Homeಮುಖಪುಟ206ನೇ ಕೋರೆಗಾಂವ್ ವಿಜಯೋತ್ಸವ; ದೇಶದಾದ್ಯಂತ ಮಹರ್ ಸೈನಿಕರಿಗೆ ಗೌರವ ಅರ್ಪಣೆ

206ನೇ ಕೋರೆಗಾಂವ್ ವಿಜಯೋತ್ಸವ; ದೇಶದಾದ್ಯಂತ ಮಹರ್ ಸೈನಿಕರಿಗೆ ಗೌರವ ಅರ್ಪಣೆ

- Advertisement -
- Advertisement -

ದೇಶದ ದಲಿತ ಸಮುದಾಯಕ್ಕೆ ಮಹತ್ವದ ದಿನವಾದ ‘ಭೀಮಾ ಕೋರೆಗಾಂವ್ ಕದನದ 206ನೇ ವಿಜಯೋತ್ಸವ’ದ ಪ್ರಯುಕ್ತ, ಪೇಶ್ವೆ ಸೈನ್ಯದ ವಿರುದ್ಧ ಹೋರಾಡಿ ಮಡಿದ 500 ಜನ ಮಹರ್ ಸೈನಿಕರಿಗೆ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ನಮನ ಸಲ್ಲಿಸಲಾಯಿತು.

ಮಹರ್ ಸೈನ್ಯ ಮತ್ತು ಮರಾಠಾ ಒಕ್ಕೂಟದ ಪೇಶ್ವೆ ಬಣಗಳ ನಡುವೆ ಡಿಸೆಂಬರ್ 31, 1817ರಂದು ಆರಂಭವಾದ ಯುದ್ಧ 1818 ಜನವರಿ 1, 1818 ರಂದು ಮುಗಿದಿತ್ತು. ಅಂದಿನ ಭೀಮಾ ನದಿ ತೀರದಲ್ಲಿ ನಡೆದ ಯುದ್ಧದಲ್ಲಿ 28 ಸಾವಿರ ಪೇಶ್ವೆ ಸೈನ್ಯದ ವಿರುದ್ಧ ಹೋರಾಡಿ ಜಯಗಳಿಸಿದ ಮಹರ್ ಸೈನಿಕರ ನೆನಪಿಗೆ ಪ್ರತಿ ವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ. ಮಹಾರಾಷ್ಟ್ರದ ಪೆರ್ನೆ ಗ್ರಾಮದಲ್ಲಿರುವ ‘ವಿಜಯ್ ಸ್ತಂಭ’ದ ಮುಂಭಾಗ ಪ್ರತಿ ವರ್ಷ ಡಿಸೆಂಬರ್ 31ರ ರಾತ್ರಿ ಲಕ್ಷಗಟ್ಟಲೆ ಜನ ಸೇರುತ್ತಾರೆ.

ಕೋರೆಗಾಂವ್‌ಗೆ ಹರಿದುಬಂದ ಜನಸಾಗರ:

ಭೀಮಾ ಕೋರೆಗಾಂವ್ ಸ್ಮಾರಕಕ್ಕೆ ಪ್ರತಿ ವರ್ಷದಂತೆ ಈ ವರ್ಷವೂ ಲಕ್ಷಾಂತರ ಜನ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿ, ಡಿಸೆಂಬರ್ 31ರ ಮಧ್ಯರಾತ್ರಿ 12 ಗಂಟೆಗೆ ವಿಜಯೋತ್ಸವ ಆಚರಿಸಿದರು. ವಂಚಿತ್ ಬಹುಜನ ಅಘಾಡಿ ನಾಯಕ ಪ್ರಕಾಶ್ ಅಂಬೇಡ್ಕರ್, ಶಿರೂರು (ಪುಣೆ ಜಿಲ್ಲೆಯ) ಎನ್‌ಸಿಪಿ ಸಂಸದ ಅಮೋಲ್ ಕೋಲ್ಹೆ ಸಹ ವಿಜಯ ಸ್ತಂಭಕ್ಕೆ ಇಂದು ನಮನ ಸಲ್ಲಿಸಿದರು.

ಪುಣೆ-ಅಹ್ಮದ್‌ನಗರ ರಸ್ತೆಯ ಪೆರ್ನೆ ಗ್ರಾಮದ ಬಳಿ ಇರುವ ಸ್ಮಾರಕದ ಸುತ್ತಲೂ ಇರುವ ವಿಸ್ತಾರವಾದ ಜಾಗದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸ್ಮಾರಕಕ್ಕೆ 10 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಬರುವ ನಿರೀಕ್ಷೆಯಲ್ಲಿದ್ದೇವೆ ಎಂದು ಪುಣೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ಕೋರೆಗಾಂವ್ ಭೀಮಾ ಕದನದ ವಾರ್ಷಿಕೋತ್ಸವದಂದು ಶ್ರದ್ಧಾಂಜಲಿ ಸಲ್ಲಿಸಲು ಬರುವ ಜನರಿಗೆ ಪೊಲೀಸ್ ಅಥವಾ ಸ್ಥಳೀಯ ಆಡಳಿತ ಉತ್ತಮ ವ್ಯವಸ್ಥೆ ಕಲ್ಪಿಸಿವೆ.

ಸ್ಮಾರಕಕ್ಕೆ ಭೇಟಿ ನೀಡಿದ್ದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಾತನಾಡಿ, ‘ಜನವರಿ 1, 2018 ರಂದು ಕೋರೆಗಾಂವ್ ಭೀಮಾ ಕದನದ 200ನೇ ವಾರ್ಷಿಕೋತ್ಸವದಂದು, ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಇದರಲ್ಲಿ ಒಬ್ಬರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು. ಆದ್ದರಿಂದ, ಆಡಳಿತದೊಂದಿಗೆ ಸಹಕರಿಸುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ’ ಎಂದು ಪವಾರ್ ಹೇಳಿದರು.

ಎಲ್ಗರ್ ಪರಿಷತ್ ಆಯೋಜಿಸಿದ್ದ ಭೀಮಾ ಕೋರೆಗಾಂವ್ ಸಂಗ್ರಾಮದ 200ನೇ ವಿಜಯೋತ್ಸವ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಪುಣೆ ಹಾಗೂ ಮುಂಬೈನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮಹಾರಾಷ್ಟ್ರಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿತ್ತು. ದಲಿತಪರ ಸಂಘಟನೆಗಳು ಆಗ ಮಹಾರಾಷ್ಟ್ರ ಬಂಗ್‌ದೂ ಕರೆ ನೀಡಿದ್ದವು. ಇಡೀ ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ, ಎಲ್ಗರ್ ಪರಿಷತ್‌ನ ಹಲವರು ಇನ್ನೂ ಜೈಲಿನ್ಲಲಿದ್ದಾರೆ.

ಏನಿದು ಕೋರೆಗಾಂವ್ ಯುದ್ಧ; ದಲಿತರ ಪಾಲಿಗೆ ಅತ್ಯಂತ ಮಹತ್ವದಾಗಿದ್ದು ಏಕೆ?

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆಯಾಗಿದ್ದು, 28 ಸಾವಿರ ಸೈನಿಕರನ್ನು ಕೇವಲ ಐನೂರು ಜನ, ದಲಿತ ಸಮುದಾಯಕ್ಕೆ ಸೇರಿದ ಸೈನಿಕರು ಸೇರಿಕೊಂಡು ಸೋಲಿಸಿದ ಮಹತ್ವದ ಕದನವಾಗಿದೆ. ಪೇಶ್ವೆಗಳ ಆಡಳಿತದಲ್ಲಿ ಜಾರಿಯಲ್ಲಿದ್ದ ಅಮಾನುಷ ಜಾತಿ ಪದ್ಧತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳಿಗಾಗಿ ಹಂಬಲಿಸಿದ್ದ ಮಹರ್ ಸೈನಿಕರ ಧೈರ್ಯ, ಸಾಹಸ, ಕೆಚ್ಚೆದೆಯ ಹೋರಾಟದ ಕಥನವಾಗಿದೆ. ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ನಡೆಸಿ ಗೆಲುವು ಸಾಧಿಸಿದ್ದು, ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್’ ಎಂದು ಪ್ರಸಿದ್ಧವಾಗಿದೆ.

ಮಹರ್ ಸೈನಿಕರಿಗೆ ಮತ್ತು ಪೇಶ್ವೆಗಳ ನಡುವೆ ಭೀಮಾ ಕೋರೆಗಾಂವ್ ನಲ್ಲಿ ಡಿಸೆಂಬರ್ 31, 1817ರ ರಾತ್ರಿ ಯುದ್ಧ ಆರಂಭವಾಗಿ ಜನವರಿ 1, 1818ರ ಬೆಳಗಿನ ಜಾವ ಮುಗಿದಿತ್ತು. ಅಂದು ರಾತ್ರಿ ನಡೆದ ಐತಿಹಾಸಿಕ ಯುದ್ದದಲ್ಲಿ ಐನೂರು ಮಂದಿ ದಲಿತ ಸೈನಿಕರು ಆಹಾರ, ನೀರು ಹಾಗೂ ವಿಶ್ರಾಂತಿ ಇಲ್ಲದೆ ಇಪ್ಪತ್ತೆಂಟು ಸಾವಿರ ಮಂದಿ ಇದ್ದ ಸೈನ್ಯದ ವಿರುದ್ಧ ನಿರಂತರ ಹನ್ನೆರಡು ಗಂಟೆ ಕಾದಾಡಿದ ಸ್ಮರಣೀಯ ಕದನವಾಗಿದೆ.

ಅಸ್ಪೃಶ್ಯರು ಎಂಬ ಕಾರಣಕ್ಕೆ ಪೇಶ್ವೆ ಭಾಜಿರಾಯ ದಲಿತ ಸಮುದಾಯದವರನ್ನು ತನ್ನ ಸೇನೆಗೆ ಸೇರಸಿಕೊಂಡಿರಲಿಲ್ಲ. ಆ ಸಿಟ್ಟಿಗೆ ಬ್ರಿಟಿಷ್ ಸೈನ್ಯ ಸೇರಿದ ಅವರು, ಪೇಶ್ವೆಗಳ ಇಪ್ಪತ್ತೆಂಟು ಸಾವಿರ ಸೈನ್ಯ ಬಲವನ್ನು ಸೋಲಿಸಿದರು. ಯುದ್ಧದಲ್ಲಿ ಇಪ್ಪತ್ತೆರಡು ಮಹರ್ ಸೈನಿಕರು ಹುತಾತ್ಮರಾಗಿದ್ದರು. ಕೋರೆಗಾಂವ್ ಸ್ಮಾರಕದಲ್ಲಿ ಹುತಾತ್ಮರಾದ ಚಿತ್ರಗಳು ದೇಶ ಸ್ವಾತಂತ್ರ್ಯ ಪಡೆಯುವವರೆಗೂ ಇತ್ತು ಎನ್ನಲಾಗಿದ್ದು, ಮಹರ್ ಸೈನಿಕರ ವೀರಗಾಥೆ ಹೇಳುವ ಸ್ಮಾರಕವನ್ನು ಬ್ರಿಟಿಷರೇ ನಿರ್ಮಿಸಿದ್ದರು.

ಬ್ರಾಹ್ಮಣ ಸೈನಿಕರೇ ಹೆಚ್ಚಿದ್ದ ಇಪ್ಪತ್ತೆಂಟು ಸಾವಿರ ಸಂಖ್ಯೆಯ ಪೇಶ್ವೆಗಳ ಸೈನ್ಯವನ್ನು ಕೇವಲ ಐನೂರು ಮಂದಿಯಿದ್ದ ಮಹರ್ ಸೈನಿಕರು ಇಡೀ ರಾತ್ರಿ ಕಾದಾಡಿ ನಡುಕ ಹುಟ್ಟಿಸಿದ್ದರು. ಶಿರೂರಿನಿಂದ ಇಪ್ಪತ್ತೇಳು ಮೈಲು ದೂರ ಭೀಮಾ ಕೋರೆಗಾಂವ್ ನವರೆಗೆ ನಡೆದುಕೊಂಡೇ ಬಂದ ಮಹರ್ ಸೈನಿಕರಿಗೆ ತಿನ್ನಲು ಆಹಾರ, ಕುಡಿಯಲು ನೀರು ಸಹ ಇರಲಿಲ್ಲ. ಆದರೂ ಹನ್ನೆರಡು ಗಂಟೆಗಳ ಕಾಲ ಆ ಸೈನಿಕರು ರಣಭೂಮಿಯಲ್ಲಿ ಪೇಶ್ವೆಗಳ ವಿರುದ್ಧ ಕಾದಾಡಿದರು. ಆ ಯುದ್ಧದಲ್ಲಿ ಪೇಶ್ವೆಗಳು ಸೋತಿದ್ದಲ್ಲದೆ, ಅಲ್ಲಿಯವರೆಗೆ ದಲಿತರ ಮೇಲೆ ಅವರು ಹೇರಿದ್ದ ಕೆಲವು ಅಸ್ಪೃಶ್ಯತೆ ಆಚರಣೆಗಳೂ ಅಂದಿಗೆ ಕೊನೆಗೊಂಡಿತು. ಆದ್ದರಿಂದ ಯುದ್ಧವು ದೇಶದ ದಲಿತರ ಪಾಲಿಗೆ ಮಹತ್ವದ್ದಾಗಿದೆ.

ಅತ್ಯಂತ ಕಡಿಮೆ ಸಂಖ್ಯೆಯ ಸೈನಿಕರೊಂದಿಗೆ ಪೇಶ್ವೆಗಳ ವಿರುದ್ಧ ಯುದ್ಧಕ್ಕೆ ಇಳಿದಾಗ ಬ್ರಿಟಿಷರಿಗೆ ಗೆಲ್ಲುವ ನಂಬಿಕೆಯೇ ಇರಲಿಲ್ಲ. ಆದರೆ, ಈ ಯುದ್ಧವೇ ಪೇಶ್ವೆಗಳ ಆಡಳಿತದ ಅಂತ್ಯಕ್ಕೆ ಕಾರಣವಾಗಿದ್ದೂ ಅಲ್ಲದೆ, ಅವರ ಆಡಳಿತದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಶ್ಯತೆಯ ಬೇರುಗಳನ್ನು ಅಲುಗಾಡಿಸಿತು.

ಐನೂರು ಸೈನಿಕರ ನೇತೃತ್ವ ವಹಿಸಿದ್ದು ಸಿಧ್ನಾಕ ಮಹರ್ ಎಂಬಾತ. ‘ಬ್ರಿಟಿಷರು ವಿದೇಶಿಯರು; ಯುದ್ಧದಲ್ಲಿ ನಾವು ನಿಮಗೆ ನೆರವು ನೀಡುತ್ತೇವೆ’ ಎಂದು ಪೇಶ್ವೆ ಭಾಜಿರಾಯನ ಬಳಿ ಮನವಿ ಮಾಡುತ್ತಾರೆ. ಆದರೆ, ಆವರ ಮನವಿಯನ್ನು ನಿರಾಕರಿಸಿದ ಪೇಶ್ವೆಗಳು, ಆ ಸೈನಿಕರನ್ನು ಅವಹೇಳನ ಮಾಡಿ, ಹೀಯಾಳಿಸುತ್ತಾರೆ. ‘ನಿಮಗೆ ಯಾವುದೇ ಹಕ್ಕು ಸಿಗಲ್ಲ; ನೀವು ನಮ್ಮ ವಿರುದ್ಧ ಕಾದಾಡಿದರೂ ಅಷ್ಟೇ, ಬ್ರಿಟಿಷರ ವಿರುದ್ಧ ಹೋರಾಡಿದರೂ ಅಷ್ಟೇ’ ಎನ್ನುತ್ತಾರೆ.

ಆಗ ಪೇಶ್ವೆಗಳ ವಿರುದ್ಧ ಯುದ್ಧ ಮಾಡುವುದು ಮಹರ್ ಸೈನಿಕರ ಆತ್ಮಗೌರವ ಹಾಗೂ ಹಕ್ಕುಗಳ ಪ್ರಶ್ನೆಯಾಗುತ್ತದೆ. ಅಷ್ಟು ದೊಡ್ಡ ಸಂಖ್ಯೆಯ ಪೇಶ್ವೆ ಪಡೆ 500 ಜನ ಮಹರ್ ಸೈನಿಕರ ಎದುರು ಮಂಡಿಯೂರುತ್ತದೆ. ಬ್ರಿಟಿಷರಿಗೆ ಮಹತ್ವದ ವಿಜಯ ಲಭಿಸುತ್ತದೆ. ಅದೇ ಕಾರಣಕ್ಕೆ ಯುದ್ಧದಲ್ಲಿ ಹುತಾತ್ಮರಾದ ಹಾಗೂ ಬದುಕುಳಿದ ಮಹರ್ ಸೈನಿಕರಿಗೆ ಬ್ರಿಟಿಷರು ಗೌರವ ಸಲ್ಲಿಸಿ ಸನ್ಮಾನಿಸುತ್ತಾರೆ. ವಿಜಯೋತ್ಸವದ ನೆನಪಿಗೆ ಸ್ಮಾರಕ ನಿರ್ಮಿಸಿ, ತನ್ನ ಸೈನ್ಯದ ಒಂದು ಗುಂಪಿಗೆ ‘ಮಹರ್ ರೆಜಿಮೆಂಟ್’ ಎಂದು ಹೆಸರಿಡುತ್ತಾರೆ.

ಕೋರೆಗಾಂವ್ ಸ್ಮಾರಕದ ಬಳಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬೆಂಬಲಿಗರು.

ಆದರೆ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಘಟನೆಯನ್ನು ಬೆಳಕಿಗೆ ತರುವವರೆಗೂ, ಜಾತಿವಾದಿಗಳು ಈ ಇತಿಹಾಸವನ್ನು ಮುಚ್ಚಿಡುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಸೈನಿಕರ ಸಾಹಸ ಬಿಂಬಿಸುವ ಕೋರೆಗಾಂವ್ ಸ್ಥಂಭ (ವಿಜಯ ಸ್ಥಂಭ) ಭಾರತಕ್ಕೆ ಸ್ವಾತಂತ್ರ್ಯ ದೊರೆಯುವ ತನಕ ಇತ್ತು. ಇಪ್ಪತ್ತೆರಡು ಮಹರ್ ಸೈನಿಕರ ತ್ಯಾಗದ ಬಗ್ಗೆ ಅದರಲ್ಲಿ ಪ್ರಸ್ತಾವ ಇತ್ತು. ಇಂದಿಗೂ ಆ ಸ್ಮಾರಕ ಅಸ್ಪೃಶ್ಯರ (ಮಹರ್) ವೀರ ಕಥೆಗೆ ಸಾಕ್ಷಿಯಂತೆ ಇದ್ದು, ಬಾಬಾ ಸಾಹೇಬರು ಬದುಕ್ಕಿದ್ದಷ್ಟೂ ಕಾಲ ಪ್ರತಿವರ್ಷ ಜನವರಿ ಒಂದರಂದು ಭೀಮಾ ಕೋರೆಗಾಂವ್ ಗೆ ಭೇಟಿ ನೀಡಿ ಗೌರವ ಸಲ್ಲಿಸುತ್ತಿದ್ದರು.

ಇದನ್ನೂ ಓದಿ; ಕೇರಳ ರಾಜ್ಯಪಾಲರ ಪ್ರತಿಕೃತಿ ದಹನ; ಎಸ್ಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...