Homeಮುಖಪುಟಹಣಕಾಸು ಆಯೋಗದ ಅಧ್ಯಕ್ಷರಾಗಿ ಮೋದಿ ಆಪ್ತ ಅರವಿಂದ್ ಪನಗಾರಿಯಾ ನೇಮಕ

ಹಣಕಾಸು ಆಯೋಗದ ಅಧ್ಯಕ್ಷರಾಗಿ ಮೋದಿ ಆಪ್ತ ಅರವಿಂದ್ ಪನಗಾರಿಯಾ ನೇಮಕ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಪ್ತ ಮತ್ತು ಮಾಜಿ ಸಲಹೆಗಾರ ಅರವಿಂದ್ ಪನಗಾರಿಯಾ ಅವರನ್ನು ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಭಾರತ ಸರ್ಕಾರವು ಭಾನುವಾರ ಅರವಿಂದ್ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಿದೆ. ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ ಅವರು ಆಯೋಗದ ಕಾರ್ಯದರ್ಶಿಯಾಗಿರುತ್ತಾರೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಹಣಕಾಸು ಆಯೋಗ ರಾಜ್ಯಗಳಿಗೆ ತೆರಿಗೆಗಳ ಹಂಚಿಕೆ ಬಗ್ಗೆ ಶಿಫಾರಸ್ಸನ್ನು ಮಾಡುತ್ತದೆ.

ಇದಕ್ಕೂ ಮೊದಲು 2015ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿದ್ದರು. ಅರವಿಂದ್ ಪನಗಾರಿಯಾ ಅವರು ಇಂಡೋ–ಅಮೆರಿಕನ್ ಆರ್ಥಿಕ ತಜ್ಞರಾಗಿದ್ದು, ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವಿಶ್ವಬ್ಯಾಂಕ್, ಐಎಂಎಫ್, ಏಷಿಯನ್ ಡೆವಲಪ್‌ಮೆಂಟ್‌ ಬ್ಯಾಂಕ್‌ಗಳಲ್ಲಿ ಉನ್ನತ ಹುದ್ದೆಯನ್ನು ನಿಭಾಯಿಸಿರುವ ಅವರು ಅಪಾರ ಅನುಭವ ಹೊಂದಿದ್ದಾರೆ.

ಅರವಿಂದ್ ಪನಗಾರಿಯಾ ಅವರಿಗೆ ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ನೀತಿಯಲ್ಲಿನ ಕೊಡುಗೆಗಳಿಗಾಗಿ 2012 ರಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಅವರು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಅವರು ಕಾಲೇಜ್ ಪಾರ್ಕ್‌ನಲ್ಲಿರುವ ಮೇರಿಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ಪನಗಾರಿಯಾ ಅವರು ಈ ವರ್ಷದ ಆರಂಭದಲ್ಲಿ 2026ರ ವೇಳೆಗೆ ಭಾರತವು 3ನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆ ಎಂದು ಹೇಳಿದ್ದರು.

5 ವರ್ಷಕ್ಕೊಮ್ಮೆ ಕೇಂದ್ರ ಸರ್ಕಾರ ರಚಿಸುವ ಹಣಕಾಸು ಆಯೋಗ ಕೇಂದ್ರ ಹಾಗೂ ರಾಜ್ಯಗಳ ನಡುವೆ ತೆರಿಗೆ ಸಂಗ್ರಹದ ಹಂಚಿಕೆ ಬಗ್ಗೆ ಸಲಹೆ, ಸೂಚನೆ ಹಾಗೂ ಶಿಫಾರಸುಗಳನ್ನು ನೀಡುತ್ತದೆ. ಕೇಂದ್ರ ಸರ್ಕಾರ ಪ್ರತಿ ಶತ 42ರಷ್ಟು ತೆರಿಗೆ ಸಂಗ್ರಹವನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತದೆ. ಹಣಕಾಸು ಆಯೋಗವು 2025ರ ಅ.31 ರೊಳಗೆ 5 ವರ್ಷದ ತನ್ನ ವರದಿಯನ್ನು ಸಿದ್ದಪಡಿಸಿ ಒಪ್ಪಿಸಬೇಕು. ವರದಿಯು 2026ರ ಏ.1ರಿಂದ ಜಾರಿಗೆ ಬರಲಿದೆ.

ಇದನ್ನು ಓದಿ: ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...