Homeಮುಖಪುಟಮಣಿಪುರ ಹಿಂಸಾಚಾರ: ಬಿಜೆಪಿಯನ್ನು ಪ್ರಶ್ನಿಸಿ ಲೇಖನ ಬರೆದಿದ್ದ ಪತ್ರಕರ್ತನ ಬಂಧನ

ಮಣಿಪುರ ಹಿಂಸಾಚಾರ: ಬಿಜೆಪಿಯನ್ನು ಪ್ರಶ್ನಿಸಿ ಲೇಖನ ಬರೆದಿದ್ದ ಪತ್ರಕರ್ತನ ಬಂಧನ

- Advertisement -
- Advertisement -

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಕುಕಿ ಸಮುದಯಕ್ಕೆ ಬಿಜೆಪಿಯ ಬೆಂಬವಿದೆಯೇ ಎಂದು ಪ್ರಶ್ನಿಸಿ ಲೇಖನವನ್ನು ಬರದಿದ್ದ ಪತ್ರಕರ್ತ ವಾಂಗ್‌ಖೇಮ್‌ಚಾ ಶ್ಯಾಮ್‌ಜೈ ಅವರನ್ನು ಮಣಿಪುರ ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪ ಹೊರಿಸಲಾಗಿದೆ.

‘ದಿ ಫ್ರಾಂಟಿಯರ್ ಮಣಿಪುರ’ ಪತ್ರಕರ್ತನ ಬಂಧನದ ಬಗ್ಗೆ ವರದಿಯನ್ನು ಮಾಡಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಲೈಶ್ರಾಮ್ ಮೀನಬಂಟ ಸಿಂಗ್ ಅವರ ದೂರಿನ ಮೇರೆಗೆ ಪೊಲೀಸರು ಡಿ.2ರಂದು ‘ಕಂಗ್ಲೇಪಕ್ಕಿ ಮೀರಾ’ ಪತ್ರಿಕೆಯ ಸಂಪಾದಕ ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿದ್ದರು.

ರಾಜ್ಯದಲ್ಲಿ ಕುಕಿ ಸಶಸ್ತ್ರ ಗುಂಪಿಗೆ ದುಷ್ಕೃತ್ಯವನ್ನು ನಡೆಸಲು ಆಡಳಿತಾರೂಢ ಬಿಜೆಪಿ ಸರ್ಕಾರದ ಬೆಂಬಲವಿದೆಯೇ ಎಂದು ಲೇಖನದಲ್ಲಿ ಪ್ರಶ್ನಿಸಲಾಗಿತ್ತು. ಶ್ಯಾಮ್‌ಜೈ ಅವರ ಲೇಖನವು ಮಣಿಪುರದಲ್ಲಿ ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಗಿದೆ ಎಂದು ಲೈಶ್ರಾಮ್ ಮೀನಾಬಂಟ ಸಿಂಗ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಗಲಭೆಗೆ ಪ್ರಚೋದನೆ ನೀಡುವುದು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಶ್ಯಾಮ್‌ಜೈ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಅವರನ್ನು ಭಾನುವಾರದವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಶ್ಯಾಮ್‌ಜೈ ಅವರ ಬಂಧನವನ್ನು ಮಣಿಪುರ ಕಾಂಗ್ರೆಸ್‌ ಮುಖ್ಯಸ್ಥ ಕೇಶಾಮ್ ಮೇಘಚಂದ್ರ ಅವರು ಖಂಡಿಸಿದ್ದು, ಇದು ಮಾದ್ಯಮ ಮತ್ತು ವಾಕ್ ಸ್ವಾತಂತ್ರ್ಯದ ಮೇಲಿನ ಅನ್ಯಾಯದ ಜೀವಂತ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ.

ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದಾರೆ.

ಇದನ್ನು ಓದಿ: ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ತ್ವರಿತ ಜಾರಿಗೆ ಮುಂದಾದ ಉತ್ತರಾಖಂಡ ಸರಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...