Homeಮುಖಪುಟಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

ಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

- Advertisement -
- Advertisement -

ತಮ್ಮ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವದಂದು ಎರಡು ಪ್ರಮುಖ ಘೋಷಣೆಗಳನ್ನು ಮಾಡಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ‘ವೃದ್ಧಾಪ್ಯ ಪಿಂಚಣಿಗೆ ಅರ್ಹತಾ ವಯಸ್ಸನ್ನು 60ರಿಂದ 50ಕ್ಕೆ ಇಳಿಸಲಾಗುವುದು ಮತ್ತು ರಾಜ್ಯದಲ್ಲಿ ಸ್ಥಾಪನೆಯಾಗುವ ಕಂಪನಿಗಳಲ್ಲಿ ಶೇ.75ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡಲಾಗುವುದು’ ಎಂದು ಹೇಳಿದ್ದಾರೆ.

ರಾಜ್ಯದ ಆದಿವಾಸಿಗಳು ಮತ್ತು ದಲಿತರು 50 ವರ್ಷಗಳನ್ನು ತಲುಪಿದ ನಂತರ ಪಿಂಚಣಿ ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ. ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರಾಂಚಿಯ ಮೊರಾಬಾಡಿ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸೋರೆನ್ ಈ ಘೋಷಣೆ ಮಾಡಿದರು.

ಆದಿವಾಸಿಗಳು ಮತ್ತು ದಲಿತರಿಗೆ 50 ವರ್ಷ ವಯಸ್ಸಾದ ಮೇಲೆ ಪಿಂಚಣಿ ಸೌಲಭ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಅವರಲ್ಲಿ ಮರಣ ಪ್ರಮಾಣವು ಅಧಿಕವಾಗಿದೆ ಮತ್ತು 60 ವರ್ಷಗಳ ನಂತರ ಅವರಿಗೆ ಉದ್ಯೋಗಗಳು ಸಿಗುವುದಿಲ್ಲ ಎಂದು ಅವರು ಹೇಳಿದರು.

2000ರಲ್ಲಿ ಜಾರ್ಖಂಡ್ ರಚನೆಯಾದ ನಂತರದ 20 ವರ್ಷಗಳಲ್ಲಿ ಕೇವಲ 16 ಲಕ್ಷ ಜನರು ಮಾತ್ರ ಪಿಂಚಣಿ ಪ್ರಯೋಜನಗಳನ್ನು ಪಡೆದಿದ್ದಾರೆ. ಆದರೆ, ಅವರ ಸರ್ಕಾರವು 36 ಲಕ್ಷ ಜನರಿಗೆ ಪಿಂಚಣಿ ನೀಡಿದ್ದು, ಎಲ್ಲರೂ ಹೆಚ್ಚಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರು. ನಮ್ಮ ಸರ್ಕಾರದ ನಾಲ್ಕು ವರ್ಷಗಳಲ್ಲಿ 60 ವರ್ಷ ಮೇಲ್ಪಟ್ಟ 36 ಲಕ್ಷ ಜನರಿಗೆ, 18 ವರ್ಷ ಮೇಲ್ಪಟ್ಟ ವಿಧವೆಯರಿಗೆ ಮತ್ತು ದೈಹಿಕ ವಿಕಲಚೇತನರಿಗೆ ಪಿಂಚಣಿ ಸೌಲಭ್ಯಗಳನ್ನು ನೀಡಿದ್ದೇವೆ ಎಂದರು.

ತಮ್ಮ ಸರ್ಕಾರವು ಜನರ ಕಲ್ಯಾಣಕ್ಕಾಗಿ ಅವಿರತವಾಗಿ ಕೆಲಸ ಮಾಡುತ್ತಿದೆ ಮತ್ತು ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವ ತಮ್ಮ ಸರ್ಕಾರದ ‘ಆಪ್‌ಕಿ ಯೋಜನೆ, ಆಪ್‌ಕಿ ಸರ್ಕಾರ್, ಆಪ್‌ಕಿ ದ್ವಾರ’ ಸೇರಿದಂತೆ ಹೆಚ್ಚಿನ ಸಂಖ್ಯೆಯ ಯೋಜನೆಗಳನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ ಎಂದು ಸೋರೆನ್ ಪ್ರತಿಪಾದಿಸಿದರು.

ಜಾರ್ಖಂಡ್ ದೇಶದ ಅತ್ಯಂತ ಬಡ ರಾಜ್ಯವಾಗಿದ್ದು, ಕೋವಿಡ್-19 ನಂತರದ ಸಂಕಷ್ಟಗಳು ಮತ್ತು ಬರಗಾಲದೊಂದಿಗೆ ಹೋರಾಡುತ್ತಿದೆ. ಅದರ ಹೊರತಾಗಿಯೂ ರಾಜ್ಯ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸೋರೆನ್ ಹೇಳಿದ್ದಾರೆ. ಜಾರ್ಖಂಡ್‌ನಂತಹ ಬಡ ರಾಜ್ಯಗಳು ಇತರ ರಾಜ್ಯಗಳಿಗೆ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕವನ್ನು ಪೂರೈಸುತ್ತವೆ. ಸಾಂಕ್ರಾಮಿಕ ಸಮಯದಲ್ಲಿ ಬಡ ಕಾರ್ಮಿಕರನ್ನು ಉಳಿಸುವಾಗಲೇ ನಮ್ಮ ಇಬ್ಬರು ಮಂತ್ರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಹಿಂದಿನ ಬಿಜೆಪಿ ಆಡಳಿತದ ಬಗ್ಗೆ ವ್ಯಂಗ್ಯವಾಡಿದ ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥರು, ‘ಡಬಲ್ ಇಂಜಿನ್ ಸರ್ಕಾರವು ಎಲ್ಲವನ್ನೂ ನಾಶಪಡಿಸಿದೆ. ಅದರ ಅಧಿಕಾರಾವಧಿಯಲ್ಲಿ ರೈತರು ಸಾವನ್ನಪ್ಪಿದ್ದಾರೆ’ ಎಂದು ಹೇಳಿದರು.

ತಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಅವರು, ಜಾರ್ಖಂಡ್ ಅನ್ನು ದೆಹಲಿ ಅಥವಾ ರಾಜ್ಯದ ಕೇಂದ್ರ ಕಚೇರಿಯಿಂದ ಅಲ್ಲ, ಇಲ್ಲಿನ ಹಳ್ಳಿಗಳಿಂದ ಆಡಳಿತ ನಡೆಸಲಾಗುವುದು ಎಂದರು.

ಇದನ್ನೂ ಓದಿ; ರಾಜ್ಯಸಭೆ ಎಎಪಿ ನಾಯಕರಾಗಿ ಚಡ್ಡಾ ನೇಮಕಕ್ಕೆ ಒಪ್ಪದ ಜಗದೀಪ್ ಧನ್ಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...