Homeಮುಖಪುಟಬಿಹಾರದಲ್ಲಿ ವಿಚಿತ್ರ ಕಳ್ಳತನ; ರಾತ್ರೋರಾತ್ರಿ ಕೊಳವನ್ನೆ ಕದ್ದ ಕದೀಮರು!

ಬಿಹಾರದಲ್ಲಿ ವಿಚಿತ್ರ ಕಳ್ಳತನ; ರಾತ್ರೋರಾತ್ರಿ ಕೊಳವನ್ನೆ ಕದ್ದ ಕದೀಮರು!

- Advertisement -
- Advertisement -

60-ಅಡಿ ಸೇತುವೆ ಮತ್ತು ರೈಲು ಎಂಜಿನ್ ಕಳ್ಳತನದಿಂದ ಸುದ್ದಿಯಾಗಿದ್ದ ಬಿಹಾರದಲ್ಲಿ ಇದೀಗ ಸಂಪೂರ್ಣ ಕೊಳವೊಂದು ಕಣ್ಮರೆಯಾಗಿದೆ! ರಾಜ್ಯದ ವಿಲಕ್ಷಣ ಕಳ್ಳತನಗಳ ಪಟ್ಟಿಗೆ ಇದೀಗ ಇಡೀ ಕೊಳದ “ಕಳ್ಳತನ” ಪ್ರಕರಣವೂ ಸೇರ್ಪಡೆಯಾಗಿದೆ.

ಕೊಳ ಕದ್ದ ಕದೀಮರು ರಾತ್ರೋರಾತ್ರಿ ಅದರ ಮೇಲೆ ಗುಡಿಸಲು ನಿರ್ಮಿಸಲಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕೊಳದ ಜಾಗದಲ್ಲಿ ಗುಡಿಸಲು ಕಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಜಮೀನು ವಶಕ್ಕೆ ಇಡೀ ಕೊಳಕ್ಕೆ ಮಣ್ಣು ತುಂಬಿದ್ದ ಭೂಮಾಫಿಯಾ ಸದಸ್ಯರು ಪೊಲೀಸರು ಬರುವಷ್ಟರಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

‘ಈ ಕೊಳವು ಸಾರ್ವಜನಿಕ ಒಡೆತನದಲ್ಲಿದ್ದು, ಇದರಲ್ಲಿ ಮೀನು ಸಾಗಾಣಿಕೆ ಹಾಗೂ ಇತರ ಚಟುವಟಿಕೆಗಳಿಗೆ ನೀರನ್ನು ಬಳಸಲಾಗುತ್ತಿತ್ತು’ ಎಂದು ಸ್ಥಳೀಯರು ತಿಳಿಸಿದ್ದು, ದರ್ಬಂಗಾದಲ್ಲಿ ಭೂಮಿಯ ಬೆಲೆ ಏರಿಕೆ ಆಗಿರುವುದಿಂದ ಭೂಗಳ್ಳರ ಕಣ್ಣು ಜಲಮೂಲದ ಮೇಲೆ ಬಿದ್ದಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕೊಳ ತುಂಬಿಸುವ ಕಾರ್ಯ ಆರಂಭವಾದಾಗಲೆ ಸ್ಥಳೀಯರು ಅಧಿಕಾರಿಗಳಿಗೆ ದೂರು ನೀಡಿದ್ದರು.

ಸಂಬಂಧಪಟ್ಟು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದ ನಂತರ ಕೆಲಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಆದರೆ, ಭೂಮಾಫಿಯಾದವರು ಕತ್ತಲೆಯಲ್ಲಿ ರಹಸ್ಯವಾಗಿ ಕೊಳಕ್ಕೆ ಮಣ್ಣು ತುಂಬಿಸುವ ಕೆಲಸ ಮಾಡಿದ್ದಾರೆ. ಹೀಗೆ ರಾತ್ರಿ ಕಾರ್ಯಾಚಾರಣೆಯಲ್ಲಿ ಅವರು ಇಡೀ ಕೊಳವು ಸಂಪೂರ್ಣವಾಗಿ ಕಣ್ಮರೆಯಾಗುವಂತೆ ಮಾಡಿದ್ದಾರೆ.

‘10-15 ದಿನಗಳಲ್ಲಿ ಕೊಳಕ್ಕೆ ಸಂಪೂರ್ಣವಾಗಿ ಮಣ್ಣು ತುಂಬಿದ್ದಾರೆ’ ಎಂದು ಜನರು ಹೇಳುತ್ತಾರೆ. ರಾತ್ರಿಯಲ್ಲಿ ಮಾತ್ರ ಕೆಲಸ ಮಾಡಲಾಗಿದ್ದು, ಅಧಿಕಾರಿಗಳು ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದಾಗ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್ಡಿಪಿಒ) ಅಮಿತ್ ಕುಮಾರ್ ಹೇಳಿದರು.

ವಿಲಕ್ಷಣ ಕಳ್ಳತನಕ್ಕೆ ಸಾಕ್ಷಿಯಾದ ಬಿಹಾರ:

2022ರ ನವೆಂಬರ್‌ನಲ್ಲಿ ರೈಲ್ವೆ ಡೀಸೆಲ್ ಎಂಜಿನ್ ಕಳ್ಳತನವಾಗಿತ್ತು! ಬೇಗುಸರೈನಲ್ಲಿರುವ ರೈಲ್ವೆ ಯಾರ್ಡ್ ಅಂಗಳಕ್ಕೆ ಸುರಂಗ ಕೊರೆದಿದ್ದ ಕಳ್ಳರು, ಇಂಜಿನ್ನಿನ ಬಿಡಿಭಾಗಗಳನ್ನು ಕದಿಯಲು ಆರಂಭಿಸಿದ್ದರು. ರಿಪೇರಿಗೆ ಬಂದಿದ್ದ ಇಂಜಿನ್ನ ಬಿಡಿ ಭಾಗಗಳನ್ನು ಬೇರ್ಪಡಿಸಿದ್ದ ಕದೀಮರು, ಪೂರ್ಣ ಇಂಜಿನ್ ತೆಗೆದುಕೊಂಡು ಹೋಗಿದ್ದರು.

ಅದೇ ವರ್ಷದ ಆರಂಭದಲ್ಲಿ, ರೋಹ್ತಾಸ್ ಜಿಲ್ಲೆಯಲ್ಲಿ ಸಂಪೂರ್ಣ 60 ಅಡಿ ಸೇತುವೆಯನ್ನು ಕಳವು ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 247 ಕೆಜಿ ಕಬ್ಬಿಣದ ನಾಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳರು ಜೆಸಿಬಿ ಮತ್ತು ಗ್ಯಾಸ್ ಕಟ್ಟರ್ ಬಳಸಿ ಅದನ್ನು ಕೆಡವಿದ್ದು, ಕೇವಲ ಮೂರೇ ದಿನಗಳಲ್ಲಿ ಸೇತುವೆ ನಾಪತ್ತೆಯಾಗಿತ್ತು.

ಇದನ್ನೂ ಓದಿ; ಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...