Homeಮುಖಪುಟಹೊಸ ವರ್ಷಾಚರಣೆ; ಬೆಂಗಳೂರಿನಾದ್ಯಂತ ಸಂಚಾರ ಮಾರ್ಗದಲ್ಲಿ ಹಲವು ಬದಲಾವಣೆ

ಹೊಸ ವರ್ಷಾಚರಣೆ; ಬೆಂಗಳೂರಿನಾದ್ಯಂತ ಸಂಚಾರ ಮಾರ್ಗದಲ್ಲಿ ಹಲವು ಬದಲಾವಣೆ

- Advertisement -
- Advertisement -

ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ಇಂದು ರಾತ್ರಿ ನಗರದ ಅನೇಕ ಸ್ಥಳಗಳು ಅದ್ಧೂರಿ ಆಚರಣೆಗೆ ಸಜ್ಜಾಗಿವೆ. ಹೊಸ ವರ್ಷದ ರಾತ್ರಿಯಂದು ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಜನರು ಸೇರುತ್ತಾರೆ. ಮುಖ್ಯವಾಗಿ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದಂತಹ ಪ್ರದೇಶಗಳಲ್ಲಿನ ಸಂಭ್ರಮಾಚರಣೆಗಳನ್ನು ಸೂಕ್ಷ್ಮವಾಗಿ ಗಮನಿಸಲು ಬೆಂಗಳೂರು ಪೊಲೀಸರು ಸಜ್ಜಾಗಿದ್ದಾರೆ.

ನಗರದಾದ್ಯಂತ ಇರುವ ಪ್ರಮುಖ ಫ್ಲೈಓವರ್‌ಗಳನ್ನು ಭಾನುವಾರ ರಾತ್ರಿ 11 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಮುಚ್ಚಲಾಗುತ್ತದೆ. ಹೆಣ್ಣೂರು ಮೇಲ್ಸೇತುವೆ, ಐಟಿಸಿ ಮೇಲ್ಸೇತುವೆ, ಬಾಣಸವಾಡಿ ಮುಖ್ಯರಸ್ತೆ ಮೇಲ್ಸೇತುವೆ, ಲಿಂಗರಾಜಪುರ ಮೇಲ್ಸೇತುವೆ, ಹೆಣ್ಣೂರು ಮುಖ್ಯರಸ್ತೆ ಮೇಲ್ಸೇತುವೆ, ದೊಮ್ಮಲೂರು ಮೇಲ್ಸೇತುವೆ, ನಾಗವಾರ ಫ್ಲೈಓವರ್, ಮೇಡಹಳ್ಳಿ ಫ್ಲೈಓವರ್, ಓಎಂ ರಸ್ತೆ ಮೇಲ್ಸೇತುವೆ, ದೇವರಬೀಸನಹಳ್ಳಿ ಮೇಲ್ಸೇತುವೆ, ಮಹದೇವಪುರ ಮೇಲ್ಸೇತುವೆ, ಮಹದೇವಪುರ ಮೇಲ್ಸೇತುವೆ, ಕೆಆರ್ ಮಾರ್ಕೆಟ್ ಮೇಲ್ಸೇತುವೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.

ವೈಟ್‌ಫಿಲ್ಡ್‌ನಲ್ಲಿರುವ ಫೀನಿಕ್ಸ್ ಮಾಲಿಗೆ ಭೇಟಿ ನೀಡುವ ಜನರು ಕ್ಯಾಬ್‌ಗಳನ್ನು ಮೀಸಲಾದ ಪಿಕ್ ಅಪ್ ಮತ್ತು ಡ್ರಾಪ್ ಪಾಯಿಂಟ್‌ಗಳನ್ನು ಹೊರತುಪಡಿಸಿ ಬೇರೆಡೆ ನಿಲ್ಲಿಸುವುದಕ್ಕೆ ಅನುಮತಿ ಇಲ್ಲ ಎಂಬುದನ್ನು ಗಮನಿಸಬೇಕು. ಫೀನಿಕ್ಸ್ ಮಾಲ್‌ಗೆ ಬರುವವರಿಗೆ ಐಟಿಪಿಎಲ್ ಮುಖ್ಯರಸ್ತೆಯ ಬೆಸ್ಕಾಂ ಕಚೇರಿ ಬಳಿ ಡ್ರಾಪ್ ಪಾಯಿಂಟ್, ಸಿಂಗಯ್ಯನಪಾಳ್ಯ ಮೆಟ್ರೋ ನಿಲ್ದಾಣದ ಬಳಿ ಪಿಕ್ ಅಪ್ ಪಾಯಿಂಟ್. ಇಂದಿರಾನಗರಕ್ಕೆ ಬರುವವರಿಗೆ ಇಂದಿರಾನಗರ 100 ಅಡಿ ರಸ್ತೆಯಲ್ಲಿ 17ನೇ ಮುಖ್ಯರಸ್ತೆ ಜಂಕ್ಷನ್ ಬಳಿ ಡ್ರಾಪ್ ಪಾಯಿಂಟ್, ಇಂದಿರಾನಗರ 100 ಅಡಿ ರಸ್ತೆಯ ಬಿಎಂ ಶ್ರೀ ಜಂಕ್ಷನ್ ಬಳಿ ಪಿಕ್ ಅಪ್ ಪಾಯಿಂಟ್ ಗುರುತಿಸಲಾಗಿದೆ.

ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧ:

ಇಂದಿರಾನಗರ 100 ಅಡಿ ರಸ್ತೆ ಹಳೆ ಮದ್ರಾಸ್ ರಸ್ತೆ ಜಂಕ್ಷನ್‌ನಿಂದ ದೊಮ್ಮಲೂರು ಫ್ಲೈಓವರ್ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ. ಇಂದಿರಾನಗರ 12ನೇ ಮುಖ್ಯರಸ್ತೆ 80 ಅಡಿ ರಸ್ತೆಯಿಂದ ಇಂದಿರಾನಗರ ಡಬಲ್ ರೋಡ್ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿ. ಐಟಿಪಿಎಲ್ ಮುಖ್ಯರಸ್ತೆ ಬಿ.ನಾರಾಯಣಪುರ ಶೆಲ್ ಪೆಟ್ರೋಲ್ ಬಂಕ್ ನಿಂದ ಗರುಡಾಚಾರ್ಪಾಳ್ಯ ಡೆಕಾಥ್ಲಾನ್ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇವುಗಳ ಹೊರತಾಗಿ ಹೊಸ ವರ್ಷದ ರಾತ್ರಿ ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಿಗೆ ವಾಹನಗಳನ್ನು ನಿರ್ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು ನಗರದ ಎಲ್ಲ ಪ್ರಮುಖ ಸ್ಥಳಗಳಲ್ಲಿ ನೈಟ್ ವಿಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ರೀತಿಯ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಲು ಜನರಿಗೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ; ಲೈಂಗಿಕ ಕಿರುಕುಳಕ್ಕೆ ಪ್ರತಿರೋಧ; ದಲಿತ ಯುವತಿಯನ್ನು ಬಿಸಿ ಎಣ್ಣೆಗೆ ತಳ್ಳಿದ ದುರುಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...