Homeಮುಖಪುಟಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

ಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

- Advertisement -
- Advertisement -

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಮ್ಯಾನ್ಮಾರ್‌ನ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರಿಗೆ ನೆಲೆ ಸಿಕ್ಕಿಲ್ಲ. ಇಂಡೋನೇಷ್ಯಾದ ಜನರು ರೋಹಿಂಗ್ಯನ್ನರು ದೇಶ ತೊರೆಯುವಂತೆ ಆಗ್ರಹಿಸಿ ತಿರುಗಿ ಬಿದ್ದಿದ್ದಾರೆ.

ಕಳೆದ ಬುಧವಾರ ಇಂಡೋನೇಷ್ಯಾದ ಅಚೆ ಪ್ರಾಂತ್ಯದ ರಾಜಧಾನಿ ಬಂದಾ ಅಚೆಯಲ್ಲಿ ಸುಮಾರು 137 ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸ್ಥಳೀಯ ಸಮುದಾಯ ಭವನದ ನೆಲಮಾಳಿಗೆಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಾಳಿ ನಡೆಸಿದೆ.

ದಿ ಅಸೋಸಿಯೇಟೆಡ್ ಪ್ರೆಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪೊಲೀಸ್‌ ಭದ್ರತೆಯನ್ನು ಬೇಧಿಸಿ ಹಸಿರು ಜಾಕೆಟ್‌ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸಮುದಾಯ ಭವನಕ್ಕೆ ನುಗ್ಗಿರುವುದು ಮತ್ತು ಈ ವೇಳೆ ರಕ್ಷಣೆಗಾಗಿ ಗೋಗರೆಯುತ್ತಿದ್ದ ಮಕ್ಕಳು, ಮಹಿಳೆಯರನ್ನು ಭದ್ರತಾ ಅಧಿಕಾರಿಗಳು ಟ್ರಕ್‌ಗೆ ಹತ್ತಿಸಿ ಬೇರೆಡೆಗೆ ಕರೆದೊಯ್ದಿರುವುದನ್ನು ಕಾಣಬಹುದು.

ಈ ಘಟನೆಗೆ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಏಜೆನ್ಸಿ ದುಖಃ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದ ಜನತೆ ರೋಹಿಂಗ್ಯಾಗಳ ಮೇಲೆ ತಿರುಗಿಬಿದ್ದ ಕಾರಣ ಸಂಘರ್ಷ ತಪ್ಪಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ರೋಹಿಂಗ್ಯಾಗಳನ್ನು ಹೊತ್ತು ಇಂಡೋನೇಷ್ಯಾ ಕಡೆ ಬರುವ ದೋಣಿಗಳನ್ನು ಸಮುದ್ರದಲ್ಲೇ ತಡೆದು ವಾಪಸ್ ಕಳುಹಿಸುತ್ತಿದೆ.

ಇಂಡೋನೇಷ್ಯಾದ ನೌಕಾಪಡೆ ಗುರುವಾರ ಅಚೆ ಪ್ರಾಂತ್ಯದ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದ ರೋಹಿಂಗ್ಯಾ ನಿರಾಶ್ರಿತರಿಂದ ತುಂಬಿದ್ದ ದೋಣಿಯನ್ನು ಬಲವಂತವಾಗಿ ಅಂತಾರಾಷ್ಟ್ರೀಯ ಜಲ ಗಡಿಯಿಂದ ಹೊರಗೆ ಕಳುಹಿಸಿದೆ.

ಸುಮಾತ್ರಾ ದ್ವೀಪದ ಭಾಗವಾಗಿರುವ ಅಚೆ ಪ್ರಾಂತ್ಯಕ್ಕೆ ನಿರಾಶ್ರಿತರನ್ನು ಹೊತ್ತ ಹೆಚ್ಚಿನ ದೋಣಿಗಳು ಆಗಮಿಸುತ್ತಿವೆ. ಎಲ್ಲಾ ದೋಣಿಗಳು ಬಾಂಗ್ಲಾದೇಶದ ಕಡೆಯಿಂದ ಬರುತ್ತಿವೆ ಎಂದು ವರದಿಗಳು ಹೇಳಿವೆ. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ರೋಹಿಂಗ್ಯನ್ನರು ತುಂಬಿ ತುಳುಕುತ್ತಿದ್ದಾರೆ. ಪರಿಣಾಮ ಕಳೆದ ನವೆಂಬರ್‌ನಿಂದ ಅನೇಕ ಜನರು ದೋಣಿಗಳ ಮೂಲಕ ಆಳ ಸಾಗರದಲ್ಲಿ ಅಪಾಯಕಾರಿ ಪ್ರಯಾಣ ಮಾಡಿ ಮಲೇಶ್ಯಾ, ಇಂಡೋನೇಷ್ಯಾಗಳಿಗೆ ತೆರಳುತ್ತಿದ್ದಾರೆ.

2027ರಲ್ಲಿ ತಮ್ಮ ಜನ್ಮ ನಾಡು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದಬ್ಬಾಳಿಕೆ ತಡೆಯಲಾಗದೆ ಸಾವಿರಾರು ರೋಹಿಂಗ್ಯನ್ನರು ತಮ್ಮದೆಲ್ಲವನ್ನೂ ತೊರೆದು ಬಾಂಗ್ಲಾದೇಶ, ಭಾರತದಂತಹ ಕೆಲ ರಾಷ್ಟ್ರಗಳಿಗೆ ತೆರಳಿ ನೆಲೆಸಿದ್ದಾರೆ.

ಬಾಂಗ್ಲಾದಿಂದ 1,500ಕ್ಕೂ ಹೆಚ್ಚು ರೋಹಿಂಗ್ಯನ್ನರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ. ಅವರಿಗೆ ಆಶ್ರಯ ನೀಡಲು ಅಲ್ಲಿನ ಜನರಿಂದ ವಿರೋಧವಿರುವ ಕಾರಣ ಸರ್ಕಾರ ಹೆದರುತ್ತಿದೆ. ಜನರು ತಿರುಗಿಬಿದ್ದರೆ ನಿಭಾಯಿಸುವುದು ಕಷ್ಟ ಎಂದರಿತಿರುವ ಇಂಡೋನೇಷ್ಯಾ ಸರ್ಕಾರ, ನಮ್ಮಲ್ಲಿ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಸಾಧ್ಯವಾಗುತ್ತಿಲ್ಲ. ಬೇರೆ ಯಾವುದಾದರು ದೇಶಗಳು ಅವರಿಗೆ ಆಶ್ರಯ ನೀಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಥೈಲ್ಯಾಂಡ್ ಮತ್ತು ಮಲೇಷಿಯಾದಂತೆ ವಿಶ್ವಸಂಸ್ಥೆಯ 1951ರ ನಿರಾಶ್ರಿತರಿಗೆ ಆಶ್ರಯ ನೀಡುವ ಒಪ್ಪಂದಕ್ಕೆ ಇಂಡೋನೇಷ್ಯಾ ಸಹಿ ಹಾಕಿಲ್ಲ. ಆದ್ದರಿಂದ, ಬಾಂಗ್ಲಾದೇಶದಿಂದ ಬರುವ ರೋಹಿಂಗ್ಯಾಗಳನ್ನು ಸ್ವೀಕರಿಸಲು ಅದು ಬಾಧ್ಯತೆ ಹೊಂದಿಲ್ಲ. ಇಲ್ಲಿಯವರೆಗೆ, ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಇಂಡೋನೇಷ್ಯಾ ನೀಡಿದೆ.

ಇಂಡೋನೇಷ್ಯಾದ 277 ಮಿಲಿಯನ್ ಜನ ಸಂಖ್ಯೆಯಲ್ಲಿ ಮುಸ್ಲಿಮರು ಶೇ. 90ರಷ್ಟಿದ್ದಾರೆ. ಆದರೂ, ಮುಸ್ಲಿಮರೇ ಆದ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ರೋಹಿಂಗ್ಯನ್ನರು ನಮ್ಮ ದೇಶಕ್ಕೆ ಹೊರೆ, ಅವರ ನಡವಳಿಕೆ ಸರಿಯಿಲ್ಲ, ಇತ್ಯಾದಿ ಕಾರಣಗಳನ್ನು ಇಂಡೋನೇಷ್ಯಾದ ಜನತೆ ಮುಂದಿಟ್ಟಿದ್ದಾರೆ. ಒಟ್ಟಿನಲ್ಲಿ ಅತ್ತ ಜನ್ಮ ನಾಡು, ಇತ್ತ ಅನ್ಯ ನಾಡಿನಲ್ಲೂ ನೆಲೆಯಿಲ್ಲದೆ ಸಾವಿರಾರು ಬಡ ಜೀವಗಳು ಈ ಭೂಮಿಯಲ್ಲೇ ನೆಲೆ ಕಳೆದುಕೊಂಡಂತಾಗಿದೆ.

ಫೋಟೋ ಕೃಪೆ : ಸಿಎನ್‌ಎನ್‌

ಇದನ್ನೂ ಓದಿ : ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...