Homeಅಂತರಾಷ್ಟ್ರೀಯ8 ಮಂದಿ ಭಾರತೀಯರಿಗೆ ವಿಧಿಸಿದ್ದ ಶಿಕ್ಷೆ ಇಳಿಸಿದ ಕತಾರ್ ಕೋರ್ಟ್‌

8 ಮಂದಿ ಭಾರತೀಯರಿಗೆ ವಿಧಿಸಿದ್ದ ಶಿಕ್ಷೆ ಇಳಿಸಿದ ಕತಾರ್ ಕೋರ್ಟ್‌

- Advertisement -
- Advertisement -

ಕತಾರ್‌ನಲ್ಲಿ ಗೂಢಚರ್ಯೆಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್‌ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿದೆ.

ಅಕ್ಟೋಬರ್‌ನಲ್ಲಿ ಕತಾರ್‌ನ ನ್ಯಾಯಾಲಯವು 8 ಭಾರತೀಯ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿತ್ತು. ಇದರ ಬೆನ್ನಲ್ಲೇ ಭಾರತ ನವೆಂಬರ್‌ನಲ್ಲಿ ಈ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಿತ್ತು.

8 ಮಾಜಿ ಭಾರತೀಯ ನೌಕಾ ಅಧಿಕಾರಿಗಳ ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿದ ಕತಾರ್‌ನ ಮೇಲ್ಮನವಿ ನ್ಯಾಯಾಲಯದ ತೀರ್ಪನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ವಾಗತಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಸಚಿವಾಲಯ, ಮೇಲ್ಮನವಿ ನ್ಯಾಯಾಲಯದ ವಿವರವಾದ ತೀರ್ಪು ಬಿಡುಗಡೆಯಾಗಬೇಕಿದೆ. ಮುಂದಿನ ನಡೆಯ ಬಗ್ಗೆ ನಿರ್ಧರಿಸಲು ಕಾನೂನು ತಂಡ ಮತ್ತು ಆರೋಪಿಗಳ ಕುಟುಂಬದ ಸದಸ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ. ಕತಾರ್‌ನಲ್ಲಿರುವ ನಮ್ಮ ರಾಯಭಾರಿ ಮತ್ತು ಇತರ ಅಧಿಕಾರಿಗಳು ಇಂದು ಮೇಲ್ಮನವಿ ನ್ಯಾಯಾಲಯಕ್ಕೆ ಕುಟುಂಬದ ಸದಸ್ಯರೊಂದಿಗೆ ಹಾಜರಿದ್ದರು. ಈ ವಿಷಯದ ಆರಂಭದಿಂದಲೂ ನಾವು  ಅಧಿಕಾರಿಗಳ ಕುಟುಂಬಕ್ಕೆ ಬೆಂಬಲಕ್ಕೆ ನಿಂತಿದ್ದೇವೆ ಮತ್ತು ಕಾನೂನು ನೆರವು ನೀಡುವುದನ್ನು ಮುಂದುವರಿಸಿದ್ದೇವೆ. ನಾವು ಕತಾರ್ ಸರಕಾರದ ಜೊತೆ ಕೂಡ ಈ ವಿಷಯದ ಬಗ್ಗೆ ಮಾತುಕತೆ ನಡೆಸುತ್ತೇವೆ. ಪ್ರಕರಣದ ಸೂಕ್ಷ್ಮತೆ ಗಮನಿಸಿ ಈ ಹಂತದಲ್ಲಿ ಯಾವುದೇ ಹೆಚ್ಚಿನ ಕಾಮೆಂಟ್ ಮಾಡುವುದು ಸೂಕ್ತವಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು.

ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿದೆ. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು.

ಇದನ್ನು ಓದಿ: ಕೆನಡಾ ಪೊಲೀಸ್ ಕಣ್ಗಾವಲಿನಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಆರೋಪಿಗಳು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...