Homeಮುಖಪುಟನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ 'ಹೊಸ ವರ್ಷದ ಕ್ರೂರ ಉಡುಗೊರೆ' ಎಂದ...

ನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ ‘ಹೊಸ ವರ್ಷದ ಕ್ರೂರ ಉಡುಗೊರೆ’ ಎಂದ ಕಾಂಗ್ರೆಸ್‌

- Advertisement -
- Advertisement -

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ)ಯೋಜನೆಯಡಿಲ್ಲಿನ ಕಾರ್ಮಿಕರ ಪಾವತಿಯನ್ನು ಇನ್ನು ಮುಂದೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯ( (ABPS)) ಮೂಲಕವೇ ಮಾಡಲು ನಿರ್ಧರಿಸಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರ ‘ಕ್ರೂರ ಹೊಸ ವರ್ಷದ ಉಡುಗೊರೆ’ ಎಂದು ಕಾಂಗ್ರೆಸ್ ಕರೆದಿದ್ದು, ಇದು ಕೋಟಿಗಟ್ಟಲೆ ಬಡವರನ್ನು ಮತ್ತು ಅಂಚಿನಲ್ಲಿರುವ ನಾಗರಿಕರನ್ನು ಮೂಲಭೂತ ಆದಾಯವನ್ನು ಗಳಿಸುವುದರಿಂದ ಹೊರಗಿಡುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು ಆಧಾರ್-ಆಧಾರಿತ ಪಾವತಿ ವ್ಯವಸ್ಥೆಯನ್ನು (ABPS) ಜಾರಿಗೊಳಿಸಲು ಡಿ.31ರ ಗಡುವನ್ನು ವಿಸ್ತರಿಸಿಲ್ಲ. ಕಾರ್ಮಿಕರ ಆಧಾರ್ ವಿವರಗಳನ್ನು ಉದ್ಯೋಗ ಕಾರ್ಡ್‌ಗಳಿಗೆ ಜೋಡನೆ ಮಾಡಬೇಕಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜೈರಾಮ್ ರಮೇಶ್, ಮೋದಿ ಸರ್ಕಾರವು ತಂತ್ರಜ್ಞಾನದ ವಿನಾಶಕಾರಿ ಪ್ರಯೋಗಗಳನ್ನು ಮುಂದುವರೆಸುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಾರ್ವಜನಿಕ ಕೆಲಸಗಳ ಮೂಲಕ ಮೂಲ ಆದಾಯವನ್ನು ಗಳಿಸುವುದರಿಂದ ಕೋಟಿಗಟ್ಟಲೆ ಬಡ ಮತ್ತು ಅಂಚಿನಲ್ಲಿರುವ ಭಾರತೀಯರನ್ನು ಹೊರಗಿಡುವ ‘ಪ್ರಧಾನ ಮಂತ್ರಿಯ ಕ್ರೂರ ಹೊಸ ವರ್ಷದ ಉಡುಗೊರೆ’ಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2023ರ ಆ.30ರಿಂದ ತನ್ನ ಬೇಡಿಕೆಗಳನ್ನು ಪುನರುಚ್ಚರಿಸುತ್ತದೆ. ಮೋದಿ ಸರ್ಕಾರವು ತಂತ್ರಜ್ಞಾನವನ್ನು ಶಸ್ತ್ರಾಸ್ತ್ರಗೊಳಿಸುವುದನ್ನು ನಿಲ್ಲಿಸಬೇಕು. ವಿಶೇಷವಾಗಿ ಆಧಾರ್ ಹೆಸರಿನಲ್ಲಿ ದುರ್ಬಲ ಭಾರತೀಯರಿಗೆ ಸಾಮಾಜಿಕ ಕಲ್ಯಾಣ ಪ್ರಯೋಜನಗಳನ್ನು ನಿರಾಕರಿಸುವುದನ್ನು ನಿಲ್ಲಿಸಬೇಕು, ವಿಳಂಬಿತ ವೇತನ ಪಾವತಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

25.69 ಕೋಟಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿದ್ದು, ಅದರಲ್ಲಿ 14.33 ಕೋಟಿ ಸಕ್ರಿಯ ಕೆಲಸಗಾರರೆಂದು ಪರಿಗಣಿಸಲಾಗಿದೆ ಮತ್ತು ಇದರಲ್ಲಿ ಕ್ರಮವಾಗಿ ಶೇ.34.8 (8.9 ಕೋಟಿ) ಮತ್ತು ಶೇ.12.7 (1.8 ಕೋಟಿ) ಎಬಿಪಿಎಸ್‌ಗೆ ಅನರ್ಹರಾಗಿದ್ದಾರೆ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರು ಎಬಿಪಿಎಸ್‌ಗೆ ಅರ್ಹರಲ್ಲ ಎಂಬ ಕಾರಣಕ್ಕೆ ಯಾವುದೇ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗುವುದಿಲ್ಲ ಎಂಬ 2023ರ ಸಚಿವಾಲಯದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಜೈರಾಮ್ ರಮೇಶ್,  ಏಪ್ರಿಲ್ 2022ರಿಂದ 7.6 ಕೋಟಿ ಕಾರ್ಮಿಕರ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ 1.9 ಕೋಟಿ ಕಾರ್ಡ್‌ಗಳನ್ನು ಅಳಿಸಲಾಗಿದೆ ಎಂದು ಹೇಳಿದ್ದಾರೆ.

ಆಧಾರ್ ದೃಢೀಕರಣ ಮತ್ತು ಎಬಿಪಿಎಸ್‌ನ್ನು ಜಾರಿಗೊಳಿಸಲು ಮೋದಿ ಸರ್ಕಾರದ ಆತುರವು ಗಮನಾರ್ಹ ಸಂಖ್ಯೆಯ ಕಾರ್ಡ್‌ಗಳ ಅಳಿಸುವಿಕೆಗೆ ಕಾರಣವಾಗಿದೆ ಎಂದು ಪರಿಶೀಲನೆಯು ತೋರಿಸಿದೆ. ವಿವಿಧ ಪಾಲುದಾರರು ವೇತನ ಪಾವತಿಗೆ ಎಬಿಪಿಎಸ್‌ನ್ನು ಅತ್ಯುತ್ತಮ ಮಾರ್ಗವೆಂದು ಕಂಡುಕೊಂಡಿದ್ದಾರೆ ಎಂಬ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಮೇಶ್, ಈ ಪಾಲುದಾರರು ಯಾರು ಮತ್ತು ಯಾವಾಗ ಈ ಸಮಾಲೋಚನೆಗಳನ್ನು ನಡೆಸಲಾಯಿತು ಎಂಬುದನ್ನು ಸ್ಪಷ್ಟಪಡಿಸಲು ಸಚಿವಾಲಯವನ್ನು ಕೇಳಿದರು.  ಎಬಿಪಿಎಸ್‌ನಿಂದ ಪಾವತಿ ದಕ್ಷತೆಯ ಹೆಚ್ಚಳದ ಕುರಿತ ಸಚಿವಾಲಯದ ಸಮರ್ಥನೆಯು ಆಧಾರರಹಿತವಾಗಿ ಉಳಿದಿವೆ ಎಂದು ಹೇಳಿದ್ದಾರೆ.

ಹೊಸ ವರ್ಷದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯೋಜನೆಯಡಿಲ್ಲಿನ ಎಲ್ಲ ವೇತನಗಳನ್ನು ಆಧಾರ್ ಆಧರಿತ ಪಾವತಿ ವ್ಯವಸ್ಥೆ (ಎಬಿಪಿಎಸ್)ಯ ಮೂಲಕವೇ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಕಾರ್ಮಿಕರ ಆಧಾರ್ ವಿವರಗಳನ್ನು ಅವರ ಉದ್ಯೋಗ ಕಾರ್ಡ್‌ಗಳ ಜೊತೆಗೆ ಜೋಡಣೆಗೊಳಿಸುವುದು ಅಗತ್ಯವಾಗಿದೆ. ಎಬಿಪಿಎಸ್‌ನ್ನು ಕಡ್ಡಾಯಗೊಳಿಸಿದ 5ನೇ ಗಡುವು 2023ರ ಡಿ.31ರಂದು ಅಂತ್ಯಗೊಂಡಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...