Homeಅಂತರಾಷ್ಟ್ರೀಯಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

- Advertisement -
- Advertisement -

ಗಾಝಾದ ಮೇಲೆ ಮಿಲಿಟರಿ ಆಕ್ರಮಣದ ಮೂಲಕ ಇಸ್ರೇಲ್‌ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ವಿರುದ್ಧ ಮೊಕದ್ದಮೆಯನ್ನು ಹೂಡಿದೆ ಮತ್ತು ಅರ್ಜಿಯ ತ್ವರಿತ ವಿಲೇವಾರಿಗೆ ಆಗ್ರಹಿಸಿದೆ.

ಇಸ್ರೇಲ್ ದಕ್ಷಿಣ ಆಫ್ರಿಕಾದ ಆರೋಪಗಳನ್ನು ತಿರಸ್ಕರಿಸಿ ಸುಳ್ಳು ಆರೋಪ ಎಂದು ಕರೆದಿದ್ದು ಮೊಕದ್ದಮೆಯನ್ನು  ತಿರಸ್ಕರಿಸಲು ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ (ICJ) ಒತ್ತಾಯಿಸಿದೆ.  ಐಸಿಜೆಯಲ್ಲಿ ಯಾವುದೇ ಪ್ರಕರಣವು ಪರಿಹರಿಸಲು ವರ್ಷಗಟ್ಟಲೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಆದರೆ ಕದನ ವಿರಾಮಕ್ಕೆ ಕರೆ ನೀಡುವ ಮಧ್ಯಂತರ ಆದೇಶಗಳನ್ನು ಹೊರಡಿಸಲು ಶೀಘ್ರ ವಿಚಾರಣೆಗೆ ನ್ಯಾಯಾಲಯಕ್ಕೆ ದಕ್ಷಿಣ ಆಫ್ರಿಕಾ ಆಗ್ರಹಿಸಿದೆ. ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾವು  ಇಸ್ರೇಲ್‌ನ ಕೃತ್ಯಗಳನ್ನು ನರಮೇಧ ಎಂದು ಹೇಳಿದ್ದು, ಗಾಝಾದಲ್ಲಿ ಪ್ಯಾಲೆಸ್ತೀನ್‌ ನಾಗರಿಕರನ್ನು ಇಸ್ರೇಲ್‌ ನಾಶಮಾಡುವ ಉದ್ದೇಶ ಹೊಂದಿದೆ ಎಂದು ಹೇಳಿದೆ.

ಮುಂದಿನ ದಿನಗಳಲ್ಲಿ ಅಥವಾ ವಾರಗಳಲ್ಲಿ ಆ ಅರ್ಜಿಯ ವಿಚಾರಣೆಯ ಸಾಧ್ಯತೆಯಿದೆ. ಪ್ರಕರಣವು ಮುಂದುವರಿದರೆ ವರ್ಷಗಳು ಬೇಕಾಗುತ್ತದೆ, ಆದರೆ ವಾರಗಳಲ್ಲಿ ಮಧ್ಯಂತರ ಆದೇಶವನ್ನು ನೀಡಬಹುದು. ಮಾ.2022ರಲ್ಲಿ ‘ಐಸಿಜೆ’ ಯುಕ್ರೇನ್‌ ಮೇಲಿನ ತನ್ನ ಆಕ್ರಮಣವನ್ನು ನಿಲ್ಲಿಸಲು ರಷ್ಯಾಕ್ಕೆ ಆದೇಶ ನೀಡಿತ್ತು. ಆದರೆ ರಷ್ಯಾ ಆದೇಶವನ್ನು ಕಡೆಗಣಿಸಿತ್ತು.

ಇಸ್ರೇಲ್‌ ಸರ್ಕಾರವು ನರಮೇಧದ ಆರೋಪಗಳನ್ನು ತಿರಸ್ಕರಿಸಿದೆ. ದಕ್ಷಿಣ ಆಫ್ರಿಕಾದ ಆರೋಪವು ಕಾನೂನಿನ ಸಮರ್ಥನೆ ಹೊಂದಿಲ್ಲ ಎಂದು ಹೇಳಿದೆ. ಹಮಾಸ್‌ಗೆ ಇಸ್ರೇಲ್‌ ಮೇಲೆ ದಾಳಿಗೆ  ದಕ್ಷಿಣ ಆಫ್ರಿಕಾ ಸಹಕರಿಸುತ್ತಿದೆ ಎಂದು ಇಸ್ರೇಲ್ ಪ್ರತ್ಯಾರೋಪ ಮಾಡಿದೆ.

ಗಾಝಾದ ಮೇಲಿನ ಇಸ್ರೇಲ್‌ನ ಸೇನಾ ಕಾರ್ಯಾಚರಣೆಯನ್ನು ದಕ್ಷಿಣ ಆಫ್ರಿಕಾ ತೀವ್ರವಾಗಿ ಟೀಕಿಸುತ್ತಾ ಬಂದಿದೆ. ಅಧ್ಯಕ್ಷ ಸಿರಿಲ್ ರಾಮಫೋಸಾ ಸೇರಿದಂತೆ ಆಫ್ರಿಕಾದ ಹಲವು ಮುಖಂಡರು ಗಾಝಾ ಮತ್ತು ವೆಸ್ಟ್‌ ಬ್ಯಾಂಕ್‌  ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ನರಮೇಧ ಎಂದು ಕರೆದಿದ್ದಾರೆ.

ಇಸ್ರೇಲ್‌ ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ನಡೆಸುತ್ತಿರುವ ಯುದ್ಧದಲ್ಲಿ 24,000ಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. 10,000ಕ್ಕೂ ಅಧಿಕ ಮಕ್ಕಳು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದು, ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಹತ್ಯಾಕಾಂಡವನ್ನು ನಡೆಸುತ್ತಿದೆ ಎಂದು ವಿವಿಧ ರಾಷ್ಟ್ರಗಳು ಕದನ ವಿರಾಮಕ್ಕೆ ಆಗ್ರಹಿಸುತ್ತಿದೆ. ಆದರೆ ಇಸ್ರೇಲ್‌ ಮಾತ್ರ ಗಾಝಾದಲ್ಲಿ ಅಮಾಯಕರ ಮೇಲೆ ತಮ್ಮ ಕ್ರೌರ್ಯವನ್ನು ಮುಂದುವರಿಸಿದೆ. ಅಮೆರಿಕ, ಬ್ರಿಟನ್‌ನಂತಹ ರಾಷ್ಟ್ರಗಳು ಈ ಕೃತ್ಯಕ್ಕೆ ಬೆಂಬಲಿಸುತ್ತಿದೆ.

ಇದನ್ನು ಓದಿ: ‘ಭಗವಾನ್ ರಾಮನನ್ನು’ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...