Homeಮುಖಪುಟಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಬಿಜೆಪಿ ಕಳ್ಳರ ಪಕ್ಷ ಎಂದು ಮಮತಾ ಬ್ಯಾನರ್ಜಿ ಹೇಳಿದ್ದು, ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಏಜೆನ್ಸಿಗಳನ್ನು ಬಳಸಿಕೊಂಡು ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಪ.ಬಂಗಾಳದ ಉತ್ತರ 24-ಪರಗಣಗಳ ಚಕ್ಲಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್‌ ಪಕ್ಷದ ಕಾರ್ಯಾಗಾರದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ,  ಬಿಜೆಪಿ ‘ಇಡಿ’ ಮತ್ತು ‘ಸಿಬಿಐ’ ಬಳಸಿ ಹಣ ಲೂಟಿ ಮಾಡುತ್ತಿದೆ. ವಶಪಡಿಸಿಕೊಂಡ ಎಲ್ಲ ಹಣವನ್ನು ಬಿಜೆಪಿಯ ಜೇಬಿಗೆ ಹಾಕಲಾಗುತ್ತಿದೆ. ಕೋವಿಡ್ ಪರಿಸ್ಥಿತಿಯ ಸಮಯದಲ್ಲಿ ಅವರು ಪಿಎಂ ಕೇರ್ಸ್ ಫಂಡ್ ಹೆಸರಿನಲ್ಲಿ ಹಣವನ್ನು ಸಂಗ್ರಹಿಸಿದರು. ಆದರೆ ಅವರು ಎಷ್ಟು ಹಣವನ್ನು ಸಂಗ್ರಹಿಸಿದರು ಎಂಬುದು ಯಾರಿಗೂ ತಿಳಿದಿಲ್ಲ. ಪ್ರತಿ ಯೋಜನೆಯಲ್ಲಿ ಬಿಜೆಪಿ ನಾಯಕರು ಎಷ್ಟು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬುದು ನಿಮಗೆ ತಿಳಿದಿರಬೇಕು. ಆದರೆ ಅವರು ಭ್ರಷ್ಟಾಚಾರ ಎಂದು ತೃಣಮೂಲ ಕಾಂಗ್ರೆಸ್‌ನತ್ತ ಬೆರಳು ತೋರಿಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು “ಕಳ್ಳರ ಪಕ್ಷ” ಎಂದು ಕರೆಯುವುದರ ಹಿಂದಿನ ಕಾರಣಗಳನ್ನು ವಿವರಿಸಿದ  ಮಮತಾ ಬ್ಯಾನರ್ಜಿ,  ಪಕ್ಷಕ್ಕಾಗಿ ಕೆಲಸ ಮಾಡದಂತೆ ಬಾಲು (ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್) ಅವರನ್ನು ಬಂಧಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಸಾಧ್ಯವಾಗದಂತೆ ಅವರನ್ನು ಜೈಲಿನಲ್ಲಿಟ್ಟರು. ಆದರೆ ಹಣ ಲೂಟಿ ಮಾಡಿದ ಯಾವುದೇ ಬಿಜೆಪಿ ನಾಯಕನನ್ನು ಬಂಧಿಸಲಾಗಿಲ್ಲ ಎಂದು ಮಮತಾ ಆರೋಪಿಸಿದ್ದಾರೆ.

ತೃಣಮೂಲ ನಾಯಕರನ್ನು “ಚೋರ್” ಎಂದು ಕರೆಯುವುದರ ವಿರುದ್ಧ ಸುವೇದು ಅಧಿಕಾರಿಯನ್ನು ಹೆಸರಿಸದೆ ವಾಗ್ಧಾಳಿ ನಡೆಸಿದ ಮಮತಾ ಬ್ಯಾನರ್ಜಿ, ದೇಶದ್ರೋಹಿಗಳು ಯಾವುದೇ ಚಿಕ್ಕ ಕಳ್ಳರು ಅಲ್ಲ, ಅವರು ದರೋಡೆಕೋರರು. ನೀವು ಅವರನ್ನು ಕಂಡಾಗ, ‘ಚೋರ್, ಚೋರ್’ ಎಂದು ಕೂಗಿ ಎಂದು ಟಿಎಂಸಿ ಕಾರ್ಯಕರ್ತರಿಗೆ ಹೇಳಿದ್ದಾರೆ.

ಅವರು ತೃಣಮೂಲ ಕಾರ್ಯಕರ್ತರನ್ನು ಒಗ್ಗಟ್ಟಿನಿಂದ ಇರುವಂತೆ ಕೇಳಿಕೊಂಡರು. ನಾನು ಯಾವುದೇ ಸ್ಥಳೀಯ ಮಟ್ಟದ ಜಗಳಕ್ಕೆ ಅವಕಾಶ ನೀಡುವುದಿಲ್ಲ. ನಾನು ಜನರಿಗಾಗಿ 365 ದಿನ ಕೆಲಸ ಮಾಡುತ್ತೇನೆ. ಆದರೆ ಯಾರಾದರೂ ತನ್ನನ್ನು ತಾನು ದೊಡ್ಡ ನಾಯಕ ಎಂದು ಪರಿಗಣಿಸಿದರೆ ಮತ್ತು ಪಕ್ಷಕ್ಕಿಂತ ಹೆಚ್ಚಾಗಿ ತನ್ನನ್ನು ತಾನು ಪ್ರೀತಿಸಿದರೆ, ಅವನು ಅಥವಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ತೃಣಮೂಲವು ಜನ ಸೇವೆ ಮಾಡಲು, ಸ್ವ ಸೇವೆಗೆ ಅಲ್ಲ ಎಂದು ಅವರು ಕಾರ್ಯಕರ್ತರಿಗೆ ಹೇಳಿದ್ದಾರೆ.

ಜಿಲ್ಲೆಯ ಕೆಲವು ಪ್ರಮುಖ ನಾಯಕರ ನಡುವೆ ಇತ್ತೀಚೆಗೆ ನಡೆದ ಬಹಿರಂಗ ಸಂಘರ್ಷದ ಘಟನೆಗಳ ಬಗ್ಗೆ ಸ್ಪಷ್ಟವಾದ ಉಲ್ಲೇಖವನ್ನು ನೀಡದೆ, ಎಲ್ಲರಿಗೂ ಮಮತಾ ಎಚ್ಚರಿಕೆ ನೀಡಿದರು. ಕೆಲವು ಪ್ರದೇಶಗಳಲ್ಲಿ, ಕೆಲವು ನಾಯಕರು ತಮ್ಮನ್ನು ತಾವು ದೊಡ್ಡವರು ಎಂದು ಭಾವಿಸಲು ಪ್ರಾರಂಭಿಸಿದರು ಎಂದು ನಾನು ಕೇಳಿದ್ದೇನೆ.  ಅವರು ತಮ್ಮ ಹಿತಾಸಕ್ತಿಗಳಿಗಾಗಿ ಪಕ್ಷವನ್ನು ಮರೆತಿದ್ದಾರೆ. ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ ಇತರರನ್ನು ಕಡೆಗಣಿಸಬಾರದು. ತೃಣಮೂಲ ಮುಖಂಡರು ಹಾಗೂ ಬೆಂಬಲಿಗರು ಹಿರಿಯರು ಹಾಗೂ ಹಿರಿಯ ಮುಖಂಡರನ್ನು ಕಡೆಗಣಿಸದೆ ಸಂಘಟಿತರಾಗಿ ವಿದ್ಯಾರ್ಥಿಗಳು ಹಾಗೂ ಯುವಕರನ್ನು ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಗೆ ತರಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್ ಅವರನ್ನು ಪಡಿತರ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದ ಬಳಿಕ ಕಳೆದೆರಡು ತಿಂಗಳುಗಳಲ್ಲಿ ಬಂಗಾಳ ರಾಜಕೀಯದಲ್ಲಿ ‘ಚೋರ್’ ಪದದ ವ್ಯಾಪಕ ಬಳಕೆ ಕಂಡು ಬಂದಿದೆ. ಬಿಜೆಪಿ ಕಾರ್ಯಕರ್ತರು, ವಿಶೇಷವಾಗಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಮಮತಾ ಸೇರಿದಂತೆ ತೃಣಮೂಲ ನಾಯಕರ ಮೇಲೆ ಪದೇ ಪದೇ ಈ ಪದ ಬಳಕೆ ಮಾಡಿದ್ದರು.

ನಮ್ಮ ನಾಯಕರನ್ನು ಕಳ್ಳರು ಎಂದು ಕರೆಯುವ ಬಿಜೆಪಿಯ ಸಂಘಟಿತ ಪ್ರಚಾರದ ವಿರುದ್ಧ ‘ಚೋರ್‌’ ಪದವನ್ನು ಪ್ರತಿಯಾಗಿ ಬಳಸಲು ದೀದಿ ನಮಗೆ ಸಲಹೆ ನೀಡಿದ್ದಾರೆ. ಇದನ್ನು ರಾಜ್ಯಾದ್ಯಂತ ಬಳಸಲಾಗುವುದು ಎಂದು ಸಭೆಯ ನಂತರ ತೃಣಮೂಲ ನಾಯಕರೊಬ್ಬರು ಹೇಳಿದ್ದಾರೆ.

ಮಾಟುವಾ ಸಮುದಾಯದ ಹೆಚ್ಚಿನ ಜನ ಪ್ರಾಬಲ್ಯವಿರುವ ಉತ್ತರ 24-ಪರಗಣ ಜಿಲ್ಲೆಯಲ್ಲಿ ಬಿಜೆಪಿ ಈಗಾಗಲೇ ಚುನಾವಣೆ ಪ್ರಚಾರ ಮಾಡುತ್ತಿದೆ. ಮಟುವಾ ಸಮುದಾಯದ ಮತದ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇದಕ್ಕೆ ಪ್ರತಿಯಾಗಿ ಉತ್ತರ-24 ಪರಗಣಗಳಲ್ಲಿ ತೃಣಮೂಲ ಸಂಘಟನೆಯನ್ನು ನೋಡಿಕೊಳ್ಳಲು, ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಅವರಿಗೆ ವರದಿಯನ್ನು ಸಲ್ಲಿಸಲು ನಿರ್ಮಲ್ ಘೋಷ್ ನೇತೃತ್ವದ 20 ಸದಸ್ಯರ ಕೋರ್ ಕಮಿಟಿಯನ್ನು ಮಮತಾ ರಚಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...