Homeಮುಖಪುಟಬಿಹಾರದಲ್ಲಿ ವಿಚಿತ್ರ ಕಳ್ಳತನ; ರಾತ್ರೋರಾತ್ರಿ ಕೊಳವನ್ನೆ ಕದ್ದ ಕದೀಮರು!

ಬಿಹಾರದಲ್ಲಿ ವಿಚಿತ್ರ ಕಳ್ಳತನ; ರಾತ್ರೋರಾತ್ರಿ ಕೊಳವನ್ನೆ ಕದ್ದ ಕದೀಮರು!

- Advertisement -
- Advertisement -

60-ಅಡಿ ಸೇತುವೆ ಮತ್ತು ರೈಲು ಎಂಜಿನ್ ಕಳ್ಳತನದಿಂದ ಸುದ್ದಿಯಾಗಿದ್ದ ಬಿಹಾರದಲ್ಲಿ ಇದೀಗ ಸಂಪೂರ್ಣ ಕೊಳವೊಂದು ಕಣ್ಮರೆಯಾಗಿದೆ! ರಾಜ್ಯದ ವಿಲಕ್ಷಣ ಕಳ್ಳತನಗಳ ಪಟ್ಟಿಗೆ ಇದೀಗ ಇಡೀ ಕೊಳದ “ಕಳ್ಳತನ” ಪ್ರಕರಣವೂ ಸೇರ್ಪಡೆಯಾಗಿದೆ.

ಕೊಳ ಕದ್ದ ಕದೀಮರು ರಾತ್ರೋರಾತ್ರಿ ಅದರ ಮೇಲೆ ಗುಡಿಸಲು ನಿರ್ಮಿಸಲಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕೊಳದ ಜಾಗದಲ್ಲಿ ಗುಡಿಸಲು ಕಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಜಮೀನು ವಶಕ್ಕೆ ಇಡೀ ಕೊಳಕ್ಕೆ ಮಣ್ಣು ತುಂಬಿದ್ದ ಭೂಮಾಫಿಯಾ ಸದಸ್ಯರು ಪೊಲೀಸರು ಬರುವಷ್ಟರಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

‘ಈ ಕೊಳವು ಸಾರ್ವಜನಿಕ ಒಡೆತನದಲ್ಲಿದ್ದು, ಇದರಲ್ಲಿ ಮೀನು ಸಾಗಾಣಿಕೆ ಹಾಗೂ ಇತರ ಚಟುವಟಿಕೆಗಳಿಗೆ ನೀರನ್ನು ಬಳಸಲಾಗುತ್ತಿತ್ತು’ ಎಂದು ಸ್ಥಳೀಯರು ತಿಳಿಸಿದ್ದು, ದರ್ಬಂಗಾದಲ್ಲಿ ಭೂಮಿಯ ಬೆಲೆ ಏರಿಕೆ ಆಗಿರುವುದಿಂದ ಭೂಗಳ್ಳರ ಕಣ್ಣು ಜಲಮೂಲದ ಮೇಲೆ ಬಿದ್ದಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕೊಳ ತುಂಬಿಸುವ ಕಾರ್ಯ ಆರಂಭವಾದಾಗಲೆ ಸ್ಥಳೀಯರು ಅಧಿಕಾರಿಗಳಿಗೆ ದೂರು ನೀಡಿದ್ದರು.

ಸಂಬಂಧಪಟ್ಟು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದ ನಂತರ ಕೆಲಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಆದರೆ, ಭೂಮಾಫಿಯಾದವರು ಕತ್ತಲೆಯಲ್ಲಿ ರಹಸ್ಯವಾಗಿ ಕೊಳಕ್ಕೆ ಮಣ್ಣು ತುಂಬಿಸುವ ಕೆಲಸ ಮಾಡಿದ್ದಾರೆ. ಹೀಗೆ ರಾತ್ರಿ ಕಾರ್ಯಾಚಾರಣೆಯಲ್ಲಿ ಅವರು ಇಡೀ ಕೊಳವು ಸಂಪೂರ್ಣವಾಗಿ ಕಣ್ಮರೆಯಾಗುವಂತೆ ಮಾಡಿದ್ದಾರೆ.

‘10-15 ದಿನಗಳಲ್ಲಿ ಕೊಳಕ್ಕೆ ಸಂಪೂರ್ಣವಾಗಿ ಮಣ್ಣು ತುಂಬಿದ್ದಾರೆ’ ಎಂದು ಜನರು ಹೇಳುತ್ತಾರೆ. ರಾತ್ರಿಯಲ್ಲಿ ಮಾತ್ರ ಕೆಲಸ ಮಾಡಲಾಗಿದ್ದು, ಅಧಿಕಾರಿಗಳು ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದಾಗ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್ಡಿಪಿಒ) ಅಮಿತ್ ಕುಮಾರ್ ಹೇಳಿದರು.

ವಿಲಕ್ಷಣ ಕಳ್ಳತನಕ್ಕೆ ಸಾಕ್ಷಿಯಾದ ಬಿಹಾರ:

2022ರ ನವೆಂಬರ್‌ನಲ್ಲಿ ರೈಲ್ವೆ ಡೀಸೆಲ್ ಎಂಜಿನ್ ಕಳ್ಳತನವಾಗಿತ್ತು! ಬೇಗುಸರೈನಲ್ಲಿರುವ ರೈಲ್ವೆ ಯಾರ್ಡ್ ಅಂಗಳಕ್ಕೆ ಸುರಂಗ ಕೊರೆದಿದ್ದ ಕಳ್ಳರು, ಇಂಜಿನ್ನಿನ ಬಿಡಿಭಾಗಗಳನ್ನು ಕದಿಯಲು ಆರಂಭಿಸಿದ್ದರು. ರಿಪೇರಿಗೆ ಬಂದಿದ್ದ ಇಂಜಿನ್ನ ಬಿಡಿ ಭಾಗಗಳನ್ನು ಬೇರ್ಪಡಿಸಿದ್ದ ಕದೀಮರು, ಪೂರ್ಣ ಇಂಜಿನ್ ತೆಗೆದುಕೊಂಡು ಹೋಗಿದ್ದರು.

ಅದೇ ವರ್ಷದ ಆರಂಭದಲ್ಲಿ, ರೋಹ್ತಾಸ್ ಜಿಲ್ಲೆಯಲ್ಲಿ ಸಂಪೂರ್ಣ 60 ಅಡಿ ಸೇತುವೆಯನ್ನು ಕಳವು ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 247 ಕೆಜಿ ಕಬ್ಬಿಣದ ನಾಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳರು ಜೆಸಿಬಿ ಮತ್ತು ಗ್ಯಾಸ್ ಕಟ್ಟರ್ ಬಳಸಿ ಅದನ್ನು ಕೆಡವಿದ್ದು, ಕೇವಲ ಮೂರೇ ದಿನಗಳಲ್ಲಿ ಸೇತುವೆ ನಾಪತ್ತೆಯಾಗಿತ್ತು.

ಇದನ್ನೂ ಓದಿ; ಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...