Homeಮುಖಪುಟಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

- Advertisement -
- Advertisement -

ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರು ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಗ್ಗೆ ತಮ್ಮ ಆತಂಕವನ್ನು ಪುನರುಚ್ಚರಿಸಿದ್ದು, ಇವಿಎಂಗಳನ್ನು ಸರಿಪಡಿಸದಿದ್ದರೆ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದ್ದಾರೆ.

ಇವಿಎಂಗಳಲ್ಲಿ ಬಗ್ಗೆ ನಂಬಿಕೆಯ ಕೊರತೆಯಿದೆ ಎಂದು ಹೇಳಿದ ಸ್ಯಾಮ್ ಪಿತ್ರೋಡಾ, ಈ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೂ (ಇಸಿಐ) ಪತ್ರ ಬರೆದಿರುವುದಾಗಿ ಹೇಳಿದ್ದಾರೆ. ಚುನಾವಣಾ ಆಯೋಗದ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೆ, ಆದರೆ ಅದು ಪ್ರತಿಕ್ರಿಯಿಸದಿದ್ದಾಗ ನಾನು ಮಾತನಾಡಲು ನಿರ್ಧರಿಸಿದೆ.  ಪಂಚ ರಾಜ್ಯಗಳ ಚುನಾವಣೆಗಳು ಮುಗಿದು 2024ರ ಚುನಾವಣೆ ಬರುತ್ತಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇವಿಎಂ ಬಗ್ಗೆ ನಂಬಿಕೆಯ ಕೊರತೆಯಿದೆ ಎಂದು ನಾನು ಭಾವಿಸುತ್ತೇನೆ. ಈ ವರದಿಯನ್ನು ಆಧರಿಸಿ ಚುನಾವಣಾ ಆಯೋಗವು ವಿಶ್ವಾಸವನ್ನು ಪುನರ್‌ ನಿರ್ಮಿಸಲು ಸ್ಪಂದಿಸಬೇಕು. ಮುಂದಿನ ಚುನಾವಣೆಗೆ ಮೊದಲು ಇವಿಎಂ ಸರಿಪಡಿಸಬೇಕು. ಇವಿಎಂ ಸರಿಪಡಿಸದಿದ್ದರೆ 400 ಸ್ಥಾನಗಳು ನಿಜವಾಗಬಹುದು. ಇವಿಎಂ ಸರಿಪಡಿಸಿದರೆ ಅಷ್ಟು ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇವಿಎಂಗಳ  ಪಾರದರ್ಶಕತೆ ಬಗ್ಗೆ ಪ್ರಶ್ನೆಗಳು ಹೊಸದೇನಲ್ಲ ಏಕೆಂದರೆ ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ಹಲವಾರು ಬಾರಿ ಎಲೆಕ್ಟ್ರಾನಿಕ್ ಮತಯಂತ್ರಗಳ ದುರ್ಬಳಕೆ ಬಗ್ಗೆ ಆರೋಪಿಸಿದೆ. ಚುನಾವಣಾ ಆಯೋಗ ಈ ರೀತಿಯ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದೆ ಮತ್ತು ರಾಜಕೀಯ ಪಕ್ಷಗಳು ತಮ್ಮ ವಾದವನ್ನು ಸಾಬೀತುಪಡಿಸುವಂತೆ ಹೇಳಿದೆ. ಬಿಜೆಪಿಯು ಈ ವಿಷಯದ ಬಗ್ಗೆ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡಿದ್ದು, ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಪ್ರತಿಪಕ್ಷಗಳು ಈ ರೀತಿ ಹೇಳುತ್ತಿದ್ದಾರೆ ಎಂದು ಹೇಳಿಕೊಂಡು ಬಂದಿದೆ.

ರಾಮ ಮಂದಿರದ ಬಗ್ಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಸ್ಯಾಮ್ ಪಿತ್ರೋಡಾ, ಭಾರತದ ಶೇ.60ರಷ್ಟು ಜನರು ಬಿಜೆಪಿಗೆ ಮತ ಹಾಕುವುದಿಲ್ಲ. ಆದರೆ ಪ್ರಧಾನಿ ಮೋದಿ ಎಲ್ಲರ ಪ್ರಧಾನಿಯಾಗಿದ್ದಾರೆ. ಉದ್ಯೋಗ, ಹಣದುಬ್ಬರ, ವಿಜ್ಞಾನ ಮತ್ತು ತಂತ್ರಜ್ಞಾನದಂತಹ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಹೆಚ್ಚು ಮಾತನಾಡಬೇಕು ಎಂದು ಹೇಳಿದರು.

ರಾಮ ಮಂದಿರದ ಬಗ್ಗೆ ನನ್ನ ಹೇಳಿಕೆಗಳು ತಿರುಚಲ್ಪಟ್ಟಿವೆ. ನಾನು ಧರ್ಮವು ವೈಯಕ್ತಿಕ ವಿಷಯ ಎಂದು ಹೇಳುತ್ತಿದ್ದೇನೆ. ಅದನ್ನು ಜನರಿಗೆ ಬಿಡಿ, ಜನರು ತಮಗೆ ಬೇಕಾದುದನ್ನು ಆಚರಿಸಬೇಕು. ರಾಜಕೀಯಕ್ಕೆ ಧರ್ಮವನ್ನು ಎಳೆದು ತರುವುದು ಬೇಡ ಎಂದು ಅವರು ರಾಮ ಮಂದಿರದ ಕುರಿತು ತಮ್ಮ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದಾರೆ.  ರಾಮ ಮಂದಿರ ನಿಜವಾದ ಸಮಸ್ಯೆಯೋ ಅಥವಾ ಅದಕ್ಕಿಂತ ನಿರುದ್ಯೋಗ, ಹಣದುಬ್ಬರ ಸಮಸ್ಯೆಯೋ ಎಂದು ಇದಕ್ಕೂ ಮೊದಲು ಸ್ಯಾಮ್ ಪಿತ್ರೋಡಾ ಪ್ರಶ್ನಿಸಿದ್ದರು.

ಇದನ್ನು ಓದಿ: ನಿರುದ್ಯೋಗ, ಹಣದುಬ್ಬರಕ್ಕಿಂತ ರಾಮ ಮಂದಿರ ನೈಜ ಸಮಸ್ಯೆಯೇ: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...