Homeಅಂತರಾಷ್ಟ್ರೀಯಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

- Advertisement -
- Advertisement -

ಪ್ಯಾಲೆಸ್ತೀನ್‌ ಮೇಲೆ ಬಾಂಬ್‌ ದಾಳಿ ಮೂಲಕ ನಿರಂತರ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌, ಗಾಝಾ ಪಟ್ಟಿ ಮತ್ತು ಈಜಿಪ್ಟ್ ನಡುವಿನ ಗಡಿ ವಲಯವು ಇಸ್ರೇಲ್‌ನ ನಿಯಂತ್ರಣದಲ್ಲಿರಬೇಕು ಎಂದು ಬಯಸುತ್ತಿದೆ. ಈ ಕುರಿತು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೆಯನ್ನು ನೀಡಿದ್ದಾರೆ. ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವ ಮತ್ತು ಹಮಾಸ್‌ನ್ನು ನಿರ್ನಾಮ ಮಾಡುವವರೆಗೆ ಯುದ್ಧ ಮುಂದುವರಿಸುವುದಾಗಿ ಹೇಳಿದ್ದಾರೆ.

ಯುದ್ಧ 13ನೇ ವಾರ ಪ್ರವೇಶಿಸಿದ ಹಿನ್ನೆಲೆ ಸುದ್ದಿಗೋಷ್ಠಿಯನ್ನು ನಡೆಸಿದ ಬೆಂಜಮಿನ್ ನೆತನ್ಯಾಹು,  ಹಮಾಸ್‌ನ್ನು ನಿರ್ಣಾಮ ಮಾಡಲಾಗುವುದು ಮತ್ತು ಗಾಝಾದಲ್ಲಿ ಸೆರೆಯಲ್ಲಿರುವ ಎಲ್ಲಾ ಇಸ್ರೇಲ್‌ ಜನರನ್ನು ಮನೆಗೆ ಕರೆತರುವ ಪ್ರಯತ್ನ ಮಾಡಲಾಗುವುದು. ಯುದ್ಧವು ಹಲವು ತಿಂಗಳುಗಳವರೆಗೆ ಇನ್ನು ಕೂಡ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಫಿಲಡೆಲ್ಫಿ ಕಾರಿಡಾರ್ ನಮ್ಮ ಕೈಯಲ್ಲಿರಬೇಕು. ಅದನ್ನು ಮುಚ್ಚಬೇಕು. ಹಮಾಸ್‌ ಸಶಸ್ತ್ರ ಗುಂಪು ಅಕ್ಟೋಬರ್ 7ರಂದು ನಡೆಸಿದ ದಾಳಿಯಂತೆ ಮತ್ತೆ ದಾಳಿ ಪುನರಾವರ್ತನೆಯಾಗದಂತೆ ತಡೆಯಲು ಗಾಝಾದಲ್ಲಿ ಹಮಾಸ್‌ನ್ನು ನಾಶಮಾಡಲು ಮತ್ತು ಸಶಸ್ತ್ರೀಕರಣಗೊಳಿಸಲು ಇಸ್ರೇಲ್ ಉದ್ದೇಶಿಸಿದೆ. ಯುದ್ಧವು ನಡೆಯುತ್ತಿದೆ. ನಾವು ಎಲ್ಲಾ ರಂಗಗಳಲ್ಲಿ ಹೋರಾಡುತ್ತಿದ್ದೇವೆ. ವಿಜಯ ಸಾಧಿಸಲು ಸಮಯ ಬೇಕಾಗುತ್ತದೆ. ಇಸ್ರೇಲ್‌ ಸೈನ್ಯದ ಮುಖ್ಯಸ್ಥರು ಹೇಳಿದಂತೆ ಯುದ್ಧವು ಇನ್ನೂ ಹಲವು ತಿಂಗಳುಗಳವರೆಗೆ ಮುಂದುವರಿಯುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಇದಲ್ಲದೆ ಇರಾನ್ ಬೆಂಬಲಿತ ಲೆಬನಾನಿನ ಸಶಸ್ತ್ರ ಗುಂಪು ಹೆಜ್ಬುಲ್ಲಾ ಮೊಂಡುತನ ಮುಂದುವರಿಸಿದರೆ, ಅದು ಕಂಡರಿಯದ ಹೊಡೆತಗಳನ್ನು ಅನುಭವಿಸುತ್ತದೆ ಮತ್ತು ಇರಾನ್ ಕೂಡ ಎಂದು ನೆತನ್ಯಾಹು ವಿವರಿಸದೆ ಹೇಳಿದರು. ಇದರಿಂದ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿಯು ಉದ್ಭವಿಸಿದೆ.

ಇಸ್ರೇಲ್‌ ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ನಡೆಸುತ್ತಿರುವ ಯುದ್ಧದಲ್ಲಿ 24,000ಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. 10,000ಕ್ಕೂ ಅಧಿಕ ಮಕ್ಕಳು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದು, ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಹತ್ಯಾಕಾಂಡವನ್ನು ನಡೆಸುತ್ತಿದೆ ಎಂದು ವಿವಿಧ ರಾಷ್ಟ್ರಗಳು ಕದನ ವಿರಾಮಕ್ಕೆ ಆಗ್ರಹಿಸುತ್ತಿದೆ. ಆದರೆ ಇಸ್ರೇಲ್‌ ಮಾತ್ರ ಗಾಝಾದಲ್ಲಿ ಅಮಾಯಕರ ಮೇಲೆ ತಮ್ಮ ಕ್ರೌರ್ಯವನ್ನು ಮುಂದುವರಿಸಿದೆ. ಅಮೆರಿಕ, ಬ್ರಿಟನ್‌ನಂತಹ ರಾಷ್ಟ್ರಗಳು ಈ ಕೃತ್ಯಕ್ಕೆ ಬೆಂಬಲಿಸುತ್ತಿದೆ.

ನಿನ್ನೆಯಷ್ಟೇ ಗಾಝಾದ ಮೇಲೆ ಮಿಲಿಟರಿ ಆಕ್ರಮಣದ ಮೂಲಕ ಇಸ್ರೇಲ್‌ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ವಿರುದ್ಧ ಮೊಕದ್ದಮೆಯನ್ನು ಹೂಡಿದೆ ಮತ್ತು ಅರ್ಜಿಯ ತ್ವರಿತ ವಿಲೇವಾರಿಗೆ ಆಗ್ರಹಿಸಿತ್ತು.

ಇದನ್ನು ಓದಿ: ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...