Homeಕರ್ನಾಟಕಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆ!

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆ!

- Advertisement -
- Advertisement -

ಚಿತ್ರದುರ್ಗದ ಚಳ್ಳಕೆರೆ ಗೇಟ್‍ ಸಮೀಪದ ಪಾಳು ಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ರಾತ್ರಿ ವೇಳೆಗೆ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವಗಳಿವೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕೆ ಪೊಲೀಸರು ಮತ್ತು ವಿಧಿ ವಿಜ್ಞಾನ ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಈ ವೇಳೆ ಮನೆಯಲ್ಲಿ ಐದು ಅಸ್ತಿಪಂಜರಗಳು ಮತ್ತು ತಲೆಬುರುಡೆಗಳು ಪತ್ತೆಯಾಗಿದೆ. ನಾಲ್ಕು ಅಥವಾ ಐದು ಜನ ಮೃತಪಟ್ಟಿರುವ ಬಗ್ಗೆ ಪೊಲೀಶರು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದು ಐಜಿಪಿ‌ ತ್ಯಾಗರಾಜನ್, ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ, ಎಎಸ್ಪಿ  ಕುಮಾರಸ್ವಾಮಿ, ಡಿವೈಎಸ್‍ಪಿ ಅನಿಲ್ ಕುಮಾರ್, ಸಿಪಿಐ ನಯಿಂ ಸೇರಿದಂತೆ ಪೊಲೀಸರು ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ.

ಜಗನ್ನಾಥ ರೆಡ್ಡಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಮೃತಪಟ್ಟಿರುವ ದೇಹಗಳು ಯಾರದು ಎನ್ನುವ ಖಚಿತ ಮಾಹಿತಿ ಇಲ್ಲ. ಕಳೆದ ಕೆಲ ವರ್ಷಗಳಿಂದ ಜಗನ್ನಾಥ ರೆಡ್ಡಿ  ಕುಟುಂಬ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎನ್ನಲಾಗಿದೆ.

ನಾಲ್ಕು ವರ್ಷಗಳಿಂದ ಮನೆಯ ಬಾಗಿಲು ತೆರೆದಿಲ್ಲ!

ನಿವೃತ್ತ ಎಂಜಿನಿಯರ್ ಜಗನ್ನಾಥ ರೆಡ್ಡಿ (70), ಪತ್ನಿ ಪ್ರೇಮಾವತಿ (60), ಮಗಳು ತ್ರಿವೇಣಿ (42), ಮಗ ಪುತ್ರರಾದ ಕೃಷ್ಣಾ ರೆಡ್ಡಿ (40) ಹಾಗೂ ನರೇಂದ್ರ ರೆಡ್ಡಿ (38) ಅವರು ಈ ಮನೆಯಲ್ಲಿ ವಾಸವಿದ್ದರು. ಆದರೆ ಕಳೆದ ನಾಲ್ಕು ವರ್ಷಗಳಿಂದ ಈ ಮನೆಯ ಬಾಗಿಲು ತೆರೆದಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ದೊಡ್ಡಸಿದ್ದವ್ವನಹಳ್ಳಿ ಮೂಲದ ಜಗನ್ನಾಥ ರೆಡ್ಡಿ ಅವರಿಗೆ ಮೂವರು ಗಂಡು ಮಕ್ಕಳು, ಓರ್ವ ಪುತ್ರಿ ಇದ್ದರು. ಅವರಲ್ಲಿ ಯಾರಿಗೂ ಮದುವೆ ಆಗಿರಲಿಲ್ಲ. ಹಿರಿಯ ಮಗ ಮಂಜುನಾಥ ರೆಡ್ಡಿ ಎಂಬುವವರು ಮೊದಲೇ ಮೃತಪಟ್ಟಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಅಕ್ಕಪಕ್ಕದ ಮನೆಯವರು 3 ವರ್ಷಗಳ ಮೊದಲು ಮನೆಯಿಂದ ವಾಸನೆ ಬರುತ್ತಿತ್ತು. ಆಗ ಇಲಿ ಸತ್ತಿರಬಹುದು ಎಂದು ಭಾವಿಸಲಾಗಿತ್ತು. ಕೆಲ ದಿನ ವಾಸನೆ ಬಂದು ನಿಂತಿತ್ತು. ಆ ನಂತರ ಯಾರೂ ಆ ಮನೆಯ ಕಡೆಗೆ ಗಮನ ಹರಿಸಿರಲಿಲ್ಲ ಎಂದು ಹೇಳಿದ್ದಾರೆ.

ಮನೆಯ ಮಾಲೀಕರಾದ ಜಗನ್ನಾಥ ರೆಡ್ಡಿ ಅವರ ಸಂಬಂಧಿಕ ಪವನ್ ಕುಮಾರ್ ಅವರು ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. ಇಲ್ಲಿ ಪತ್ತೆಯಾಗಿರುವ ಅಸ್ಥಿ ಪಂಜರಗಳು ಜಗನ್ನಾಥ ರೆಡ್ಡಿ ಮತ್ತು ಕಟುಂಬದ್ದ ಅನುಮಾನವೂ ಇದೆ. 3 ವರ್ಷಗಳ ಹಿಂದೆ ಮೃತಪಟ್ಟರುವ ಶಂಕೆ ಕಾಣಿಸುತ್ತಿದೆ. ಈ ಸಾವಿನ ಬಗ್ಗೆ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಘಟನೆ ನಡೆದ ಮನೆಯ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿದೆ. ಮನೆಯ ಸುತ್ತಮುತ್ತ ಬ್ಯಾರಿಕೇಡ್ ಹಾಕಿ, ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

 

ಈ ಬಗ್ಗೆ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಅವರು, ‘ಒಂದು ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿರುವ ಬಗ್ಗೆ ವರದಿ ಬಂದಿದೆ, ಅವರು ಎಷ್ಟು ದಿನದಿಂದ ಇದ್ದಾರೆ, ಅವರು ಯಾರು, ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಪೊಲೀಸರು ಈಗಾಗಲೇ ತನಿಖೆ ಪ್ರಾರಂಭಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಲಾಗಿದೆ. ಅಲ್ಲದೆ ಮನೆ ಯಾರಿಗೆ ಸೇರಿದ್ದು, ಯಾರು ವಾಸವಿದ್ದರು ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...