Homeಚಳವಳಿಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

ಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

- Advertisement -
- Advertisement -

ಇದು ಇತ್ತೀಚಿನ ಒಂದು ಸುದ್ದಿ: ಪ್ರಜಾವಾಣಿ 19 ಸೆಪ್ಟೆಂಬರ್ 2019ರ ಸಂಚಿಕೆಯಲ್ಲಿ `ಮೋದಿಗಾಗಿ ಜನರ ಮುಳುಗಡೆ’ ಎಂಬ ತಲೆಬರಹದಲ್ಲಿ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್ ಅವರ ಟ್ವೀಟ್‍ನ್ನು ಉಲ್ಲೇಖಿಸಲಾಗಿದೆ.

ಮೇಧಾ ಪಾಟ್ಕರ್ ಅವರ ಟ್ವೀಟ್ ಹೀಗಿದೆ: `ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಸಲುವಾಗಿ ಸರ್ದಾರ್ ಸರೋವರವನ್ನು ಭರ್ತಿ ಮಾಡಲಾಗಿದೆ. ಹೀಗೆ ಭರ್ತಿ ಮಾಡಿರುವುದರಿಂದ ಸರೋವರದ ಹಿನ್ನೀರು 250 ಕಿ.ಮೀ.ನಷ್ಟು ಹಿಂದಕ್ಕೆ ಬಂದಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರ ಗೋಳು ಮೋದಿ ಜನ್ಮ ದಿನಾಚರಣೆ ಸಂಭ್ರಮದಲ್ಲಿ ಮೂಲೆಗುಂಪಾಗಿದೆ’

ಇದನ್ನು ಓದಿದ ಮೇಲೆ ಮುಳುಗಡೆ, ನಿರಾಶ್ರಿತರು ಹಾಗೂ ಮೋದಿ ಜನ್ಮ ದಿನಾಚರಣೆ ಜೊತೆಗೂಡಿ ನನ್ನ ಮನಸ್ಸಲ್ಲಿ ಉಳಿದು ಬಿಟ್ಟಿತು. ನಿಧಾನಕ್ಕೆ ಈ ಮುಳುಗಡೆ ಭಾರತದ ಇಂದಿನ ಸ್ಥಿತಿಗತಿಗೆ ಕನ್ನಡಿ ಹಿಡಿದಂತೆ ಕಾಣಿಸತೊಡಗಿತು.

ಹೌದು, ಭಾರತದ ಆರ್ಥಿಕತೆ, ಕೈಗಾರಿಕೆ, ಬ್ಯಾಂಕ್, ಉದ್ಯೋಗ ಮುಳುಗಡೆಯಾಗುತ್ತಿವೆ. ಜಿಡಿಪಿಯೂ ಮುಳುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭಾರತದ ಹಿರಿಮೆಯನ್ನು ಎತ್ತಿ ಹಿಡಿಯುತ್ತಿರುವ ಒಕ್ಕೂಟ ವ್ಯವಸ್ಥೆ, ಬಹುತ್ವ ಹಾಗೂ ಸ್ವಾಯತ್ತ ಸಂಸ್ಥೆಗಳಾದ ಚುನಾವಣಾ ಆಯೋಗ, ನ್ಯಾಯಾಂಗ, ಸಿಬಿಐ, ನಾಲ್ಕನೆಯ ಅಂಗ ಮಾಧ್ಯಮ ಇಂಥವುಗಳೂ ಸರ್ಕಾರದ ಹಸ್ತಕ್ಷೇಪದಿಂದ ಮುಳುಗುತ್ತ ಉಸಿರಾಡಲು ಕಷ್ಟ ಪಡುತ್ತಿವೆ. ಇನ್ನೊಂದು ಕಡೆ ಗುಂಪು ಹತ್ಯೆಗಳಾಗುತ್ತಿದ್ದರೂ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ. ಇದೆಲ್ಲಾ ಏನನ್ನು ಹೇಳುತ್ತಿದೆ? ಆಳ್ವಿಕೆ ನಡೆಸುತ್ತಿರುವವರು ಅಸಮರ್ಥರು ಎಂದು ತಾನೆ? ಇಷ್ಟು ಸಾಲದು ಎಂಬಂತೆ so called ಅಭಿವೃದ್ಧಿ ಹೆಸರಿನಲ್ಲಿ ನಡೆದ ಅರಣ್ಯ ನಾಶ, ಗಣಿಗಾರಿಕೆ, ಪ್ರಕೃತಿ ಧ್ವಂಸದಿಂದ ಹುಚ್ಚು ಹೊಳೆ, ಭೂ ಕುಸಿತ, ಸಾವು-ನೋವು ಆಕ್ರಂದನ ಹೆಚ್ಚುತ್ತಿದೆ. ಸರ್ಕಾರಗಳು ಕಣ್ಣೆತ್ತಿಯೂ ನೋಡುತ್ತಿಲ್ಲ.

ಇದನ್ನೆಲ್ಲಾ ನೋಡಿದಾಗ ಭಾರತ ಮುಳುಗುತ್ತಿರುವ ಹಡಗು ಎನ್ನದೆ ಬೇರೆನು ಹೇಳಬೇಕು? ಹಡಗನ್ನು ಮುಳುಗಿಸುತ್ತಿರುವ ತೂತುಗಳ ಕಡೆಗೆ ಜನಸ್ತೋಮದ ಗಮನ ಹೋಗದಂತಿರಲು ಹಡಗಿನ ಕ್ಯಾಪ್ಟನ್‍ಗಳಿಂದ, ಮಹಾಭಾರತದ ವಿರಾಟ ಪರ್ವದ ಉತ್ತರನ ಪೌರುಷ ನಾಟಕ ನಡೆಯುತ್ತಿದೆ. ಈ ನಾಟಕದ ಭಾಗವಾಗಿಯೇ ಕಾಶ್ಮೀರದ ಸಮಸ್ಯೆಯನ್ನು ನೋಡಬೇಕು ಅನ್ನಿಸುತ್ತದೆ. ನೆನಪಿಸಿಕೊಳ್ಳೋಣ- ಶೇಖ್ ಅಬ್ದುಲ್ಲಾ ಇಲ್ಲದಿದ್ದರೆ ಕಾಶ್ಮೀರ ಭಾರತದ್ದು ಆಗುತ್ತಿರಲಿಲ್ಲ.

ಸುಗತ ಶ್ರೀನಿವಾಸರಾಜು ಅವರು ಶೇಖ್ ಅಬ್ದುಲ್ಲಾ ಅವರ ವ್ಯಕ್ತಿತ್ವವನ್ನು ಕಣ್ಣಿಗೆಕಟ್ಟುವಂತೆ ವಿವರಿಸುತ್ತಾರೆ- ಶೇಖ್ ಅಬ್ದುಲ್ಲಾರನ್ನು ನೆಹರೂ ಸರ್ಕಾರ ಅನೇಕ ವರ್ಷಗಳ ಕಾಲ ಗೃಹಬಂಧನದಲ್ಲಿರಿಸಿ ಬಿಡುಗಡೆಗೊಳಿಸಿದ ನಂತರ ಅವರು ಪಾಕಿಸ್ತಾನಕ್ಕೂ ಒಮ್ಮೆ ಭೇಟಿ ನೀಡುತ್ತಾರೆ. ಆಗ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿದ್ದ ಭುಟ್ಟೋ ಅವರು ಸ್ವತಃತಾವೇ ವಿಮಾನ ನಿಲ್ದಾಣಕ್ಕೆ ಬಂದು ಶೇಖ್‍ರನ್ನು ಸ್ವಾಗತಿಸುತ್ತಾರೆ. ಪಾಕಿಸ್ತಾನದಲ್ಲಿ ಅವರಿಗೆ ಭವ್ಯ ಸ್ವಾಗತ ಸಿಗುತ್ತದೆ. ಪಾಕಿಸ್ತಾನದ ಡಾನ್ ಪತ್ರಿಕೆ “ಶೇಖ್‍ ಅಬ್ದುಲ್ಲಾರಿಗೆ ನೆಹರೂ ಆಡಳಿತದ ಇಂಡಿಯಾ ಸಾಕಾಗಿ ಬೇಸತ್ತು ಹೋಗಿರಬೇಕು, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಲು ಇದು ಸಕಾಲ” ಎಂದೆಲ್ಲಾ ಬರೆಯುತ್ತದೆ. ಒಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಪತ್ರಿಕಾಕರ್ತರು ಅದೇ ಪ್ರಶ್ನೆ ಕೇಳಿದಾಗ ಶೇಖ್ ಅವರ ಉತ್ತರ- ‘ನೆಹರೂ ಒತ್ತಡಕ್ಕೆ ಸಿಲುಕಿ ನನ್ನನ್ನು ಬಂಧನದಲ್ಲಿ ಇರಿಸಿದ್ದಿರಬಹುದು. ಆದರೂ ಆತ ನನ್ನ ಸ್ನೇಹಿತನೆ. ಭಾರತ ಜಾತ್ಯಾತೀತ ದೇಶ. ಕಷ್ಟವೋ ಸುಖವೋ ಕಾಶ್ಮೀರ ಜಾತ್ಯಾತೀತ ಭಾರತದಲ್ಲಿ ಇರಲು ಬಯಸುತ್ತದೆ. ಇಸ್ಲಾಮಿಕ್ ರಿಪಬ್ಲಿಕ್ ಎನಿಸಿಕೊಂಡಿರುವ ಪಾಕಿಸ್ತಾನಕ್ಕಂತೂ ಸೇರುವುದಿಲ್ಲ’ ಎಂದು ನೇರವಾಗಿ ಸ್ಪಷ್ಟವಾಗಿ ಉತ್ತರಿಸುತ್ತಾರೆ.

ಶೇಖ್ ಅಬ್ದುಲ್ಲಾ ಅವರು ಭಾರತಕ್ಕೆ ಹಿಂತಿರುಗುವಾಗ ಅವರನ್ನು ಬೀಳ್ಕೊಡುವುದಕ್ಕೆ ಒಬ್ಬರೂ ಇರುವುದಿಲ್ಲ!. ಇದು ಕಾಶ್ಮೀರದ ಹೃದಯ. ಇದರ ಅರಿವಿಲ್ಲದ ಮೋದಿಶಾದ್ವಯರು ಕಾಶ್ಮೀರದ ನೆಲಕ್ಕೆ ಲಗ್ಗೆ ಇಟ್ಟರು. ಕಾಶ್ಮೀರಿ ಹೃದಯಕ್ಕೆ ಆಘಾತ ಮಾಡಿಬಿಟ್ಟರು. ಮೋದಿಶಾದ್ವಯರು ಚಕ್ರವರ್ತಿಯಂತೆ ನಡೆದುಕೊಳ್ಳಲಿಲ್ಲ, ಪಾಳೆಗಾರರಂತೆ ವರ್ತಿಸಿಬಿಟ್ಟರು.

ಕಾಶ್ಮೀರವನ್ನು ಛಿದ್ರಗೊಳಿಸಿದ್ದೂ ಕೂಡ ಭಾರತವೆಂಬ ಮುಳುಗುತ್ತಿರುವ ಹಡಗಿನಕಡೆ ಗಮನ ಹರಿಸದಿರಲಿ ಎಂಬುದಕ್ಕೇನೊ ಅನ್ನಿಸುತ್ತಿದೆ. ಹಾಗೇನೆ ಉತ್ತರನ ಪೌರುಷದಲ್ಲಿ ಉಪ ಪ್ರಸಂಗಗಳೂ ಆಗಾಗ ಬರುತ್ತವೆ. ‘ಒಂದೇ ಭಾಷೆ’ ಅನ್ನುವುದು – ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ‘ಒಂದೇ ಸಲ ಚುನಾವಣೆ’ ಅನ್ನುವುದು ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ಆರ್‍ಬಿಐ ಗೌರ್ನರ್ GDP ಐದಕ್ಕಿಂತ ಕೆಳಗಿಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದಾಗ ಮಾರನೆ ದಿನವೇ `ಎರಡು ಪಾರ್ಟಿ ವ್ಯವಸ್ಥೆ’ ಅನ್ನುವುದು. ಆಗ ಯಾರು ಮುಳುಗಡೆಕಡೆ ನೋಡುವುದಿಲ್ಲ. ಏನೂ ಇಲ್ಲದಿದ್ದರೆ ‘ಮೈಸೂರ್ ಪಾಕ್ ನಮ್ಮದು’ ಅಂದು ಬಿಡುವುದು! ಹೀಗೆ ಸರ್ಕಾರ ನಡೆಯುತ್ತಿದೆ. ಭಾರತ ಎಂಬ ಹಡಗು ದಿನೇ ದಿನೇ ಮುಳುಗುತ್ತಿದೆ.

ಈ ಮುಳುಗಡೆ ಸಂದರ್ಭದಲ್ಲಿ ನಾವು ಮಾಡಬಹುದಾದರೂ ಏನು? ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇವುಗಳನ್ನು ಸರ್ಕಾರದ `ಅಚ್ಚೇ ದಿನ್’, `ವೈಬ್ರೆಂಟ್ ಇಂಡಿಯಾ’ ಇತ್ಯಾದಿ, ಇತ್ಯಾದಿ ಬಾಣ ಬಿರುಸು ಬಿಟ್ಟು ಬೇರೆಕಡೆ ಗಮನ ಸೆಳೆದಷ್ಟೂ ಅದನ್ನು ಮೀರಿಸುವಂತೆ ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇಂಥವುಗಳನ್ನು ಸಾರ್ವಜನಿಕ ಮಾತುಕತೆಯಾಗಿಸಬೇಕು. ಶ್ರೀಪಾದ ಭಟ್ ಒಂದು ಲೇಖನದಲ್ಲಿ ಹೇಳಿರುವಂತೆ `ಜನರ ನಿರೀಕ್ಷೆಗಳು ಮತ್ತು ಹತಾಶೆಗಳ ಆಳ ಮತ್ತು ಪ್ರಮಾಣವನ್ನು ಅರಿಯಬೇಕಾಗಿದೆ. ಬೌದ್ಧಿಕ ವಾಕ್ಚಾತುರ್ಯಕ್ಕಿಂತ ಪಿಸುಮಾತಿನ ಕನವರಿಕೆಗಳು ಜನ ಸಂಪರ್ಕಕ್ಕೆ ಅಗತ್ಯವಾಗಿದೆ. ಇವನ್ನು ಸಾಂಸ್ಕøತಿಕ, ರಾಜಕೀಯ, ಆರ್ಥಿಕ ನೆಲೆಯಲ್ಲಿ ಅರಿತುಕೊಳ್ಳಬೇಕು.’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...