HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...