Homeಮುಖಪುಟಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಅಸ್ಸಾಂನ ಉಲ್ಫಾ ಸಂಘಟನೆ

ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಅಸ್ಸಾಂನ ಉಲ್ಫಾ ಸಂಘಟನೆ

- Advertisement -
- Advertisement -

ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಂ (ಉಲ್ಫಾ) ನಡುವಿನ ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ಇಂದು (ಶುಕ್ರವಾರ) ದೆಹಲಿಯಲ್ಲಿ ಸಹಿ ಹಾಕಲಾಗಿದೆ. ಈ ಮೂಲಕ ದಶಕಗಳ ಸಂಘರ್ಷ ಕೊನೆಗೊಳಿಸುವಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ.

ಶಾಂತಿ ಒಪ್ಪಂದದ ಮೂಲಕ ಹಿಂಸೆಯಿಂದ ದೂರ ಸರಿಯಲು ಅರಬಿಂದಾ ರಾಜ್‌ಖೋವಾ ನೇತೃತ್ವದ ಉಲ್ಫಾ ಒಪ್ಪಿಕೊಂಡಿದೆ. ಆದರೆ, ಇದೇ ಸಂಘಟನೆಯ ಪರೇಶ್ ಬರುವಾ ನೇತೃತ್ವದ ಕಟ್ಟರ್ ಬಣ ಶಾಂತಿ ಒಪ್ಪಂದಕ್ಕೆ ಒಪ್ಪಿಲ್ಲ ಎಂದು ತಿಳಿದು ಬಂದಿದೆ.

ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಂ ಅನ್ನು 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ 1990ರಲ್ಲಿ ಭಾರತದಲ್ಲಿ ನಿಷೇಧಿಸಲಾಗಿತ್ತು. ಈ ಸಂಘಟನೆ 1979 ರಿಂದ ಸಶಸ್ತ್ರ ಹೋರಾಟದ ಮೂಲಕ ಸ್ಥಳೀಯ ಅಸ್ಸಾಮಿ ಜನರಿಗೆ ಅಸ್ಸಾಂ ಸಾರ್ವಭೌಮ ರಾಷ್ಟ್ರವನ್ನು ರಚಿಸಲು ಒತ್ತಾಯಿಸುತ್ತಿತ್ತು.

ಶಾಂತಿ ಒಪ್ಪಂದವು ಅಕ್ರಮ ವಲಸೆ, ಸ್ಥಳೀಯ ಸಮುದಾಯಗಳಿಗೆ ಭೂಮಿಯ ಹಕ್ಕುಗಳು ಮತ್ತು ಅಸ್ಸಾಂನ ಅಭಿವೃದ್ಧಿಗೆ ಹಣಕಾಸಿನ ಪ್ಯಾಕೇಜ್‌ನಂತಹ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಶಾಂತಿ ಸಂಧಾನದ ಪರವಾಗಿದ್ದ ಉಲ್ಫಾ ಸಂಘಟನೆಯ ಹಲವಾರು ನಾಯಕರು ಉಪಸ್ಥಿತರಿದ್ದರು.

ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ಸಂಬಂಧ 2011ರಿಂದ ಕೇಂದ್ರ ಮತ್ತು ಅಸ್ಸಾಂ ಸರ್ಕಾರಗಳು ಉಲ್ಫಾ ನಾಯಕರ ಜೊತೆ ಮಾತುಕತೆ ನಡೆಸುತ್ತಿತ್ತು. ಈ ಮಾತುಕತೆಯ ಫಲವಾಗಿ ಇಂದು ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಸರ್ಕಾರ ಉಲ್ಫಾಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ” ಎಂದು ತಿಳಿಸಿದ್ದಾರೆ.

ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಮಾತನಾಡಿ, ಉಲ್ಫಾದ ಶಾಂತಿ ಚರ್ಚೆ ವಿರೋಧಿ ಬಣವನ್ನು ಮುನ್ನಡೆಸುತ್ತಿರುವ ಒಬ್ಬ ವ್ಯಕ್ತಿಯನ್ನು ಹೊರತುಪಡಿಸಿ, ಸಂಘಟನೆಯ ಉಳಿದ ಎಲ್ಲಾ ಸಂಸ್ಥಾಪಕ ಸದಸ್ಯರು ಇಂದು ಶಾಂತಿ ಒಪ್ಪಂದದ ವೇಳೆ ಹಾಜರಿದ್ದರು. 1993ರಲ್ಲಿ ಆಗಿನ ಪ್ರಧಾನಿ ಪಿವಿ ನರಸಿಂಹರಾವ್ ಶಾಂತಿ ಒಪ್ಪಂದದ ಚರ್ಚೆಗೆ ಮುನ್ನುಡಿ ಬರೆದಿದ್ದರು. ಇಂದು ಬಂದಿದ್ದ ಜನರು ಅಂದೂ ಕೂಡ ದೆಹಲಿಗೆ ಬಂದಿದ್ದರು. ಅಂದು ಆರಂಭಿಕ ಚರ್ಚೆ ನಡೆದಿತ್ತು. ಆದರೆ, ತಾರ್ಕಿಕ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಕೊನೆಗೂ ಇಂದು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಉಲ್ಫಾವನ್ನು ವಿಸರ್ಜಿಸಲಾಗುವುದು ಎಂದು ಅದರ ನಾಯಕರು ನಮಗೆ ಭರವಸೆ ನೀಡಿದ್ದಾರೆ. ಅವರು ಈಗ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಆ ಶಿಬಿರಗಳನ್ನು ತೊರೆದು, ತಮ್ಮ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಲಿದ್ದಾರೆ. ಒಟ್ಟು 726 ಉಲ್ಫಾ ಕಾರ್ಯಕರ್ತರು ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಗುಜ್ಜರ್-ಬಕರ್ವಾಲ್- ಸೇನೆ ಸಂಬಂಧವೇನು? ಪೂಂಛ್‌ ಘಟನೆಗೆ ಸರಕಾರ ತ್ವರಿತವಾಗಿ ಸ್ಪಂದಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...