Homeಮುಖಪುಟ"ಪ್ರತಿಭಟನೆಯ ವರದಿ ಮಾಡುವುದು ಅಪರಾಧವಲ್ಲ": ಪತ್ರಕರ್ತೆ ವಿರುದ್ಧ ಎಫ್‌ಐಆರ್‌ಗೆ ಎಡಿಟರ್ಸ್ ಗಿಲ್ಡ್ ಖಂಡನೆ

“ಪ್ರತಿಭಟನೆಯ ವರದಿ ಮಾಡುವುದು ಅಪರಾಧವಲ್ಲ”: ಪತ್ರಕರ್ತೆ ವಿರುದ್ಧ ಎಫ್‌ಐಆರ್‌ಗೆ ಎಡಿಟರ್ಸ್ ಗಿಲ್ಡ್ ಖಂಡನೆ

- Advertisement -
- Advertisement -

ಎರ್ನಾಕುಲಂ ಜಿಲ್ಲೆಯ ಒಡಕ್ಕಲಿ ಗ್ರಾಮದ ಬಳಿ ಡಿಸೆಂಬರ್ 10ರಂದು ನಡೆದ ವಿದ್ಯಾರ್ಥಿ ಸಂಘಟದ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇರಳದ ದೂರದರ್ಶನ ಸುದ್ದಿ ವಾಹಿನಿ 24 ನ್ಯೂಸ್‌ನ ವರದಿಗಾರ್ತಿ ವಿರುದ್ಧದ ಪೊಲೀಸ್ ಕ್ರಮವನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಶುಕ್ರವಾರ ಖಂಡಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಸಂಪುಟದ ಕೆಲವು ಸದಸ್ಯರು ಪ್ರಯಾಣಿಸುತ್ತಿದ್ದ ಬಸ್‌ಗೆ ಶೂ ಎಸೆದ ಆರೋಪದ ಮೇಲೆ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಕೇರಳ ವಿದ್ಯಾರ್ಥಿ ಸಂಘದ ಕೆಲ ಸದಸ್ಯರು ಮತ್ತು ವರದಿಗಾರ್ತಿ ವಿನಿತಾ ವಿಜಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವಿನಿತಾ ವಿರುದ್ಧ ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ಹಿಂಸಾಚಾರವನ್ನು ಒಪ್ಪುವುದಿಲ್ಲ. ಆದರೆ, ವರದಿಗಾರ್ತಿ ವಿರುದ್ಧದ ಪೊಲೀಸ್ ಕ್ರಮವನ್ನು ಬಲವಾಗಿ ಖಂಡಿಸುತ್ತದೆ. ಪ್ರತಿಭಟನೆಗಳ ಕುರಿತು ಸುದ್ದಿ ಮಾಡುವುದು ಮಾಧ್ಯಮದ ಜವಾಬ್ದಾರಿ. ಅದು ಅಪರಾಧವಲ್ಲ. ಪ್ರತಿಭಟನಾ ಸ್ಥಳದಲ್ಲಿ ವರದಿಗಾರರು ಇದ್ದರೂ ಎಂಬ ಕಾರಣಕ್ಕೆ ಅಹಿತಕರ ಘಟನೆಗೆ ಅವರು ಸಹಭಾಗಿ ಎನ್ನಲು ಸಾಧ್ಯವಿಲ್ಲ” ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

“ತನ್ನ ವೃತ್ತಿಪರ ಕರ್ತವ್ಯವನ್ನು ನಿರ್ವಹಿಸಿ ವರದಿಗಾರ್ತಿ ವಿರುದ್ದ ಕ್ರಮ ಕೈಗೊಳ್ಳಬಾರದು. ಅವರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆದು ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಬೇಕು” ಎಂದು ಆಗ್ರಹಿಸಿದೆ.

ಕೇರಳದ ಸರ್ಕಾರದ ‘ನವ ಕೇರಳ ಸದಸ್’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸಚಿವರ ತಂಡ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಶೂ ಎಸೆಯಲಾಗಿತ್ತು. ಒಂದು ಶೂ ಸಿಎಂ ಮತ್ತು ಸಚಿವರು ಇದ್ದ ಬಸ್‌ ಮೇಲೆ ಬಿದ್ದರೆ, ಮತ್ತೊಂದು ಬೆಂಗಾವಲು ವಾಹನ ವಿಂಡ್ ಶೀಲ್ಡ್‌ಗೆ ಬಿದ್ದಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.

ಸಿಎಂ ಮತ್ತು ಸಚಿವರು ಇದ್ದ ಬಸ್‌ ಮೇಲೆ ಶೂ ಎಸೆಯುವ ಬಗ್ಗೆ ವರದಿಗಾರ್ತಿಗೆ ಮೊದಲೇ ಗೊತ್ತಿತ್ತು. ಆದರೂ ಆಕೆ ಆ ಬಗ್ಗೆ ಪೊಲೀಸರಿಗೆ ತಿಳಿಸಿಲ್ಲ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

ಪತ್ರಕರ್ತೆ ಸೇರಿದಂತೆ ಹೋರಟಗಾರರ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 283, 353, 34, 308ಗಳಡಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಪೆರುಂಬವೂರ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನಿಡಿದೆ. ಆದರೆ, ಸೆಕ್ಷನ್ 308 ನ್ನು ಯಾಕೆ ಹಾಕಲಾಗಿದೆ ಎಂದು ಪೊಲೀಸರುನ್ನು ಪ್ರಶ್ನಿಸಿದೆ ಎಂದು ದಿ ಹಿಂದೂ ವರದಿ ತಿಳಿಸಿದೆ.

ಇದನ್ನೂ ಓದಿ: ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲರಿಂದ ನಾಮನಿರ್ದೇಶನಗೊಂಡಿದ್ದ ABVP ಕಾರ್ಯಕರ್ತ ಕೊಲೆ ಯತ್ನ ಕೇಸ್‌ನಲ್ಲಿ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...