Homeಮುಖಪುಟಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

ಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

- Advertisement -
- Advertisement -

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉಚ್ಚಾಟಿತ ಬಿಜೆಪಿ ನಾಯಕ ಕಮಲ್ ರಾವತ್ ಅವರನ್ನು ಭಾನುವಾರ ಸಂಜೆ ಚಂಪಾವತ್‌ನಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಬಿಜೆಪಿ ನಾಯಕ ರಾವತ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೋ) ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯನ್ನು ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೆ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ದಾಖಲಿಸಲು ಸಾಧ್ಯವಾಗಿಲ್ಲ.

ಚಂಪಾವತ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕನ ಮೇಲೆ ಉತ್ತರಾಖಂಡ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದರು. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ರಾವತ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿಯ ಚಂಪಾವತ್ ಜಿಲ್ಲಾಧ್ಯಕ್ಷ ನಿರ್ಮಲ್ ಮೆಹ್ರಾ ಹೇಳಿದ್ದಾರೆ.

‘ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಆತ ಪರಾರಿಯಾಗಿದ್ದು, ನಾವು ಅವನನ್ನು ಹುಡುಕುತ್ತಿದ್ದೇವೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು’ ಎಂದು ಚಂಪಾವತ್ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಶ್ ಉಪಾಧ್ಯಾಯ ಶನಿವಾರ ಮಾಧ್ಯಮಗಳಿಗೆ ತಿಳಿಸಿದ್ದರು.

‘ಈಗಾಗಲೇ ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ವಿಷಯವನ್ನು ಮಹಿಳಾ ಸಬ್ ಇನ್ಸ್ಪೆಕ್ಟರ್ ಪಿಂಕಿ ಧಾಮಿ ಅವರು ತನಿಖೆ ನಡೆಸುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ಉಪಾಧ್ಯಾಯ ಹೇಳಿದ್ದರು.

ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ರಾವತ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಆತನ ವಿರುದ್ಧ ಸೆಕ್ಷನ್ 363 (ಅಪಹರಣ), 354 (ಮಹಿಳೆಯರ ಮೇಲೆ ದೌರ್ಜನ್ಯ ಎಸಗುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ), 376 (ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

‘ರಾವತ್ ತನ್ನ 16 ವರ್ಷದ ಮಗಳನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾನೆ ಮತ್ತು ತನ್ನ ಅಪರಾಧವನ್ನು ಬಹಿರಂಗಪಡಿಸಿದಂತೆ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ’ ಎಂದು ಆಕೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

ಉತ್ತರಾಖಂಡದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಅಪರಾಧ ಪ್ರಕರಣಗಳಲ್ಲಿ ಹಲವು ಬಿಜೆಪಿ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದೆ.

‘ಮೊದಲು, ರಿಷಿಕೇಶದಲ್ಲಿ ಮಹಿಳಾ ಸ್ವಾಗತಕಾರಿಣಿಯನ್ನು ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಮಗ ಪುಲ್ಕಿತ್ ಆರ್ಯ ಕೊಲೆ ಮಾಡಿದ್ದಾನೆ, ಈಗ ಚಂಪಾವತ್‌ನ ಬಿಜೆಪಿ ಮಂಡಲ ಅಧ್ಯಕ್ಷ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿದ್ದಾನೆ’ ಎಂದು ಉತ್ತರಾಖಂಡ ಕಾಂಗ್ರೆಸ್ ವಕ್ತಾರ ಗರಿಮಾ ಮೆಹ್ರಾ ದಸೌನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ರಾವತ್ ವಿರುದ್ಧ ದೂರು ದಾಖಲಾದ ಗಂಟೆಗಳ ನಂತರ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಪ್ರಕರಣವನ್ನು ದಾಖಲಿಸಲು ಹಿಂದೇಟು ಹಾಕಿದರು. ಎಂಟು ಗಂಟೆಗಳ ವಿಳಂಬದ ನಂತರ ಎಫ್ಐಆರ್ ದಾಖಲಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ರಾಜ್ಯ ಪೊಲೀಸರು ಆಡಳಿತ ಪಕ್ಷದ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ದಸೌನಿ ಆರೋಪಿಸಿದ್ದಾರೆ.

ಮಹಿಳೆಯರ ಘನತೆಯ ಜೊತೆ ಆಟವಾಡುವ ಕಾರ್ಯಕರ್ತರನ್ನು ಪಕ್ಷ ಸಹಿಸುವುದಿಲ್ಲ ಮತ್ತು ತಪ್ಪಿತಸ್ಥರೆಂದು ಕಂಡುಬಂದರೆ ಆರೋಪಿ ಬಿಜೆಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಬಿಜೆಪಿ ಘಟಕ ಹೇಳಿದೆ.

‘ಪೊಲೀಸ್ ತನಿಖೆಯಲ್ಲಿ ಅವರು ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ (ಆರೋಪಿ ಬಿಜೆಪಿ ನಾಯಕ) ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ಘನತೆಯೊಂದಿಗೆ ಆಟವಾಡುವ ಯಾವುದೇ ಕಾರ್ಯಕರ್ತರನ್ನು ನಮ್ಮ ಪಕ್ಷ ಸಹಿಸುವುದಿಲ್ಲ’ ಎಂದು ಬಿಜೆಪಿಯ ಚಂಪಾವತ್ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಖೇಶ್ ಕಲ್ಖುರಿಯಾ ಹೇಳಿದರು.

ಇದನ್ನೂ ಓದಿ; ಬಿಹಾರ: ದಲಿತ ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸ್ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...