Homeಮುಖಪುಟಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಾಳೇಶ್ವರಂ ಏತ ನೀರಾವರಿ ಯೋಜನೆಯ ನಿರ್ಮಾಣ ಮತ್ತು ಕಾರ್ಯಾಚರಣೆಯಲ್ಲಿ ಇಂಜಿನಿಯರಿಂಗ್ ಲೋಪ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಡೆಸುವುದಾಗಿ ತೆಲಂಗಾಣ ಸರ್ಕಾರ ಶುಕ್ರವಾರ ತಿಳಿಸಿದೆ.

ರಾಜ್ಯದ ನೂತನ ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ನೇತೃತ್ವದ ಉನ್ನತ ಇಂಜಿನಿಯರ್‌ಗಳು ಮತ್ತು ಹಿರಿಯ ಅಧಿಕಾರಿಗಳ ತಂಡ ಏತ ನೀರಾವರಿ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿ, ಬರೋಬ್ಬರಿ ₹1 ಲಕ್ಷ ಕೋಟಿ ವೆಚ್ಚದ ಯೋಜನೆಯ ಬ್ಯಾರೇಜ್‌ಗಳ ಪಿಲ್ಲರ್‌ಗಳ ಮುಳುಗುವಿಕೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉತ್ತಮ್ ಕುಮಾರ್ ರೆಡ್ಡಿ, 2019ರಲ್ಲಿ ನಿರ್ಮಿಸಲಾದ ಏತ ನೀರಾವರಿ ಯೋಜನೆಯ ಇಂಜಿನಿಯರಿಂಗ್ ಲೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ಕಾರಣ ಏನೇ ಇರಲಿ, ಮೇಡಿಗಡ್ಡ ಬ್ಯಾರೇಜ್‌ನ ಅಡಿಪಾಯ ಮುಳುಗಿದೆ. ಅಣ್ಣಾರಾಮ್ ಬ್ಯಾರೇಜ್‌ನಲ್ಲಿ ಸೋರಿಕೆಯಾಗ್ತಿದೆ ಮತ್ತು ಬಿರುಕುಗಳು ಕಾಣಿಸಿಕೊಂಡಿವೆ. ಸುಂಡಿಲ್ಲಾ ಬ್ಯಾರೇಜ್ ಹಾನಿಗೊಳಗಾಗಿದೆ. ಇವುಗಳ ವಿಚಾರಣೆ ಮತ್ತು ದುರಸ್ತಿ ಕಾರ್ಯಗಳು ನಡೆಯಲಿವೆ. ಈ ಕಾರಣಕ್ಕೆ ಕೆಲ ಸಮಯ ಏತ ನೀರಾವರಿ ಕಾರ್ಯಾಚರಣೆ ಸ್ಥಗಿತಗೊಳ್ಳಬಹುದು” ಎಂದು ಹೇಳಿದ್ದಾರೆ.

ಕಾಳೇಶ್ವರಂ ಯೋಜನೆಯಿಂದಾಗಿ ತೆಲಂಗಾಣದ ಮೇಲೆ ವರ್ಷಕ್ಕೆ ₹15,000 ಕೋಟಿ ಆರ್ಥಿಕ ಹೊರೆಯಾಗುತ್ತಿದೆ. ನೀರಾವರಿ ಇಲಾಖೆಯಲ್ಲಿ ಈಗಾಗಲೇ ₹10,000 ಕೋಟಿ ಬಿಲ್‌ಗಳು ಬಾಕಿ ಉಳಿದಿವೆ ಎಂದು ಸಚಿವರು ತಿಳಿಸಿದ್ದಾರೆ.

15 ರಿಂದ 20 ರವರೆಗೆ 86 ಪಿಯರ್‌ಗಳಲ್ಲಿ ಆರು ಮುಳುಗಡೆಯಾಗಿವೆ. ಮೇಡಿಗಡ್ಡ ಬ್ಯಾರೇಜ್‌ನ ಆರು, ಏಳು ಮತ್ತು ಎಂಟು ಬ್ಲಾಕ್‌ಗಳಲ್ಲಿ ಗೇಟ್‌ಗಳು ದುರ್ಬಲಗೊಂಡಿವೆ. ಈ ವಿಚಾರ ಕಳೆದ ಅಕ್ಟೋಬರ್ 21 ರಂದು ಬೆಳಕಿಗೆ ಬಂದಿತ್ತು. ನೀರಾವರಿ ಅಧಿಕಾರಿಗಳು ಜಲಾಶಯವನ್ನು ಖಾಲಿ ಮಾಡಲು ಒತ್ತಾಯಿಸಿದ್ದಾರೆ. ಬ್ಯಾರೇಜ್ ಮೇಲೆ ನಿರ್ಮಿಸಿರುವ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೇಡಿಗಡ್ಡಾ ಬ್ಯಾರೇಜ್‌ನ ಹಾನಿಗೊಳಗಾದ ಭಾಗಗಳನ್ನು ಪರಿಶೀಲಿಸಲು ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ ರಚಿಸಿದ್ದ ತಾಂತ್ರಿಕ ತಜ್ಞರ ಸಮಿತಿಯು, ಬ್ಯಾರೇಜ್ ಅನ್ನು ಸಂಪೂರ್ಣವಾಗಿ ಪುನಶ್ಚೇತನಗೊಳಿಸದ ಹೊರತು ಪ್ರಸ್ತುತ ಸ್ಥಿತಿಯಲ್ಲಿ ಅದು ‘ಸಂಪೂರ್ಣವಾಗಿ ನಿಷ್ಪ್ರಯೋಜಕ’ ಎಂದು ಘೋಷಿಸಿದೆ ಎಂದು ಉತ್ತಮ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇಂತಹ ಮಹತ್ವದ ಯೋಜನೆ ನಿರ್ಮಾಣವಾದ ಕೆಲವೇ ವರ್ಷಗಳಲ್ಲಿ ಹಾನಿಗೊಳಗಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಯೋಜನೆಯಲ್ಲಿನ ಲೋಪದೋಷಗಳ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ನಿರ್ಧರಿಸಿದೆ. ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ವರದಿ ಸಲ್ಲಿಸಲಾಗುವುದು. ಹಾನಿಗೆ ಹೊಣೆಗಾರರಾದ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರವು, ಆರಂಭದಲ್ಲಿ ಕಾಳೇಶ್ವರಂನ ಮೇಲ್ಭಾಗದ ತುಮ್ಮಿಡಿ ಹಟ್ಟಿ ಗ್ರಾಮದಲ್ಲಿ ಪ್ರಾಣಹಿತ ಚೇವೆಲ್ಲಾ ಯೋಜನೆ ಎಂದು ಹೆಸರಿಸಲಾದ ಯೋಜನೆಯ ನಿರ್ಮಾಣವನ್ನು ಯೋಜಿಸಿತ್ತು. ಆದರೆ ಬಿಆರ್‌ಎಸ್‌ ಸರ್ಕಾರ “ವೈಜ್ಞಾನಿಕ ವಿಧಾನವಿಲ್ಲದೆ ಕಾಳೇಶ್ವರಂಗೆ ಸ್ಥಳವನ್ನು ಬದಲಾಯಿಸುವ ಮೂಲಕ ಅದನ್ನು ಮರುವಿನ್ಯಾಸಗೊಳಿಸಿದೆ” ಎಂದು ಸಚಿವರು ಆರೋಪಿಸಿದ್ದಾರೆ.

ಬಿಆರ್‌ಎಸ್ ಶಾಸಕ ಮತ್ತು ಮಾಜಿ ರಾಜ್ಯ ಸಚಿವ ಕಡಿಯಂ ಶ್ರೀಹರಿ ಅವರು ಮಹಾರಾಷ್ಟ್ರದ ಪ್ರದೇಶಗಳು ಮುಳುಗುವುದನ್ನು ತಡೆಯಲು ಮತ್ತು ಭಾರೀ ಪರಿಹಾರವನ್ನು ಪಾವತಿಸುವುದನ್ನು ತಪ್ಪಿಸಲು ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಆರ್‌ಎಸ್‌, ಕೇಂದ್ರದಿಂದ 11 ರೀತಿಯ ಅನುಮತಿಗಳನ್ನು ಪಡೆದ ನಂತರವೇ ಬಿಆರ್‌ಎಸ್ ಸರ್ಕಾರವು ಕಾಳೇಶ್ವರಂ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾಯಾಂಗ ತನಿಖೆ ಪ್ರಾರಂಭವಾಗುವ ಮೊದಲೇ ಕಾಂಗ್ರೆಸ್ ಸರ್ಕಾರದ ಸಚಿವರು ತೀರ್ಪು ನೀಡುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ತೆಲಂಗಾಣದ ಈ ಹಿಂದಿನ ಬಿಆರ್‌ಎಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. 10 ವರ್ಷಗಳ ತೆಲಂಗಾಣ ಬಿಆರ್‌ಎಸ್‌ ಸರ್ಕಾರದ ಅವಧಿಯಲ್ಲಿ ಪೂರ್ಣಗೊಳಿಸಿದ ಅತ್ಯಂತ ದೊಡ್ಡ ಯೋಜನೆ ಇದು ಎಂದು ಪರಿಗಣಿಸಲಾಗಿದೆ. ಕಾಳೇಶ್ವರಂ ವಿಶ್ವದ ಅತೀ ದೊಡ್ಡ ಏತ ನೀರಾವರಿ ಯೋಜನೆಯೂ ಹೌದು. ಬಿಆರ್‌ಎಸ್‌ ಸರ್ಕಾರ ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಯೋಜನೆಯಲ್ಲಿ ಲೋಪದ ಆರೋಪ ಮಾಡಿರುವ ನೂತನ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ : ಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...