Homeಕರ್ನಾಟಕಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ದೇಶದಲ್ಲಿರುವ ಎಲ್ಲ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರಿಗೆ ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಅವರು ಸತ್ಯದ ತಲೆ ಮೇಲೆ ಹೊಡೆದಂತೆ ಬುರುಡೆ ಬಿಡ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿಯವರು. ನೆಹರು-ಇಂದಿರಾ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಕಾಂಗ್ರೆಸ್ ಜನರ ಪ್ರಗತಿಗಾಗಿ ಹುಟ್ಟಿದ ಹೋರಾಟದ ಸಿದ್ಧಾಂತ ಮತ್ತು ಚಳವಳಿ; ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ’ ಎಂದರು.

‘ಹಿಂದೂ ಬೇರೆ – ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ’ ಎಂದು ವಾಗ್ದಾಳಿ ನಡೆಸಿದರು.

‘ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬೆಲ್ಲ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ, ಪ್ರಧಾನಿ ಆಗುತ್ತಾರೆ ಎಂಬ ಭರವಸೆ ನನಗಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಮಹಾತ್ಮ ಗಾಂಧಿಯವರು ಬ್ರಿಟಿಷರನ್ನು ಅಹಿಂಸೆಯ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು’ ಎಂದರು.

‘ಬಿಜೆಪಿ, ಜನ ಸಂಘ, ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ ಆರ್‌ಎಸ್‌ಎಸ್ ಹುಟ್ಟಿತ್ತು. ಆದರೆ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಂಗಿತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು’ ಎಂದು ಹೇಳಿದರು.

‘ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ’ ಎಂದು ಅವರು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ಆಹ್ವಾನ: ‘ಕೈ’ ನಾಯಕರ ಭಿನ್ನ ಹೇಳಿಕೆ, ಕೇರಳ ಕಾಂಗ್ರೆಸ್‌ನಲ್ಲಿ ಗೊಂದಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...