Homeಮುಖಪುಟದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

ದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

- Advertisement -
- Advertisement -

ಮಾನವ ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಾಲ್ವರು ಏರ್ ಇಂಡಿಯಾ ಸಿಬ್ಬಂದಿ ಮತ್ತು ಯುಕೆ ವಿಮಾನ ಏರಲು ಪ್ರಯತ್ನಿಸುತ್ತಿದ್ದ ಭಾರತೀಯ ಪ್ರಯಾಣಿಕನನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ.

ಅನುಮಾನಾಸ್ಪದ ವರ್ತನೆ ಕಂಡು ಬಂದ ಹಿನ್ನೆಲೆ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತಿಳಿಸಿದೆ.

ಯುಕೆಗೆ ತೆರಳಲು ಸಿದ್ದನಾಗಿದ್ದ ದಿಲ್ಜೋತ್ ಸಿಂಗ್ ಎಂಬ ವ್ಯಕ್ತಿಯ ಪ್ರಯಾಣದ ದಾಖಲೆಗಳು ಇಮಿಗ್ರೇಶನ್‌ ಅಧಿಕಾರಿಗಳಿಗೆ ಸಂಶಯಾಸ್ಪದವಾಗಿ ಕಂಡು ಬಂದಿತ್ತು. ಹಾಗಾಗಿ, ಅಧಿಕಾರಿಗಳು ಆತ ವಿಮಾನ ಹತ್ತುವುದಕ್ಕೆ ಅವಕಾಶ ನಿರಕಾರಿಸಿದ್ದರು. ವಿಮಾನಯಾನ ಸಿಬ್ಬಂದಿಯೊಂದಿಗೆ ಆತನ ಕುರಿತು ಸ್ಪಷ್ಟಪಡಿಸುವಂತೆ ಸೂಚಿಸಿದ್ದರು.

ಪ್ರಯಾಣಿಕ ದಿಲ್ಜೋತ್ ಸಿಂಗ್, ದೆಹಲಿ ವಿಮಾನಯಾನ ಸಿಬ್ಬಂದಿಯನ್ನು ಸಂಪರ್ಕಿಸುವ ಬದಲು, ಏರ್ ಇಂಡಿಯಾ ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ (ಎಐಎಸ್‌ಎಟಿಎಸ್‌) ಸಿಬ್ಬಂದಿಯಿಂದ ಸಹಾಯ ಕೋರಿದ್ದರು. ಇದು ಅಧಿಕಾರಿಗಳ ಅನುಮಾನ ಹೆಚ್ಚಿಸಿತ್ತು.

ತಕ್ಷಣ ಎಚ್ಚೆತ್ತ ಸಿಐಎಸ್ಎಫ್ ಸಿಬ್ಬಂದಿ, ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಸಹಯೋಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್‌ನಲ್ಲಿದ್ದ ಏರ್ ಇಂಡಿಯಾ ಸಿಬ್ಬಂದಿ ಅಮಾನ್ಯ ದಾಖಲೆಗಳ ಮೂಲಕ ಸಿಂಗ್ ಮತ್ತು ಇತರ ಇಬ್ಬರ ಬೋರ್ಡಿಂಗ್ ಪ್ರಕ್ರಿಯೆ ಮುಗಿಸಿರುವುದು ಸಿಸಿಟಿವಿ ದೃಶ್ಯಗಳಿಂದ ಬಯಲಾಗಿತ್ತು.

ಈ ಹಿನ್ನೆಲೆ ದಿಲ್ಜೋತ್ ಸಿಂಗ್ ಜೊತೆಗೆ ರೋಹನ್ ವರ್ಮಾ, ಮೊಹಮ್ಮದ್ ಜಹಾಂಗೀರ್, ಯಶ್ ಮತ್ತು ಅಕ್ಷಯ್ ನಾರಂಗ್ ಎಂದು ಗುರುತಿಸಲಾದ ಸಿಬ್ಬಂದಿಯನ್ನು ಬಂಧಿಸಿದ ಸಿಐಎಸ್‌ಎಫ್ ಅಧಿಕಾರಿಗಳು, ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಎಐಎಸ್‌ಎಟಿಎಸ್‌ ಸಿಇಒ ಸಂಜಯ್ ಗುಪ್ತಾ, “ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಸಿಐಎಸ್‌ಎಫ್ ಸಹಯೋಗದಲ್ಲಿ ಮಾನವ ಕಳ್ಳಸಾಗಣೆ ಯತ್ನವನ್ನು ತಡೆಯುವಲ್ಲಿ ಕಂಪನಿಯು ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಹೇಳಿದ್ದಾರೆ.

ಮೂವರು ವ್ಯಕ್ತಿಗಳು ಅಕ್ರಮವಾಗಿ ಯುಕೆಗೆ ತೆರಳಲು ಪ್ರಯತ್ನಿಸಿದ್ದರು. ಕಾರ್ಯಾಚರಣೆಯ ಸಮಯದಲ್ಲಿ ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡಿದ್ದ ನಮ್ಮ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಗುಪ್ತಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಕಾರ್ಯಾಚರಣೆಗಳ ಸಮಗ್ರತೆಯನ್ನು ಕಾಪಾಡಿಕೊಳ್ಳಲು, ಸುರಕ್ಷತೆ, ಕಾನೂನುಬದ್ಧತೆ ಮತ್ತು ನೈತಿಕ ನಡವಳಿಕೆಯ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯಲು ಸಂಸ್ಥೆಯು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಟಾಟಾ ಒಡೆತನದ ಏರ್ ಇಂಡಿಯಾ ಮತ್ತು ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ ಜಂಟಿಯಾಗಿ ಬ್ಯಾಗೇಜ್ ನಿರ್ವಹಣೆ ಮತ್ತು ವಿಮಾನ ನಿರ್ವಹಣೆ ಸೇರಿದಂತೆ ವಿವಿಧ ವಿಮಾನ ನಿಲ್ದಾಣ ಸೇವೆಗಳನ್ನು ಒದಗಿಸುತ್ತಿದೆ.

ಈ ವಾರದ ಆರಂಭದಲ್ಲಿ ಸುಮಾರು 300 ಭಾರತೀಯರನ್ನು ಹೊತ್ತ ವಿಮಾನವನ್ನು ಮಾನವ ಕಳ್ಳ ಸಾಗಾಣಿಕೆಯ ಸಂಶಯದ ಮೇಲೆ ಫ್ರಾನ್ಸ್ ಅಧಿಕಾರಿಗಳು ತಡೆದಿದ್ದರು. ಆ ಬಳಿಕ ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ನಿಗಾ ವಹಿಸಲಾಗಿದೆ.

ಇದನ್ನೂ ಓದಿ : ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...