೆಗಳಲ್ಲಿ ಸಿನಿಮಾದ ಡಬ್ ಅವತರಣಿಕೆ ಕೂಡ ಇದೆ.

ಸುಂದರಿ ಮತ್ತು ಆಕೆಯ ಚಿಕ್ಕಪ್ಪ ಈಶ್ವರನ್ (ಸಿದ್ಧಾರ್ಥ) ನಡುವಿನ ಭಾವನಾತ್ಮಕ ಸಂಬಂಧ ಸುತ್ತ ಸುತ್ತುವ ಚಿತ್ರ, ಮಕ್ಕಳನ್ನು ಅಬ್ಯೂಸ್ ಮಾಡುವ ಥ್ರಿಲ್ಲರ್ ಕಥೆಯಾಗಿ ಬದಲಾಗುತ್ತದೆ. ಈ ಥ್ರಿಲ್ಲರ್ ಸಿನಿಮಾದಲ್ಲಿ, ಕಾಣೆಯಾಗುವ ಸುಂದರಿಯನ್ನು ಈಶು ಹುಡುಕುವ ಕಥೆ ’ಹೀರೋಯಿಕ್’ ಮಾದರಿಯಲ್ಲಿ ಮೂಡಿಬಂದಿದ್ದರೂ, ಆ ಹೀರೋಯಿಸಂಗೆ ಚಿಕಿತ್ಸೆಯಾಗಿ ಸಕ್ತಿ (ನಿಮಿಶಾ ಸಜಯನ್) ಪಾತ್ರ ಕಾಡುತ್ತದೆ. ಪೌರಕಾರ್ಮಿಕಳ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಕ್ತಿ ಈಶುವಿನ ಪ್ರಿಯತಮೆ. ಸಣ್ಣವಯಸ್ಸಿನಲ್ಲಿಯೇ ಸಂಬಂಧಿಕನೊಬ್ಬನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವವಳು. ಅತ್ತ ಅಣ್ಣನ ಮಗಳ ವಿರುದ್ಧ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಕೊಲ್ಲಲು ಮುಂದಾಗುವ ಈಶು, ಸಕ್ತಿಯ ಜತೆಗೆ ಆಗಿರುವ ದೌರ್ಜನ್ಯವನ್ನು ತಿಳಿದುಕೊಳ್ಳುವ, ಅದಕ್ಕೆ ಕೊನೆ ಪಕ್ಷ ಸಂತೈಸುವುದಕ್ಕೂ ಸಂಯಮ ಇಲ್ಲದವನು. ಒಂದು ಪುರುಷಾಧಿಕಾರದ ದೌರ್ಜನ್ಯವನ್ನು ಅದೇ ಪುರುಷ ಅಹಂಕಾರದಿಂದ ಮೆಟ್ಟಬಹುದೇ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವಂತೆ, ಸಕ್ತಿಯ ಪಾತ್ರ ಚಿಕ್ಕ ಅವಧಿಗೆ ಬಂದರೂ ಪ್ರೇರೇಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪುನರ್ವಸತಿ ಕೇಂದ್ರದಲ್ಲಿ ದಲಿತ ಯುವಕ ಸಾವು ಪ್ರಕರಣ; ನಾಲ್ವರು ಪೊಲೀಸರು ಅಮಾನತು

ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿ 22 ವರ್ಷದ ದಲಿತ ಯುವಕನಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಮಂಗಳವಾರ ಇನ್ಸ್‌ಪೆಕ್ಟರ್ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ನಂತರ, ಪುನರ್ವಸತಿ ಕೇಂದ್ರದಲ್ಲಿ ಅವರ...

ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು

ಉತ್ತರ ಪ್ರದೇಶದ ಮುಜಫರ್‌ನಗರದ ಪೊಲೀಸರು, ನಗರದಲ್ಲಿ ಹೆಚ್ಚಿನ ಶಬ್ದ ಮಾಡುತ್ತಿದ್ದ ಧ್ವನಿವರ್ಧಕಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಧ್ವನಿ ಮಿತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿವಿಧ ಮಸೀದಿಗಳಿಂದ 55 ಕ್ಕೂ...

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ...

ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸ್ಮಾರ್ಟ್‌ ಫೋನ್ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ (ಡಿ.3) ಹಿಂಪಡೆದಿದೆ. ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವು, ಇಬ್ಬರು ಯೋಧರು ಹುತಾತ್ಮ

ಛತ್ತೀಸ್‌ಗಢದ ಬಿಜಾಪುರದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಆರು ಜನ ನಕ್ಸಲರು ಸಾವನ್ನಪ್ಪಿದ್ದು, ದುರದೃಷ್ಟವಶಾತ್, ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಇಬ್ಬರು ಜವಾನರು ಹುತಾತ್ಮರಾಗಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ,...

ಏಪ್ರಿಲ್ 2026 ರಿಂದ 2 ಹಂತದ ಡಿಜಿಟಲ್ ಜನಗಣತಿ: ಕೇಂದ್ರ ಸರ್ಕಾರ

2027 ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಮೊದಲ ಹಂತವು ಏಪ್ರಿಲ್ ಮತ್ತು ಸೆಪ್ಟೆಂಬರ್ 2026 ರ ನಡುವೆ ನಿಗದಿಯಾಗಿದೆ. ಎರಡನೇ ಹಂತವು ಫೆಬ್ರವರಿ...

ಬಂಗಾಳಿ ಕಾರ್ಮಿಕರನ್ನು ಒಡಿಶಾ ಪೊಲೀಸರು ಬಲವಂತವಾಗಿ ಹೊರಹಾಕಿದ್ದಾರೆ

ಒಡಿಶಾದ ನಯಾಗಢ ಜಿಲ್ಲೆಯ ಪೊಲೀಸರು ನಾಲ್ಕು ಜನ ಬಂಗಾಳಿ ಮಾತನಾಡುವ ಮುಸ್ಲಿಂ ವ್ಯಾಪಾರಿಗಳನ್ನು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸುವ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳ ಹೊರತಾಗಿಯೂ ಬಲವಂತವಾಗಿ ಹೊರಹಾಕಿದ್ದಾರೆ ಎಂದು ತೃಣಮೂಲ...

‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

ಕೇಂದ್ರ ಸರ್ಕಾರ ಎಲ್ಲಾ ಸ್ಮಾರ್ಟ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯಗೊಳಿಸಿರುವುದರಿಂದ ಜನರು ಗೌಪ್ಯತೆ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಕುರಿತು ಬುಧವಾರ (ಡಿ.3) ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ...

ಮಹಾರಾಷ್ಟ್ರ| ವರದಕ್ಷಿಣೆಯಾಗಿ ಬೈಕ್‌ ಕೊಡಲಿಲ್ಲವೆಂದು ಪತ್ನಿಗೆ ‘ತಲಾಖ್’ ನೀಡಿದ ಪತಿ

ಭಾರತೀಯ ಕಾನೂನಿನಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದ್ದರೂ, ವರದಕ್ಷಿಣೆಯಾಗಿ ಮೋಟಾರ್ ಸೈಕಲ್ (ಬೈಕ್‌) ಕೊಡದ ಕಾರಣ ತನ್ನ ಪತ್ನಿಗೆ 'ತ್ರಿವಳಿ ತಲಾಖ್' ನೀಡಿದ ಆರೋಪದ ಮೇಲೆ ಮಹಾರಾಷ್ಟ್ರದ ಭಿವಂಡಿಯ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಥಾಣೆ...

ದೆಹಲಿ ಮಹಾನಗರ ಪಾಲಿಕೆ ಉಪಚುನಾವಣೆ: 7 ವಾರ್ಡ್‌ಗಳಲ್ಲಿ ಬಿಜೆಪಿ, ಮೂರರಲ್ಲಿ ಆಪ್‌ಗೆ ಗೆಲುವು

ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಉಪಚುನಾವಣೆಯ ಮತಗಳ ಎಣಿಕೆ ಬುಧವಾರ (ಡಿಸೆಂಬರ್ 1) ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ) 12 ವಾರ್ಡ್‌ಗಳಲ್ಲಿ ಏಳು ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ....