Homeಮುಖಪುಟವಿದೇಶಗಳಲ್ಲಿ ಭಾರತೀಯ ಕಚೇರಿಗಳನ್ನು ಗುರಿಯಾಗಿಸಿ ದಾಳಿ ಆರೋಪ: 43 ಖಲಿಸ್ತಾನಿ ಬೆಂಬಲಿಗರನ್ನು ಪತ್ತೆ ಹಚ್ಚಿದ ಎನ್‌ಐಎ

ವಿದೇಶಗಳಲ್ಲಿ ಭಾರತೀಯ ಕಚೇರಿಗಳನ್ನು ಗುರಿಯಾಗಿಸಿ ದಾಳಿ ಆರೋಪ: 43 ಖಲಿಸ್ತಾನಿ ಬೆಂಬಲಿಗರನ್ನು ಪತ್ತೆ ಹಚ್ಚಿದ ಎನ್‌ಐಎ

- Advertisement -
- Advertisement -

ವಿದೇಶಗಳಲ್ಲಿ ಭಾರತೀಯ ರಾಯಭಾರಿ ಕಚೇರಿಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದ ಆರೋಪದಲ್ಲಿ 43 ಖಲಿಸ್ತಾನಿ ಬೆಂಬಲಿಗರನ್ನು ಭಾರತೀಯ ತನಿಖಾ ಸಂಸ್ಥೆ ಎನ್‌ಐಎ ಪತ್ತೆ ಹಚ್ಚಿದೆ. ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ಮಾ.19ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರದಲ್ಲಿ ಭಾಗಿಯಾದ ಮತ್ತು ಜು.2ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದ ಆರೋಪದಲ್ಲಿ 43 ಖಲಿಸ್ತಾನಿ ಬೆಂಬಲಿಗರನ್ನು ಪತ್ತೆಹಚ್ಚಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿಕೊಂಡಿದೆ.

NIA ಪ್ರಕಾರ, ಒಟ್ಟಾವಾ ಮತ್ತು ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ಗಳ ಮೇಲಿನ ದಾಳಿಗಳು, ಹಾಗೆಯೇ  ಸ್ಯಾನ್ ಫ್ರಾನ್ಸಿಸ್ಕೋ ಭಾರತದ ಕಾನ್ಸುಲೇಟ್ ಜನರಲ್ ಕಚೇರಿ ಮತ್ತು USನಲ್ಲಿ ಭಾರತದ ಕಚೇರಿಗಳ ಮೇಲಿನ ದಾಳಿಯ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ವಿದೇಶದಲ್ಲಿ ಭಾರತೀಯ ಕಚೇರಿಗಳ ಮೇಲಿನ ದಾಳಿಯ ಹಿಂದಿನ ಪಿತೂರಿಯನ್ನು ಬಿಚ್ಚಿಡುವ ಎನ್‌ಐಎ ಪ್ರಯತ್ನಗಳ ಭಾಗವಾಗಿ 50ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ. ಈ ದಾಳಿಗಳು ವಿದೇಶಗಳಲ್ಲಿನ ಭಾರತೀಯ ಹಿತಾಸಕ್ತಿಗಳ ವಿರುದ್ಧದ ಅಪರಾಧಗಳ ಮೇಲೆ NIA ಗಮನಹರಿಸುವುದರ ಭಾಗವಾಗಿತ್ತು ಎಂದು ಎನ್‌ಐಎಎ ತಿಳಿಸಿದೆ.

ದಾಳಿಗಳಲ್ಲಿ ಕ್ರಿಮಿನಲ್ ಅತಿಕ್ರಮಣ, ವಿಧ್ವಂಸಕ ಕೃತ್ಯ, ಸಾರ್ವಜನಿಕ ಆಸ್ತಿಗಳಿಗೆ ಹಾನಿ, ಮತ್ತು ಭಾರತೀಯ ಅಧಿಕಾರಿಗಳಿಗೆ ನೋವುಂಟುಮಾಡುವ ಪ್ರಯತ್ನಗಳು ಮತ್ತು ಭಾರತೀಯ ಕಟ್ಟಡವನ್ನು ಹಾನಿಗೊಳಿಸುವ ಪ್ರಯತ್ನಗಳನ್ನು ಮಾಡಲಾಗಿದೆ. NIA ಈ ಬಗ್ಗೆ ಹಲವಾರು ವಿಧಾನಗಳನ್ನು ಬಳಸಿ ತನಿಖೆ ನಡೆಸಿದ್ದು,
43 ಜನರನ್ನು ಶಂಕಿತರು ಎಂದು ಗುರುತಿಸಿಕೊಂಡಿದೆ ಎಂದು ಹೇಳಿಕೊಂಡಿದೆ.

ಎನ್‌ಐಎ ಇತ್ತೀಚಿನ ತಿಂಗಳುಗಳಲ್ಲಿ ಈ ಪ್ರಕರಣಗಳ ಬಗ್ಗೆ ತನ್ನ ತನಿಖೆಯನ್ನು ಚುರುಕುಗೊಳಿಸಿದೆ ಮತ್ತು ದಾಳಿಯ ಸಂಚಿನ ಭಾಗವೆಂದು ಶಂಕಿಸಲಾದ ಭಾರತದಲ್ಲಿನ 80ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

ಇನ್ನು  NIA 2023ರಲ್ಲಿ 625 ಜನರನ್ನು ಬಂಧಿಸಿದೆ. 2022ರಲ್ಲಿ 490 ಮಂದಿಯನ್ನು ಬಂಧಿಸಿತ್ತು. ಇದು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಸುಮಾರು 28 ಪ್ರತಿಶತದಷ್ಟು ಹೆಚ್ಚಾಗಿದೆ. 625 ಬಂಧನದಲ್ಲಿ 65 ಮಂದಿ ಐಸಿಸ್ ಪ್ರಕರಣಗಳಲ್ಲಿ, 114 ಮಂದಿ ಭಯೋತ್ಪಾದನೆ ಪ್ರಕರಣಗಳಲ್ಲಿ, 45 ಮಂದಿಯನ್ನು ಮಾನವ ಕಳ್ಳಸಾಗಣೆ ಪ್ರಕರಣಗಳಲ್ಲಿ, 28 ಭಯೋತ್ಪಾದಕ ಕೃತ್ಯಗಳಡಿಯಲ್ಲಿ ಬಂಧಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯವು 2018- 2023ರವರೆಗೆ 324 ಪ್ರಕರಣಗಳನ್ನು NIA ಗೆ ಹಸ್ತಾಂತರಿಸಿದೆ. 2022ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ 10.53 ಕೋಟಿ ಮೌಲ್ಯದ 37 ಆಸ್ತಿಗಳನ್ನು ವಶಪಡಿಸಿಕೊಂಡಿದೆ. 2023ರಲ್ಲಿ ಅದು 240ಕ್ಕೆ ಏರಿಕೆಯಾಗಿದೆ. ಇದರಲ್ಲಿ 156 ಬ್ಯಾಂಕ್ ಖಾತೆಗಳ ಒಟ್ಟು 55.90 ಕೋಟಿ ರೂ.ಮೌಲ್ಯದ ಆಸ್ತಿಗಳನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಆಸ್ತಿಗಳು ಭಯೋತ್ಪಾದನೆ, ಸ್ಫೋಟಕಗಳು ಮತ್ತು ಇತರ ಮಹತ್ವದ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಮತ್ತು ಶಂಕಿತರ ಒಡೆತನದಲ್ಲಿದೆ. ಇವುಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ  ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...