Homeಮುಖಪುಟದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

ದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

- Advertisement -
- Advertisement -

ಮಾನವ ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಾಲ್ವರು ಏರ್ ಇಂಡಿಯಾ ಸಿಬ್ಬಂದಿ ಮತ್ತು ಯುಕೆ ವಿಮಾನ ಏರಲು ಪ್ರಯತ್ನಿಸುತ್ತಿದ್ದ ಭಾರತೀಯ ಪ್ರಯಾಣಿಕನನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ.

ಅನುಮಾನಾಸ್ಪದ ವರ್ತನೆ ಕಂಡು ಬಂದ ಹಿನ್ನೆಲೆ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತಿಳಿಸಿದೆ.

ಯುಕೆಗೆ ತೆರಳಲು ಸಿದ್ದನಾಗಿದ್ದ ದಿಲ್ಜೋತ್ ಸಿಂಗ್ ಎಂಬ ವ್ಯಕ್ತಿಯ ಪ್ರಯಾಣದ ದಾಖಲೆಗಳು ಇಮಿಗ್ರೇಶನ್‌ ಅಧಿಕಾರಿಗಳಿಗೆ ಸಂಶಯಾಸ್ಪದವಾಗಿ ಕಂಡು ಬಂದಿತ್ತು. ಹಾಗಾಗಿ, ಅಧಿಕಾರಿಗಳು ಆತ ವಿಮಾನ ಹತ್ತುವುದಕ್ಕೆ ಅವಕಾಶ ನಿರಕಾರಿಸಿದ್ದರು. ವಿಮಾನಯಾನ ಸಿಬ್ಬಂದಿಯೊಂದಿಗೆ ಆತನ ಕುರಿತು ಸ್ಪಷ್ಟಪಡಿಸುವಂತೆ ಸೂಚಿಸಿದ್ದರು.

ಪ್ರಯಾಣಿಕ ದಿಲ್ಜೋತ್ ಸಿಂಗ್, ದೆಹಲಿ ವಿಮಾನಯಾನ ಸಿಬ್ಬಂದಿಯನ್ನು ಸಂಪರ್ಕಿಸುವ ಬದಲು, ಏರ್ ಇಂಡಿಯಾ ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ (ಎಐಎಸ್‌ಎಟಿಎಸ್‌) ಸಿಬ್ಬಂದಿಯಿಂದ ಸಹಾಯ ಕೋರಿದ್ದರು. ಇದು ಅಧಿಕಾರಿಗಳ ಅನುಮಾನ ಹೆಚ್ಚಿಸಿತ್ತು.

ತಕ್ಷಣ ಎಚ್ಚೆತ್ತ ಸಿಐಎಸ್ಎಫ್ ಸಿಬ್ಬಂದಿ, ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಸಹಯೋಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್‌ನಲ್ಲಿದ್ದ ಏರ್ ಇಂಡಿಯಾ ಸಿಬ್ಬಂದಿ ಅಮಾನ್ಯ ದಾಖಲೆಗಳ ಮೂಲಕ ಸಿಂಗ್ ಮತ್ತು ಇತರ ಇಬ್ಬರ ಬೋರ್ಡಿಂಗ್ ಪ್ರಕ್ರಿಯೆ ಮುಗಿಸಿರುವುದು ಸಿಸಿಟಿವಿ ದೃಶ್ಯಗಳಿಂದ ಬಯಲಾಗಿತ್ತು.

ಈ ಹಿನ್ನೆಲೆ ದಿಲ್ಜೋತ್ ಸಿಂಗ್ ಜೊತೆಗೆ ರೋಹನ್ ವರ್ಮಾ, ಮೊಹಮ್ಮದ್ ಜಹಾಂಗೀರ್, ಯಶ್ ಮತ್ತು ಅಕ್ಷಯ್ ನಾರಂಗ್ ಎಂದು ಗುರುತಿಸಲಾದ ಸಿಬ್ಬಂದಿಯನ್ನು ಬಂಧಿಸಿದ ಸಿಐಎಸ್‌ಎಫ್ ಅಧಿಕಾರಿಗಳು, ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಎಐಎಸ್‌ಎಟಿಎಸ್‌ ಸಿಇಒ ಸಂಜಯ್ ಗುಪ್ತಾ, “ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಸಿಐಎಸ್‌ಎಫ್ ಸಹಯೋಗದಲ್ಲಿ ಮಾನವ ಕಳ್ಳಸಾಗಣೆ ಯತ್ನವನ್ನು ತಡೆಯುವಲ್ಲಿ ಕಂಪನಿಯು ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಹೇಳಿದ್ದಾರೆ.

ಮೂವರು ವ್ಯಕ್ತಿಗಳು ಅಕ್ರಮವಾಗಿ ಯುಕೆಗೆ ತೆರಳಲು ಪ್ರಯತ್ನಿಸಿದ್ದರು. ಕಾರ್ಯಾಚರಣೆಯ ಸಮಯದಲ್ಲಿ ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡಿದ್ದ ನಮ್ಮ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಗುಪ್ತಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಕಾರ್ಯಾಚರಣೆಗಳ ಸಮಗ್ರತೆಯನ್ನು ಕಾಪಾಡಿಕೊಳ್ಳಲು, ಸುರಕ್ಷತೆ, ಕಾನೂನುಬದ್ಧತೆ ಮತ್ತು ನೈತಿಕ ನಡವಳಿಕೆಯ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯಲು ಸಂಸ್ಥೆಯು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಟಾಟಾ ಒಡೆತನದ ಏರ್ ಇಂಡಿಯಾ ಮತ್ತು ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ ಜಂಟಿಯಾಗಿ ಬ್ಯಾಗೇಜ್ ನಿರ್ವಹಣೆ ಮತ್ತು ವಿಮಾನ ನಿರ್ವಹಣೆ ಸೇರಿದಂತೆ ವಿವಿಧ ವಿಮಾನ ನಿಲ್ದಾಣ ಸೇವೆಗಳನ್ನು ಒದಗಿಸುತ್ತಿದೆ.

ಈ ವಾರದ ಆರಂಭದಲ್ಲಿ ಸುಮಾರು 300 ಭಾರತೀಯರನ್ನು ಹೊತ್ತ ವಿಮಾನವನ್ನು ಮಾನವ ಕಳ್ಳ ಸಾಗಾಣಿಕೆಯ ಸಂಶಯದ ಮೇಲೆ ಫ್ರಾನ್ಸ್ ಅಧಿಕಾರಿಗಳು ತಡೆದಿದ್ದರು. ಆ ಬಳಿಕ ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ನಿಗಾ ವಹಿಸಲಾಗಿದೆ.

ಇದನ್ನೂ ಓದಿ : ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...