Homeಅಂಕಣಗಳುಯಜ್ಞ ನಿರ್ವಿಜ್ಞ ಟೆಂಗ್.. ಟೆಂಗ್... ಟೆಂಗ್.....!!

ಯಜ್ಞ ನಿರ್ವಿಜ್ಞ ಟೆಂಗ್.. ಟೆಂಗ್… ಟೆಂಗ್…..!!

- Advertisement -
- Advertisement -

ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ಅಟ್ಯಾಕ್ ಹನ್ಮಂತ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಲಬೆರಕೆ ಸರ್ಕಾರವು ಎಲ್ಲಾ ಬಗೆಯಲ್ಲೂ ಕರ್ನಾಟಕ ರಾಜ್ಯವನ್ನು ಮೌಡ್ಯಗಳ ಕೊಂಪೆಯನ್ನಾಗಿ ಮಾಡೇ ಮಾಡುತ್ತೇವೆಂದು ಗುಪ್ತ ಪ್ರತಿಜ್ಞೆ ಮಾಡಿರುವ ಸಂಗತಿ ಇದೀಗ ಹೊರಬಿದ್ದಿದೆ. ಸಿಎಂ ಕುಮಾರಣ್ಣನವರು ರಾಜ್ಯದ ಸರ್ವ ಗುಡಿಗುಂಡಾರಗಳಿಗೂ ದೌಡಾಯಿಸಿ, ಉರುಳುಸೇವೆ ಮಾಡಿ ಬಂದ ನಂತರ, ಡೆಪ್ಯೂಟಿ ಸಿಎಂ ಪರಂ ಸಾಹೇಬ್ರು ತಮ್ಮ ವಿಧಾನಸೌಧದದ ಚೇಂಬರಿನೊಳಗೇ ವಾಸ್ತುಪ್ರಕಾರ ಬೆಂಕಿ ಹಾಕಿ, ಹೋಮ ನೆರವೇರಿಸಿ ತೀರ್ಥ ಕುಡಿದು ನೆತ್ತಿಗೆ ಸವರಿಕೊಂಡಿರುವುದನ್ನು ತಿಳಿದು, ಕರ್ನಾಟಕ ರಾಜ್ಯ ಇನ್ನು ಎಂತೆಂಥ ಮೌಡ್ಯಗಳಿಗೆ ತಲೆ ಕೊಡಬೇಕಾಗುತ್ತದೋ ಎಂದು ತಲೆಯಲ್ಲಿ ಮಿದುಳಿರುವ ಮಂದಿ ಆತಂಕಕ್ಕೆ ಒಳಗಾಗಿದ್ದಾರೆಂದು ವರದಿಯಾಗಿದೆ. ತಮ್ಮ ಕಛೇರಿಯ ಸೋಫಾ ಮೇಲೆ ಯಜ್ಞಕುಂಡವಿಟ್ಟು ‘ಪೊರ್ಕಿ ಹುಚ್ಚ ವೆಂಕಟ್’ ಚಿತ್ರದ ಸೂಪರ್‍ಹಿಟ್ ಹಾಡು ಹಾಡುತ್ತ ನರ್ತಿಸುತ್ತಿದ್ದ ಪರಂ ಸಾಹೇಬರ ಪಂಚೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದರೂ, ಅದರ ಪರಿವೆಯಿಲ್ಲದೆ ಟೆಂಗ್ ಟೆಂಗ್ ಟೆಂಗ್ ಎಂದು ಕುಣಿದಾಡುತ್ತ ಪರಂ ಯಜ್ಞವನ್ನು ಪೂರ್ಣಗೊಳಿಸಿದರು ಎಂದು ತಿಳಿದು ಬಂದಿದೆ.

****

ಮಣ್ಣಿನ ಮಕ್ಕಳು, ಮೊಮ್ಮಕ್ಕಳು, ಮತ್ತು ಮರಿಮಕ್ಕಳ ಪಕ್ಷವಾದ ಕೇಡಿಎಸ್ ಪಕ್ಷದ ಪಿಲ್ಲರ್‍ಗಳಾದ ದೊಡ್ಡಗೌಡರ ಮಕ್ಕಳಿಗೆ ಇತ್ತೀಚೆಗೆ ಮಣ್ಣಿನ ಮೇಲೆ ಜಿಗುಪ್ಸೆ ಹುಟ್ಟಿದೆ ಎಂಬ ಅನುಮಾನಗಳು ವ್ಯಕ್ತವಾಗುತ್ತಿದೆ. ಮಸಾಲಾ ಮಿಕ್ಸ್ ಸರ್ಕಾರದ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ತಮ್ಮ ಟ್ರೇಡ್‍ಮಾರ್ಕ್ ‘ಮಣ್ಣನ್ನು’ ಪ್ರತಿನಿಧಿಸುವ ಕೃಷಿ ಇಲಾಖೆ, ಪಶು ಸಂಗೋಪನ ಇಲಾಖೆ, ನೀರಾವರಿ ಇಲಾಖೆ, ತೋಟಗಾರಿಕಾ ಇಲಾಖೆ – ಇವೆಲ್ಲದಕ್ಕೂ ಎಳ್ಳುನೀರು ಬಿಟ್ಟಿರುವ ದೊಡ್ಡಗೌಡರ ಮೊದ್ದುಮಣಿ ಮೇವಣ್ಣ ತನಗೆ ಇಂಧನ ಮತ್ತು ಪಿಡಬ್ಲ್ಯುಡಿ ಇಲಾಖೆಯಂಥಹ ಹುಲ್ಲುಗಾವಲುಗಳೇ ಬೇಕು, ಕೊಟ್ರೆ ಇವನ್ನ ಕೊಡಿ, ಇಲ್ಲಾಂದ್ರೆ ಮಂತ್ರಿಸಿದ 8 ನಿಂಬೆಹಣ್ಣನ್ನು ಸಿಪ್ಪೆ ಸಮೇತ ನುಂಗಿ, ನಾಲಿಗೆ ಈಚೆ ಹಾಕ್ಕೊಂಡು ಆತ್ಮಹತ್ಯೆ ಮಾಡಿಕೊಳ್ತೇನೆ ಎಂದು ದೊಡ್ಡಗೌಡರನ್ನು ಬೆದರಿಸಿದ್ದಾರೆ ಎಂಬ ಖಚಿತಸುದ್ದಿ ಆಘಾತವಾಣಿಗೆ ಸದ್ಯ ಲಭ್ಯವಾಗಿಲ್ಲ.

****

ಹೆಂಡ ಕುಡಿದ ಮಂಗಗಳ ಕೈಗೆ ತಲೆಕೊಟ್ಟು ಕರಾವಳಿಯಾದ್ಯಂತ ಹಾಫ್‍ಮೆಂಟ್ಲುಗಳಾದ ಶ್ರಮಿಕವರ್ಗದ ಹುಡುಗರು, ದನಸಾಗಾಟ ಗೋಭಕ್ತಿ ಹೆಸರಿನಲ್ಲಿ ಕಂಡ ಕಂಡವರನ್ನು ಹಿಡಿದು ಬಡಿಯುವುದು, ಇವರ ಜೊತೆ ಪೈಪೋಟಿಗಿಳಿದ ದೊಗಳೆಚೆಡ್ಡಿ ಪೊಲೀಸರು ಈ ಹಾಫ್‍ಮೆಂಟ್ಲು ಹುಡುಗರ ಜೊತೆ ಸೇರಿ ಅಮಾಯಕರ ಮೇಲೆ ಹಲ್ಲೆ ನಡೆಸುವುದು, ಲಾಕಪ್ಪಿಗೆ ತಂದು ರುಬ್ಬುವ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಹೇಶವ ಕೃಪದ ಮೆಚ್ಚುಗೆಗೆ ಪಾತ್ರರಾಗಿದ್ದಾರೆಂದು ವರದಿಯಾಗಿದೆ. ತಮ್ಮ ಸಾಧನೆಯ ಬಗ್ಗೆ ಹೇಶವ ಕೃಪಾದ ಮೆಚ್ಚುಗೆ ಕೇಳಿ ಉತ್ತೇಜಿತರಾಗಿರುವ ಕರಾವಳಿ ಪೊಲೀಸರು ಭಜಲಂಗಿ, ಶ್ರೀರ್ಯಾಮ್ ಸೇನೆ ಹುಡುಗರನ್ನೂ ನಾಚಿಸುವಂತೆ ಬಡ ಮುಸ್ಲಿಮರನ್ನು ಹೊಡೆದು ಬಡಿದು ಕೊಲ್ಲಲು ಶುರು ಹಚ್ಚಿಕೊಂಡಿದ್ದಾರೆ. ಪೊಲೀಸ್ ಜೀಪುಗಳನ್ನೇ ಶವ ಸಾಗಿಸುವ ವಾಹನಗಳನ್ನಾಗಿ ಮಾಡಿ ಆ-ರೀಸೆಸ್ ಸಂಘದಿಂದ ‘ವೀರಕೇಸರಿ’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಈ ನಡುವೆ ಕಾನೂನು ಪುಸ್ತಕದ ಕನಿಷ್ಟ ಅರಿವಿರುವ ಪೊಲೀಸ್ ವರಿಷ್ಟಾಧಿಕಾರಿ ನಿಂಬರ್ಗಿ, ಹುಸೇನಬ್ಬ ಎಂಬ ಅಮಾಯಕ ವೃದ್ಧನನ್ನು ಕೊಂದ ತಮ್ಮ ಕೈ ಕೆಳಗಿನ ಈ ‘ವೀರಕೇಸರಿ’ ಪೊಲೀಸರನ್ನು ಒದ್ದು ಅರೆಸ್ಟ್ ಮಾಡಿ ಜೈಲಿಗೆಸೆದಿದ್ದಾರೆ. ಹೀಗೆ ಡೆಡ್‍ಬಾಡಿ ಮ್ಯಾಟರ್ ಹೊರಬರುತ್ತಿದ್ದಂತೆ ಡೆಡ್‍ಬಾಡಿ ತಜ್ಞೆ ಸೋಪಕ್ಕ ಎಂಟ್ರಿ ಕೊಟ್ಟಿದ್ದಾರೆ. ನಿಂಬರ್ಗಿ ಕಚೇರಿಯಲ್ಲಿ ಹಲ್ಲುಗಿಂಜಿ ಪೋಸು ಕೊಟ್ಟು ಹೊರಬದು ಮಾಧ್ಯಮದೆದುರು ‘ತಮ್ಮ ಭಜಲಂಗಿ ಲಫಂಗರು ಭಾಳಾ ಸಾಬಸ್ಥರು, ಅವರ ಬಾಯೊಳಗೆ ಬಲಗಾಲಿಟ್ರೂ ಅವರಿಗೆ ಕಚ್ಚೋಕೆ ಬರೋದಿಲ್ಲ, ಅವ್ರನ್ನ ಕೂಡಲೇ ಬೇಷರತ್ ಬಿಡುಗಡೆ ಮಾಡಬೇಕು’ ಎಂದು ತಲೆತಲೆ ಚಚ್ಚಿಕೊಂಡು ಗೋಳಾಡುತ್ತಿದ್ದಾರೆಂಬ ಸುದ್ದಿ ಬಂದಿದೆ.

****

ಇಲ್ಲಿಯವರೆಗೂ ದೇಶದಲ್ಲಿರೋ ಪಕ್ಷಗಳ ಶಾಸಕರನ್ನು ಕೇಜಿಲೆಕ್ಕದಲ್ಲಿ ಖರೀದಿ ಮಾಡುತ್ತ ಹಾಯಾಗಿ ಓಡಾಡಿಕೊಂಡಿದ್ದ ಗುಜರಾತ್ ಕೇಡಿ ಹಮೀದ್‍ಶಾ ಪ್ಲಾನುಗಳೆಲ್ಲ ವಾಪಸ್ ತಿರುಗಿ ಬಂದು ತನ್ನ ಬೋಳುತಲೆಯ ಮೇಲೇ ದಬ್ಬಾಕಿಕೊಂಡ ಮೇಲೆ, ಅವರಿಗೆ ರಾಜಕೀಯ ಭಯ ಶುರು ವಾಗಿದೆಯಂತೆ. ಕರ್ನಾಟಕದಲ್ಲಿ ಎಡಬಿಡಂಗಿ ಯಾಗಿರುವ ಹಮೀದ್‍ಶಾ ಸದ್ಯಕ್ಕೆ ತನ್ನ ಶತ್ರುಗಳ ಕಾಲ್ಬೆರಳಲ್ಲಿ ನೆಟಿಕೆ ತೆಗೆದು ಮಸಾಜು ಮಾಡಿ ತಮ್ಮ ಕಡೆಗೆ ಸೆಳೆಯುವ ಪ್ರಯತ್ನದಲ್ಲಿದ್ದಾರೆಂದು ತಿಳಿದುಬಂದಿದೆ. 4 ವರ್ಷ ಸತತವಾಗಿ ದೇಶದ ಜನರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಾ, ಪ್ರಾಬ್ಲಂಗಳು ಬಂದ್ರೆ ಸಾಕು, ವಿದೇಶಕ್ಕೆ ಓಡಿ ಹೋಗುವುದನ್ನೇ ಒಂದು ಚಾಳಿ ಮಾಡಿಕೊಂಡಿದ್ದ ನಾಲಾಯಕ್ ಪಕೋಡೇಂದ್ರನ ಆಟಾಟೋಪಗಳಿಗೆ ಪಕ್ಷದ ಮಾನ ಮರ್ಯಾದೆ ಹಡಾಲೆದ್ದು ಹೋದ ಮೇಲೆ ಈ ಬೋಳುತಲೆ ಕ್ರಿಮಿನಲ್ ಮತ್ತು ಪಕೋಡೇಂದ್ರನ ಕಣ್ಕಟ್ ಕಸುಬಿನ ಅಂಗಡಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ದಬ್ಬಾಕಿಕೊಳ್ಳುವುದು ನಿಶ್ಚಯ ಎಂಬ ವರದಿಗಳು ಎಲ್ಲೆಡೆಯಿಂದ ಬರುತ್ತಿವೆ.

****

ತಮ್ಮ ಪಾಡಿಗೆ ತಾವು ‘ಮಂದಿರ್ ವಹೀ ಬನಾಯೇಂಗೆ, ಸಂಡಾಸ್ ಯಹೀ ಬನಾಯೇಂಗೆ’ ಎಂದು ಕೀರಲುಧ್ವನಿಯಲ್ಲಿ ಕಿರುಚಾಡುತ್ತ ತಿರುಗುತ್ತಿದ್ದ ಸನ್ಮಾನ್ಯ ‘ತೇಜಾವರ ಸ್ವಾಮಿ’ಗಳ ತಲೆಯೊಳಗೆ ಇದ್ದಕ್ಕಿದ್ದಂತೆ 100 ಕ್ಯಾಂಡಲ್ ಬಲ್ಪೊಂದು ಠಣಾರನೆ ಫಳಫಳಿಸಿದೆ ಎಂದು ಗೊತ್ತಾಗಿದೆ. ಈ ಪಕೋಡೇಂದ್ರ ಒಬ್ಬ ನಾಲಾಯಕ್, ಸುಳ್ಳುಪುರುಕ.. ಇವನಿಂದ ಮೂರುಪೈಸೆಯ ಉಪಯೋಗ ಆಗಿಲ್ಲ, ಕಪ್ಪುಹಣವನ್ನ ಗಂಟುಕಟ್ಟಿಕೊಂಡು ತಲೆಮೇಲೆ ಹೊತ್ಕೊಂಡ್ ತರ್ತೀನಿ ಅಂದಿದ್ದ ಈತ, ಸ್ವಿಸ್ ಬ್ಯಾಂಕಿಂದ ಒಂದು ಸೊಳ್ಳೆಯನ್ನೂ ಹಿಡಿದು ತಂದಿಲ್ಲ. ಗಂಗಾನದಿ ಸ್ವಚ್ಛ ಮಾಡ್ತೀನಿ ಅಂದೋನು ದೇಶದೇಶಗಳ ಪ್ಲೇನು ಹತ್ತಿ ಅಪಾಪೋಲಿ ಥರ ಓಡಾಡ್ಕೊಂಡವ್ನೆ ಎಂದು ತಮ್ಮ ಅಸಮಾಧಾನ ಹೊರಗೆಡವಿದ್ದಾರೆ. ತೇಜಾವರ ಶ್ರೀಗಳ ಈ ಅಬ್ಬರ-ಬೊಬ್ಬರವನ್ನು ಕೇಳುತ್ತಿದ್ದಂತೆ ತೊಡೆಸಂದಿಗೆ ಓತಿಕ್ಯಾತ ಹೊಕ್ಕಂತಾದ ಈಶು ಅಂಕಲ್.. ‘ಪಾಪ ಶ್ರೀಗಳಿಗೆ ವಯಸ್ಸಾಗಿ, ಅರುಳು-ಮರುಳು ಆಡಿದಂಗೆ ಆಡ್ತಾವ್ರೆ.. ಅವ್ರನ್ನ ನಾನೇ ಕೈ ಹಿಡಿದು ದರದರ ಎಳ್ಕೊಂಡು ಹೋಗಿ ಹೆಣ ಮುಳುಗಿಸೋ ಗಂಗಾನದಿಯೊಳಗೆ 3 ಸಲ ಮುಳುಗಿಸಿ ವಾಪಸ್ ಕರ್ಕೊಂಡ್ ಬರ್ತೀನಿ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರ್ರಿಯಿಸಿರೋ ತೇಜಾವರ ಶ್ರೀಗಳು.. ಈ ಈಶು ನನ್ ಮೇಲೆ ಯಾವ್ದೋ ಹಳೇ ಸೇಡನ್ನ ತೀರಿಸಿಕೊಳ್ಳೋಕೆ ಪ್ಲಾನ್ ಮಾಡಿದ್ದಾನೆ.. ನಾನು ಯಾವ ಕಾರಣಕ್ಕೂ ಅವನ ಜೊತೆ ಹೋಗೋದಿಲ್ಲ ಎಂದು ಹೇಳಿದ ಸುದ್ದಿ ಇನ್ನೂ ವರದಿಯಾಗಿಲ್ಲ.

****

ಮಾತಿಗೆ ಮೂರು ಸಲ ಸೈನಿಕರನ್ನು ಎಳೆತಂದು ದೇಶಭಕ್ತಿ ಅಂದ್ರೆ ಸೈನಿಕರನ್ನು ತೋರಿಸಿ ಪ್ರಶ್ನೆಗಳಿಂದ ತಲೆ ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಕಮಲ ಪಕ್ಷದದವರು ಈಗ ಭಯಂಕರ ಕೆಸರಿನ ಹೊಂಡಕ್ಕೆ ತಲೆಯಿಟ್ಟು ಸಿಗೆÉಬಿದ್ದಿದ್ದಾರೆ. ಸೈನಿಕರ ಹೆಣವಿಡುವ ಪೆಟ್ಟಿಗೆಯಲ್ಲೂ ಹಣ ತಿಂದÀ ಈ ಎಂಜಲು ಹೇತ್ಲಾಂಡಿಗಳು ಸೈನಿಕರ ಯೂನಿಫಾರ್ಮಿಗೂ ಹಣ ಕೊಡದೆ ಕೈ ಎತ್ತಿರುವುದು ಬಯಲಾಗಿದೆ. ತನ್ನ ಕಿಸಲಗೇಡಿ ಮುಸುಡಿಯನ್ನು ಪತ್ರಿಕೆಗಳಲ್ಲಿ ಪ್ರಿಂಟು ಹಾಕಿಸಿಕೊಳ್ಳಲು ನಾಲ್ಕೂವರೆ ಸಾವಿರ ಕೋಟಿ ಜನರ ದುಡ್ಡನ್ನು ಬಳಸಿದ ಪಕೋಡೇಂದ್ರನಿಗೆ ಸೈನಿಕರ ಯೂನಿಫಾರ್ಮಿಗೆ ಕೊಡುವಷ್ಟೂ ಹಣವಿಲ್ಲವೇ ಎಂದು ಜನರು ಜರ್ದಾಬೀಡ ಜಗಿದು ಉಗಿಯುತ್ತಿದ್ದಾರೆ. ಇಷ್ಟಾದರೂ ನಾಚಿಕೆಯಿಲ್ಲದ ಪಕೋಡೇಂದ್ರನು ಬೀಡಾ ಬಿದ್ದ ಮುಖವನ್ನು ಒರೆಸಿಕೊಂಡು ಮೀಸೆ ಮೇಲೆ ಮಾತ್ರ ಬಿದ್ದಿಲ್ಲ ಎಂದು ತನ್ನ 56 ಇಂಚಿನ ಪೃಷ್ಠವನ್ನು ತಟ್ಟಿಕೊಳ್ಳುತ್ತಿದ್ದಾನೆಂದು ರಾಜಧಾನಿಯಿಂದ ವರದಿಯಾಗಿದೆ.

ಇಲ್ಲಿಗೆ ಅಟ್ಯಾಕ್ ಹನ್ಮಂತ ಪ್ರಸ್ತುತಪಡಿಸುವ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮುಂದಿನವಾರ ಮತ್ತೆ ಸಿಗೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...