Homeಮುಖಪುಟನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ 'ಹೊಸ ವರ್ಷದ ಕ್ರೂರ ಉಡುಗೊರೆ' ಎಂದ...

ನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ ‘ಹೊಸ ವರ್ಷದ ಕ್ರೂರ ಉಡುಗೊರೆ’ ಎಂದ ಕಾಂಗ್ರೆಸ್‌

- Advertisement -
- Advertisement -

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ)ಯೋಜನೆಯಡಿಲ್ಲಿನ ಕಾರ್ಮಿಕರ ಪಾವತಿಯನ್ನು ಇನ್ನು ಮುಂದೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯ( (ABPS)) ಮೂಲಕವೇ ಮಾಡಲು ನಿರ್ಧರಿಸಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರ ‘ಕ್ರೂರ ಹೊಸ ವರ್ಷದ ಉಡುಗೊರೆ’ ಎಂದು ಕಾಂಗ್ರೆಸ್ ಕರೆದಿದ್ದು, ಇದು ಕೋಟಿಗಟ್ಟಲೆ ಬಡವರನ್ನು ಮತ್ತು ಅಂಚಿನಲ್ಲಿರುವ ನಾಗರಿಕರನ್ನು ಮೂಲಭೂತ ಆದಾಯವನ್ನು ಗಳಿಸುವುದರಿಂದ ಹೊರಗಿಡುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು ಆಧಾರ್-ಆಧಾರಿತ ಪಾವತಿ ವ್ಯವಸ್ಥೆಯನ್ನು (ABPS) ಜಾರಿಗೊಳಿಸಲು ಡಿ.31ರ ಗಡುವನ್ನು ವಿಸ್ತರಿಸಿಲ್ಲ. ಕಾರ್ಮಿಕರ ಆಧಾರ್ ವಿವರಗಳನ್ನು ಉದ್ಯೋಗ ಕಾರ್ಡ್‌ಗಳಿಗೆ ಜೋಡನೆ ಮಾಡಬೇಕಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜೈರಾಮ್ ರಮೇಶ್, ಮೋದಿ ಸರ್ಕಾರವು ತಂತ್ರಜ್ಞಾನದ ವಿನಾಶಕಾರಿ ಪ್ರಯೋಗಗಳನ್ನು ಮುಂದುವರೆಸುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಾರ್ವಜನಿಕ ಕೆಲಸಗಳ ಮೂಲಕ ಮೂಲ ಆದಾಯವನ್ನು ಗಳಿಸುವುದರಿಂದ ಕೋಟಿಗಟ್ಟಲೆ ಬಡ ಮತ್ತು ಅಂಚಿನಲ್ಲಿರುವ ಭಾರತೀಯರನ್ನು ಹೊರಗಿಡುವ ‘ಪ್ರಧಾನ ಮಂತ್ರಿಯ ಕ್ರೂರ ಹೊಸ ವರ್ಷದ ಉಡುಗೊರೆ’ಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2023ರ ಆ.30ರಿಂದ ತನ್ನ ಬೇಡಿಕೆಗಳನ್ನು ಪುನರುಚ್ಚರಿಸುತ್ತದೆ. ಮೋದಿ ಸರ್ಕಾರವು ತಂತ್ರಜ್ಞಾನವನ್ನು ಶಸ್ತ್ರಾಸ್ತ್ರಗೊಳಿಸುವುದನ್ನು ನಿಲ್ಲಿಸಬೇಕು. ವಿಶೇಷವಾಗಿ ಆಧಾರ್ ಹೆಸರಿನಲ್ಲಿ ದುರ್ಬಲ ಭಾರತೀಯರಿಗೆ ಸಾಮಾಜಿಕ ಕಲ್ಯಾಣ ಪ್ರಯೋಜನಗಳನ್ನು ನಿರಾಕರಿಸುವುದನ್ನು ನಿಲ್ಲಿಸಬೇಕು, ವಿಳಂಬಿತ ವೇತನ ಪಾವತಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

25.69 ಕೋಟಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿದ್ದು, ಅದರಲ್ಲಿ 14.33 ಕೋಟಿ ಸಕ್ರಿಯ ಕೆಲಸಗಾರರೆಂದು ಪರಿಗಣಿಸಲಾಗಿದೆ ಮತ್ತು ಇದರಲ್ಲಿ ಕ್ರಮವಾಗಿ ಶೇ.34.8 (8.9 ಕೋಟಿ) ಮತ್ತು ಶೇ.12.7 (1.8 ಕೋಟಿ) ಎಬಿಪಿಎಸ್‌ಗೆ ಅನರ್ಹರಾಗಿದ್ದಾರೆ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರು ಎಬಿಪಿಎಸ್‌ಗೆ ಅರ್ಹರಲ್ಲ ಎಂಬ ಕಾರಣಕ್ಕೆ ಯಾವುದೇ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗುವುದಿಲ್ಲ ಎಂಬ 2023ರ ಸಚಿವಾಲಯದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಜೈರಾಮ್ ರಮೇಶ್,  ಏಪ್ರಿಲ್ 2022ರಿಂದ 7.6 ಕೋಟಿ ಕಾರ್ಮಿಕರ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ 1.9 ಕೋಟಿ ಕಾರ್ಡ್‌ಗಳನ್ನು ಅಳಿಸಲಾಗಿದೆ ಎಂದು ಹೇಳಿದ್ದಾರೆ.

ಆಧಾರ್ ದೃಢೀಕರಣ ಮತ್ತು ಎಬಿಪಿಎಸ್‌ನ್ನು ಜಾರಿಗೊಳಿಸಲು ಮೋದಿ ಸರ್ಕಾರದ ಆತುರವು ಗಮನಾರ್ಹ ಸಂಖ್ಯೆಯ ಕಾರ್ಡ್‌ಗಳ ಅಳಿಸುವಿಕೆಗೆ ಕಾರಣವಾಗಿದೆ ಎಂದು ಪರಿಶೀಲನೆಯು ತೋರಿಸಿದೆ. ವಿವಿಧ ಪಾಲುದಾರರು ವೇತನ ಪಾವತಿಗೆ ಎಬಿಪಿಎಸ್‌ನ್ನು ಅತ್ಯುತ್ತಮ ಮಾರ್ಗವೆಂದು ಕಂಡುಕೊಂಡಿದ್ದಾರೆ ಎಂಬ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಮೇಶ್, ಈ ಪಾಲುದಾರರು ಯಾರು ಮತ್ತು ಯಾವಾಗ ಈ ಸಮಾಲೋಚನೆಗಳನ್ನು ನಡೆಸಲಾಯಿತು ಎಂಬುದನ್ನು ಸ್ಪಷ್ಟಪಡಿಸಲು ಸಚಿವಾಲಯವನ್ನು ಕೇಳಿದರು.  ಎಬಿಪಿಎಸ್‌ನಿಂದ ಪಾವತಿ ದಕ್ಷತೆಯ ಹೆಚ್ಚಳದ ಕುರಿತ ಸಚಿವಾಲಯದ ಸಮರ್ಥನೆಯು ಆಧಾರರಹಿತವಾಗಿ ಉಳಿದಿವೆ ಎಂದು ಹೇಳಿದ್ದಾರೆ.

ಹೊಸ ವರ್ಷದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯೋಜನೆಯಡಿಲ್ಲಿನ ಎಲ್ಲ ವೇತನಗಳನ್ನು ಆಧಾರ್ ಆಧರಿತ ಪಾವತಿ ವ್ಯವಸ್ಥೆ (ಎಬಿಪಿಎಸ್)ಯ ಮೂಲಕವೇ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಕಾರ್ಮಿಕರ ಆಧಾರ್ ವಿವರಗಳನ್ನು ಅವರ ಉದ್ಯೋಗ ಕಾರ್ಡ್‌ಗಳ ಜೊತೆಗೆ ಜೋಡಣೆಗೊಳಿಸುವುದು ಅಗತ್ಯವಾಗಿದೆ. ಎಬಿಪಿಎಸ್‌ನ್ನು ಕಡ್ಡಾಯಗೊಳಿಸಿದ 5ನೇ ಗಡುವು 2023ರ ಡಿ.31ರಂದು ಅಂತ್ಯಗೊಂಡಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...