Homeಮುಖಪುಟಹಿಟ್ ಆ್ಯಂಡ್ ರನ್‌ಗೆ 10 ವರ್ಷ ಜೈಲು: ಹೊಸ ಕ್ರಿಮಿನಲ್ ಕಾನೂನಿನ ವಿರುದ್ದ ಬೀದಿಗಿಳಿದ ವಾಹನ...

ಹಿಟ್ ಆ್ಯಂಡ್ ರನ್‌ಗೆ 10 ವರ್ಷ ಜೈಲು: ಹೊಸ ಕ್ರಿಮಿನಲ್ ಕಾನೂನಿನ ವಿರುದ್ದ ಬೀದಿಗಿಳಿದ ವಾಹನ ಚಾಲಕರು

- Advertisement -
- Advertisement -

ಇತ್ತೀಚೆಗೆ ಸಂಸತ್‌ನಲ್ಲಿ ಅಂಗೀಕಾರಗೊಂಡ ಹೊಸ ಕ್ರಿಮಿನಲ್ ಕಾನೂನು ಭಾರತೀಯ ನ್ಯಾಯ (ಎರಡನೆಯ) ಸಂಹಿತೆಯ ನಿಯಮವೊಂದರ ವಿರುದ್ಧ ದೇಶದ ವಿವಿದೆಡೆ ವಾಹನ ಚಾಲಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಈ ಹಿಂದೆ, ಹಿಟ್ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಎರಡು ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಇದನ್ನು ವಿರೋಧಿಸಿ ಹರಿಯಾಣದ ಜಿಂದ್‌ನಲ್ಲಿ ಇಂದು ಖಾಸಗಿ ಬಸ್ ಚಾಲಕರು ಮತ್ತು ನಿರ್ವಾಹಕರು ಮುಷ್ಕರ ನಡೆಸಿದ್ದು, ಆಟೋ ಚಾಲಕರು ಕೂಡ ಹೊಸ ಕಾನೂನಿನ ವಿರುದ್ಧ ಹೋರಾಟ ಆರಂಭಿಸಿದ್ದಾರೆ. ಹೊಸ ಕಾನೂನು ಚಾಲಕರನ್ನು ಅವರ ಕರ್ತವ್ಯದಿಂದ ನಿರುತ್ಸಾಹಗೊಳಿಸುತ್ತದೆ ಹೊಸಬರು ವಾಹನ ಚಾಲನಾ ವೃತ್ತಿಗೆ ಬರದಂತೆ ತಡೆಯುತ್ತದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ ಎಂದು ಚಾಲಕರು ಹೇಳಿದ್ದಾರೆ.

ಒಂದು ವೇಳೆ ರಸ್ತೆಯಲ್ಲಿ ಸಂಪೂರ್ಣವಾಗಿ ಮಂಜು ಮುಸುಕಿದ ವಾತಾವರಣವಿದ್ದು ರಸ್ತೆ ಕಾಣದೆ ಅಪಘಾತ ಸಂಭವಿಸಿದರೆ, ಇದನ್ನೂ ಹಿಟ್‌ ರಂಡ್ ಎಂದು ಪರಿಗಣಿಸಬಹುದು. ಈ ಮೂಲಕ ಚಾಲಕರು 10 ವರ್ಷಗಳ ಕಾಲ ಜೈಲಲ್ಲಿ ಕೂರಬೇಕಾಗುತ್ತದೆ ಎಂದು ಚಾಲಕರು ಹೇಳಿದ್ದಾರೆ.

ಉತ್ತರ ಪ್ರದೇಶದ ಲಕ್ನೋದಲ್ಲೂ ಹೊಸ ಕಾನೂನಿನ ವಿರುದ್ಧ ಬಸ್ ಮತ್ತು ಟ್ರಕ್ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ರಾಷ್ಟ್ರೀಯ ಹೆದ್ದಾರಿ-2 ತಡೆದು ಪ್ರತಿಭಟಿಸಲಾಗಿದೆ. ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿಯೂ ಟ್ರಕ್ ಮತ್ತು ಟ್ಯಾಂಕರ್ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

ಅಪಘಾತ ಸಂಭವಿಸಿದ ಬಳಿಕ ಚಾಲಕರು ಪಲಾಯನ ಮಾಡಿದರೆ ಅದನ್ನು ಹಿಟ್ ಅಂಡ್ ರನ್ ಎಂದು ಪರಿಗಣಿಸಲಾಗುತ್ತದೆ. ಚಾಲಕರ ಪ್ರಕಾರ, ಅವರು ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ ಮತ್ತು ಅಪಘಾತದ ಬಳಿಕ ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುತ್ತಾರೆ. ಇದಕ್ಕೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವುದನ್ನು ಚಾಲಕರು ವಿರೋಧಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾಗೊಂಡ ಮೂರು ಕ್ರಿಮಿನಲ್ ಕಾನೂಗಳಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೆಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ಎರಡನೆಯ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.

ಈ ಮೂರು ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಬದಲಾಯಿಸುತ್ತದೆ. ಭಾರತೀಯ ನ್ಯಾಯ ಸಂಹಿತೆ ಜಾರಿಯಾದರೆ, ಭಾರತೀಯ ದಂಡ ಸಂಹಿತೆ (IPC)ರದ್ದಾಗಲಿದೆ.

ಇದನ್ನೂ ಓದಿ : ಬಿಜೆಪಿ ಸರಕಾರ ಉದ್ಯೋಗ ಗ್ಯಾರೆಂಟಿ ನೀಡಿ ‘ದೇಶಭಕ್ತಿ’ಯನ್ನು ಪ್ರದರ್ಶಿಸಲಿ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...