Homeಮುಖಪುಟದೆಹಲಿ: ಅರ್ಜುನ, ಖೇಲ್ ರತ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದಲ್ಲಿಟ್ಟು ತೆರಳಿದ ಕುಸ್ತಿಪಟು ವಿನೇಶ್ ಫೋಗಟ್!

ದೆಹಲಿ: ಅರ್ಜುನ, ಖೇಲ್ ರತ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದಲ್ಲಿಟ್ಟು ತೆರಳಿದ ಕುಸ್ತಿಪಟು ವಿನೇಶ್ ಫೋಗಟ್!

- Advertisement -
- Advertisement -

ಭಾರತೀಯ ಕುಸ್ತಿ ಫೇಡರೇಶನ್‌ (ಡಬ್ಲ್ಯುಎಫ್‌ಐ)ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿ ಕುಸ್ತಿಪಟು ವಿನೇಶ್ ಫೋಗಟ್ ತಮ್ಮ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿ ಹಿಂದಿರುಗಿಸಿದ್ದಾರೆ.

ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ನ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್‌ ಇಂದು (ಡಿ.30)ತಮ್ಮ ಅತ್ಯುನ್ನತ ಪ್ರಶಸ್ತಿಗಳನ್ನು ನವದೆಹಲಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿಟ್ಟು ತೆರಳಿದ್ದಾರೆ.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾವನಾತ್ಮಕ ಪತ್ರ ಬರೆದಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಹಿಂದಿರುಗಿಸುವುದಾಗಿ ಹೇಳಿದ್ದರು. ಅದರಂತೆ ಇಂದು ಪ್ರಶಸ್ತಿ ಮರಳಿಸಿದ್ದಾರೆ.

ವಿನೇಶ್ ಫೋಗಟ್ ತಮ್ಮ ಪ್ರಶಸ್ತಿಗಳನ್ನು ನವದೆಹಲಿಯ ಪ್ರಧಾನ ಮಂತ್ರಿ ಕಚೇರಿಯ ಹೊರಗೆ ಇಡಲು ಮುಂದಾಗಿದ್ದರು. ಆದರೆ, ಕರ್ತವ್ಯ ಪಥದಲ್ಲಿ ಪೊಲೀಸರು ಅವರನ್ನು ತಡೆದರು. ಹಾಗಾಗಿ, ವಿನೇಶ್ ತನ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲೇ ಬಿಟ್ಟು ತೆರಳಿದ್ದಾರೆ.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಕ್ರಮಕೈಗೊಳ್ಳದ ಹಿನ್ನೆಲೆ ಮತ್ತು ಬ್ರಿಜ್ ಭೂಷಣ್ ಆಪ್ತ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವುದಕ್ಕೆ ಬೇಸಗೊಂಡು ದೇಶದ ಖ್ಯಾತ ಕುಸ್ತಿಟುಗಳು ತಮ್ಮ ಉನ್ನತ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ.

ಡಿಸೆಂಬರ್ 21ರಂದು ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ)ಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಒಲಿಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲಿಕ್ ತಮ್ಮ ಬೂಟು ಕಳಚಿಟ್ಟು ಕುಸ್ತಿಗೆ ವಿದಾಯ ಹೇಳಿದ್ದರು.

ಸಾಕ್ಷಿ ಮಲಿಕ್‌ ಬೆಂಬಲಿಸಿದ್ದ ಮತ್ತೋರ್ವ ಕುಸ್ತಿಪಟು ಬಜರಂಗ್ ಪೂನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು ಪ್ರಧಾನಿಗೆ ತಲುಪಿಸುವಂತೆ ಹೇಳಿ ಹೊರಟು ಹೋಗಿದ್ದರು. ಇದರ ಬೆನ್ನಲ್ಲೇ ಕುಸ್ತಿಪಟು ವಿರೇಂದರ್ ಯಾದವ್ ತಮ್ಮ ಪದ್ಮಶ್ರೀ ಪ್ರಶಸ್ತಿ ಮರಳಿಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಡಸಿದ್ದರು. ಬಳಿಕ ವಿನೇಶ್ ಫೋಗಟ್ ಕೂಡ ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವ ಘೋಷಣೆ ಮಾಡಿದ್ದರು.

ಇದನ್ನೂ ಓದಿ : ಎಸ್ಸಿ-ಎಸ್ಟಿ ವಿದ್ಯಾರ್ಥಿವೇತನ ಹಗರಣ: ಶೈಕ್ಷಣಿಕ ಸಂಸ್ಥೆಗೆ ಸೇರಿದ 2 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Not only wrestlers, all the sports personalities should join this agitation, then only these Chuikidars can understand the strength in unity of our proud sports personalities. If every one raise their vioce, sucess will be achieved.👌👌👌👍👍👍🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...