Homeಮುಖಪುಟಬಾಂಗ್ಲಾದೇಶ: ನೋಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಯೂನುಸ್‌ಗೆ ಜೈಲು

ಬಾಂಗ್ಲಾದೇಶ: ನೋಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಯೂನುಸ್‌ಗೆ ಜೈಲು

- Advertisement -
- Advertisement -

ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಮುಹಮ್ಮದ್ ಯೂನುಸ್‌ ಅವರನ್ನು ಕಾರ್ಮಿಕ ಕಾನೂನು ಉಲ್ಲಂಘಿಸಿದ ಪ್ರಕರಣದಲ್ಲಿ ದೋಷಿ ಎಂದು ಬಾಂಗ್ಲಾದೇಶದ ನ್ಯಾಯಾಲಯ ಘೋಷಿಸಿದ್ದು, ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

“ಯೂನುಸ್‌ ಅವರ ವಿರುದ್ಧದ ಕಾರ್ಮಿಕ ಕಾನೂನು ಉಲ್ಲಂಘನೆ ಆರೋಪ ಸಾಬೀತಾಗಿದೆ” ಎಂದು ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶೆ ಶೇಖ್ ಮೆರಿನಾ ಸುಲ್ತಾನಾ ತೀರ್ಪು ಪ್ರಕಟಿಸುವಾಗ ಹೇಳಿದ್ದಾರೆ.

83 ವರ್ಷದ ಯೂನುಸ್‌ ಅವರು ತಮ್ಮ ಕಿರು ಬಂಡವಾಳ ಬ್ಯಾಂಕ್ ಮೂಲಕ ಲಕ್ಷಾಂತರ ಜನರಿಗೆ ಬಡ ತನದಿಂದ ಹೊರಬರಲು ಸಹಾಯ ಮಾಡಿದ್ದಕ್ಕಾಗಿ ನೊಬೆಲ್ ಪ್ರಶಸ್ತಿ ಪಡೆದಿದ್ದರು. ಯೂನುಸ್‌ ಅವರೊಂದಿಗೆ ವೈಮನಸ್ಸು ಹೊಂದಿದ್ದ ಪ್ರಧಾನಿ ಶೇಖ್ ಹಸೀನಾ ಅವರು, ಅರ್ಥಶಾಸ್ತ್ರಜ್ಞ ಬಡವರ ‘ರಕ್ತ ಹೀರುತ್ತಿದ್ದಾರೆ’ ಎಂದು ಆರೋಪಿಸಿದ್ದರು. ಪ್ರಸ್ತುತ ಯೂನುಸ್‌ ಅವರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿರುವುದನ್ನು ಅವರ ಬೆಂಬಲಿಗರು ‘ರಾಜಕೀಯ ಪ್ರೇರಿತ’ ಎಂದು ಎಂದು ಹೇಳಿದ್ದಾರೆ.

ಪ್ರೊ. ಯೂನುಸ್‌ ಅವರೊದಿಗೆ ಗ್ರಾಮೀಣ ಟೆಲಿಕಾಂನ ಮೂವರು ಸಹೋದ್ಯೋಗಿಗಳನ್ನು ನ್ಯಾಯಾಲಯ ತಪ್ಪಿತಸ್ಥರು ಎಂದು ಘೋಷಿಸಿದ್ದು, ನಾಲ್ವರಿಗೆ 6 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

“ಯೂನುಸ್‌ ಅವರಿಗೆ 6 ತಿಂಗಳ ಜೈಲು ಶಿಕ್ಷೆಯಾಗಿದೆ. ಈ ಶಿಕ್ಷೆಯ ಅವಧಿ ವಿಸ್ತರಣೆಯಾಗಬಹುದು. ಯೂನುಸ್‌ ವಿರುದ್ದ ಕಾರ್ಮಿಕ ಕಾನೂನು ಉಲ್ಲಂಘನೆಯ 100ಕ್ಕೂ ಹೆಚ್ಚು ಪ್ರಕರಣಗಳಿವೆ” ಎಂದು ಕಾರ್ಮಿಕ ಪರ ವಕೀಲ ಖುರ್ಷಿದ್ ಆಲಂ ಖಾನ್ ಹೇಳಿದ್ದಾರೆ.

ತನ್ನ ಕಂಪನಿಯ ಸಿಬ್ಬಂದಿಗೆ ಹಣ ಪಾವತಿಸದ ಪ್ರಕರಣದಲ್ಲಿ ಯೂನುಸ್‌ ಅವರಿಗೆ ಜೈಲು ಶಿಕ್ಷೆಯಾಗಿದೆ. ಈ ಕುರಿತು ಮಾತನಾಡಿರುವ ಅವರ ಪರ ವಕೀಲ ಖಾಜಾ ತನ್ವೀರ್, “ಈ ತೀರ್ಪು ಆಧಾರ ರಹಿತ, ಸುಳ್ಳು ಮತ್ತು ಕೆಟ್ಟ ಉದ್ದೇಶದಿಂದ ಕೂಡಿದೆ” ಎಂದಿದ್ದಾರೆ.

ಯೂನುಸ್‌ ಅವರನ್ನು ಪ್ರಧಾನಿ ಶೇಖ್ ಹಸೀನಾ ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದರು. ಅವರ ವಿರುದ್ದ ವಾಗ್ದಾಳಿ ನಡೆಸುತ್ತಿದ್ದರು. ಯೂನುಸ್‌ ವಿರುದ್ದ ಹಲವು ಪ್ರಕರಣಗಳು ದಾಖಲಾಗಿತ್ತು. ಈ ಬೆಳವಣಿಗೆಯನ್ನು ಜಾಗತಿಕ ಪ್ರಮುಖರಾದ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ವಿಶ್ವ ಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಬಾನ್‌ ಕಿ ಮೂನ್ ಸೇರಿದಂತೆ ಅನೇಕರು ಖಂಡಿಸಿದ್ದರು.

ಯೂನುಸ್ ಅವರ ವಿರುದ್ದದ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 160 ಜಾಗತಿಕ ಗಣ್ಯರು ಬಹಿರಂಗ ಪತ್ರ ಬರೆದಿದ್ದರು. ಇದೀಗ ಯೂನುಸ್‌ ಅವರಿಗೆ ಜೈಲು ಶಿಕ್ಷೆ ವಿಧಿಸುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...