Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...