Homeಮುಖಪುಟಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

ಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

- Advertisement -
- Advertisement -

ತಮ್ಮ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವದಂದು ಎರಡು ಪ್ರಮುಖ ಘೋಷಣೆಗಳನ್ನು ಮಾಡಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ‘ವೃದ್ಧಾಪ್ಯ ಪಿಂಚಣಿಗೆ ಅರ್ಹತಾ ವಯಸ್ಸನ್ನು 60ರಿಂದ 50ಕ್ಕೆ ಇಳಿಸಲಾಗುವುದು ಮತ್ತು ರಾಜ್ಯದಲ್ಲಿ ಸ್ಥಾಪನೆಯಾಗುವ ಕಂಪನಿಗಳಲ್ಲಿ ಶೇ.75ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡಲಾಗುವುದು’ ಎಂದು ಹೇಳಿದ್ದಾರೆ.

ರಾಜ್ಯದ ಆದಿವಾಸಿಗಳು ಮತ್ತು ದಲಿತರು 50 ವರ್ಷಗಳನ್ನು ತಲುಪಿದ ನಂತರ ಪಿಂಚಣಿ ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ. ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರಾಂಚಿಯ ಮೊರಾಬಾಡಿ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸೋರೆನ್ ಈ ಘೋಷಣೆ ಮಾಡಿದರು.

ಆದಿವಾಸಿಗಳು ಮತ್ತು ದಲಿತರಿಗೆ 50 ವರ್ಷ ವಯಸ್ಸಾದ ಮೇಲೆ ಪಿಂಚಣಿ ಸೌಲಭ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಅವರಲ್ಲಿ ಮರಣ ಪ್ರಮಾಣವು ಅಧಿಕವಾಗಿದೆ ಮತ್ತು 60 ವರ್ಷಗಳ ನಂತರ ಅವರಿಗೆ ಉದ್ಯೋಗಗಳು ಸಿಗುವುದಿಲ್ಲ ಎಂದು ಅವರು ಹೇಳಿದರು.

2000ರಲ್ಲಿ ಜಾರ್ಖಂಡ್ ರಚನೆಯಾದ ನಂತರದ 20 ವರ್ಷಗಳಲ್ಲಿ ಕೇವಲ 16 ಲಕ್ಷ ಜನರು ಮಾತ್ರ ಪಿಂಚಣಿ ಪ್ರಯೋಜನಗಳನ್ನು ಪಡೆದಿದ್ದಾರೆ. ಆದರೆ, ಅವರ ಸರ್ಕಾರವು 36 ಲಕ್ಷ ಜನರಿಗೆ ಪಿಂಚಣಿ ನೀಡಿದ್ದು, ಎಲ್ಲರೂ ಹೆಚ್ಚಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರು. ನಮ್ಮ ಸರ್ಕಾರದ ನಾಲ್ಕು ವರ್ಷಗಳಲ್ಲಿ 60 ವರ್ಷ ಮೇಲ್ಪಟ್ಟ 36 ಲಕ್ಷ ಜನರಿಗೆ, 18 ವರ್ಷ ಮೇಲ್ಪಟ್ಟ ವಿಧವೆಯರಿಗೆ ಮತ್ತು ದೈಹಿಕ ವಿಕಲಚೇತನರಿಗೆ ಪಿಂಚಣಿ ಸೌಲಭ್ಯಗಳನ್ನು ನೀಡಿದ್ದೇವೆ ಎಂದರು.

ತಮ್ಮ ಸರ್ಕಾರವು ಜನರ ಕಲ್ಯಾಣಕ್ಕಾಗಿ ಅವಿರತವಾಗಿ ಕೆಲಸ ಮಾಡುತ್ತಿದೆ ಮತ್ತು ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವ ತಮ್ಮ ಸರ್ಕಾರದ ‘ಆಪ್‌ಕಿ ಯೋಜನೆ, ಆಪ್‌ಕಿ ಸರ್ಕಾರ್, ಆಪ್‌ಕಿ ದ್ವಾರ’ ಸೇರಿದಂತೆ ಹೆಚ್ಚಿನ ಸಂಖ್ಯೆಯ ಯೋಜನೆಗಳನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ ಎಂದು ಸೋರೆನ್ ಪ್ರತಿಪಾದಿಸಿದರು.

ಜಾರ್ಖಂಡ್ ದೇಶದ ಅತ್ಯಂತ ಬಡ ರಾಜ್ಯವಾಗಿದ್ದು, ಕೋವಿಡ್-19 ನಂತರದ ಸಂಕಷ್ಟಗಳು ಮತ್ತು ಬರಗಾಲದೊಂದಿಗೆ ಹೋರಾಡುತ್ತಿದೆ. ಅದರ ಹೊರತಾಗಿಯೂ ರಾಜ್ಯ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸೋರೆನ್ ಹೇಳಿದ್ದಾರೆ. ಜಾರ್ಖಂಡ್‌ನಂತಹ ಬಡ ರಾಜ್ಯಗಳು ಇತರ ರಾಜ್ಯಗಳಿಗೆ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕವನ್ನು ಪೂರೈಸುತ್ತವೆ. ಸಾಂಕ್ರಾಮಿಕ ಸಮಯದಲ್ಲಿ ಬಡ ಕಾರ್ಮಿಕರನ್ನು ಉಳಿಸುವಾಗಲೇ ನಮ್ಮ ಇಬ್ಬರು ಮಂತ್ರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಹಿಂದಿನ ಬಿಜೆಪಿ ಆಡಳಿತದ ಬಗ್ಗೆ ವ್ಯಂಗ್ಯವಾಡಿದ ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥರು, ‘ಡಬಲ್ ಇಂಜಿನ್ ಸರ್ಕಾರವು ಎಲ್ಲವನ್ನೂ ನಾಶಪಡಿಸಿದೆ. ಅದರ ಅಧಿಕಾರಾವಧಿಯಲ್ಲಿ ರೈತರು ಸಾವನ್ನಪ್ಪಿದ್ದಾರೆ’ ಎಂದು ಹೇಳಿದರು.

ತಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಅವರು, ಜಾರ್ಖಂಡ್ ಅನ್ನು ದೆಹಲಿ ಅಥವಾ ರಾಜ್ಯದ ಕೇಂದ್ರ ಕಚೇರಿಯಿಂದ ಅಲ್ಲ, ಇಲ್ಲಿನ ಹಳ್ಳಿಗಳಿಂದ ಆಡಳಿತ ನಡೆಸಲಾಗುವುದು ಎಂದರು.

ಇದನ್ನೂ ಓದಿ; ರಾಜ್ಯಸಭೆ ಎಎಪಿ ನಾಯಕರಾಗಿ ಚಡ್ಡಾ ನೇಮಕಕ್ಕೆ ಒಪ್ಪದ ಜಗದೀಪ್ ಧನ್ಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...