Homeಅಂತರಾಷ್ಟ್ರೀಯಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

- Advertisement -
- Advertisement -

ಭಾರತಕ್ಕೆ ನುಸುಳಲು ಇಸ್ರೇಲಿ ನಿರ್ಮಿತ ಲೇಸರ್ ಮಾರ್ಗದರ್ಶಿ ಬಾಂಬುಗಳಿಂದ ಸುಮಾರು 129 ಜೈಶ್ ಭಯೋತ್ಪಾದಕರು ಬಾಲಕೋಟ್ ಶಿಬಿರದಲ್ಲಿ ಕಾಯುತ್ತಿದ್ದಾರೆ ಎಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಫೆಬ್ರವರಿಯಲ್ಲಿ ಭಾರತದಿಂದ ಬಾಂಬ್ ದಾಳಿಗೊಳಗಾದ ಪಾಕಿಸ್ತಾನದ ಬಾಲಕೋಟ್ನಲ್ಲಿನ ಭಯೋತ್ಪಾದಕ ಶಿಬಿರವನ್ನು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಲಾಗಿದ್ದು, ಸುಮಾರು 500 ಭಯೋತ್ಪಾದಕರು ಭಾರತಕ್ಕೆ ನುಸುಳಲು ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಬಾಲಕೋಟ್ ಅನ್ನು ಪಾಕಿಸ್ತಾನವು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಿದೆ. ಬಾಲಾಕೋಟ್ ನಲ್ಲಿ ಸಾಕಷ್ಟು ಹಾನಿ ನಡೆದಿದೆ ಎಂಬುದನ್ನು ಇದು ತೋರಿಸುತ್ತದೆ. ಹಾಗಾಗಿ ಬಾಲಕೋಟ್ ನಲ್ಲಿ ಭಾರತೀಯ ವಾಯುಪಡೆಯು ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದ್ದರಿಂದ ಪಾಕಿಸ್ತಾನ ಈಗ ಅವರ ಜನರನ್ನು ಅಲ್ಲಿಂದ ವಾಪಸ್ ಕರೆಸಿಕೊಳ್ಳುತ್ತಿದ್ದಾರೆ ” ಎಂದು ಜನರಲ್ ರಾವತ್ ರವರಯ ಚೆನ್ನೈನಲ್ಲಿ, ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಹೇಳಿದ್ದಾರೆ.

ನಿನ್ನೆ ಹೂಸ್ಟನ್ ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ಮೋದಿಯವರು, ಭಯೋತ್ಪಾದನೆ ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವವರ ವಿರುದ್ಧ ಹೋರಾಡುವ ಸಮಯ ಇದಾಗಿದೆ ಎಂದು ಹೇಳಿದ್ದಾರೆ. “ಇದು ಅಮೆರಿಕಾದಲ್ಲಿ 9/11 ಆಗಿರಲಿ ಅಥವಾ ಮುಂಬೈಯಲ್ಲಿ 26/11 ಆಗಿರಲಿ, ಅದರ ಸಂಚುಕೋರರು ಎಲ್ಲಿದ್ದಾರೆ? ನೀವು ಮಾತ್ರವಲ್ಲ, ಈ ಜನರು ಯಾರೆಂದು ಇಡೀ ಜಗತ್ತಿಗೆ ತಿಳಿದಿದೆ” ಎಂದು ಅವರು ಪಾಕಿಸ್ತಾನವನ್ನು ಹೆಸರಿಸದೆ ಟೀಕಿಸಿದ್ದಾರೆ.

ಫೆಬ್ರವರಿ 26 ರಂದು, ಭಾರತೀಯ ವಾಯುಸೇನೆಯ ಹಲವು ಫ್ರೆಂಚ್ ಮೂಲದ ಮಿರಾಜ್ 2000 ಜೆಟ್‌ಗಳೊಂದಿಗೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿನ ಜೈಷ್-ಎ-ಮೊಹಮ್ಮದ್ ಕ್ಯಾಂಪ್‌ ಮೇಲೆ ವಾಯುದಾಳಿ ನಡೆಸಿತ್ತು. ಇದರಿಂದ ಹಲವು ಉಗ್ರರು ಹತರಾಗಿದ್ದರು ಎನ್ನಲಾಗುತ್ತಿದೆ.

ಇದಕ್ಕೂ ಮೊದಲು ಕಾಶ್ಮೀರದ ಪುಲ್ವಾಮಾದ ಅರೆಸೈನಿಕ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮೇಲೆ ಉಗ್ರರ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ 45ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು.

ಬಾಲಕೋಟ್ ಜೈಶ್ ಶಿಬಿರವನ್ನು ಪುನಃ ಸಕ್ರಿಯಗೊಳಿಸುವ ಪಾಕಿಸ್ತಾನದ ಕ್ರಮವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡದಿರುವ ಬಗ್ಗೆ ಅಂತರರಾಷ್ಟ್ರೀಯ ಸಮುದಾಯಕ್ಕೆ ತನ್ನ ಬದ್ಧತೆಯನ್ನು ನಿರಾಕರಿಸುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಜಾಗತಿಕ ಭಯೋತ್ಪಾದಕ ಹಣಕಾಸು ವಾಚ್‌ಡಾಗ್ (ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ -ಎಫ್‌ಎಟಿಎಫ್) ಪಾಕಿಸ್ತಾನವನ್ನು “ವರ್ಧಿತ ಕಪ್ಪುಪಟ್ಟಿ” ಯಲ್ಲಿ ಇರಿಸಿದೆ. ಭಯೋತ್ಪಾದಕರನ್ನು ಬಂಧಿಸುವುದು ಮತ್ತು ಅವರ ನಿಧಿ ಮೂಲಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ ಎಫ್‌ಎಟಿಎಫ್‌ನ 27 ಅಂಶಗಳ ಕ್ರಿಯಾ ಯೋಜನೆಯನ್ನು ಪಾಕಿಸ್ತಾನವು ಅಳವಡಿಸಿಕೊಳ್ಳಲು 15 ತಿಂಗಳ ಗಡುವು ಅಕ್ಟೋಬರ್‌ನಲ್ಲಿ ಕೊನೆಗೊಳ್ಳುತ್ತದೆ.

ಎಫ್‌ಎಟಿಎಫ್‌ನ ಗುರಿಯನ್ನು ಪೂರೈಸದಿರುವುದು ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿ, ವಿಶ್ವಬ್ಯಾಂಕ್ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ಗಳು ಯಾವ ರೀತಿ ನೋಡುತ್ತವೆ ಎಂಬುದು ಗೊತ್ತಾಗಲಿದೆ. ಜೊತೆಗೆ ಕ್ರೆಡಿಟ್ ರೇಟಿಂಗ್ ಏಜೆನ್ಸಿಗಳಾದ ಮೂಡಿಸ್, ಸ್ಟ್ಯಾಂಡರ್ಡ್ & ಪೂವರ್ಸ್ ಮತ್ತು ಫಿಚ್‌ನ ಋಣಾತ್ಮಕ ಮೌಲ್ಯಮಾಪನಗಳನ್ನು ಎದುರಿಸಬೇಕಾಗುತ್ತದೆ. ಇದು ಆರ್ಥಿಕ ಕುಸಿತವನ್ನು ನಿವಾರಿಸಲು ಸಾಧ್ಯವಿರುವ ಎಲ್ಲ ಅಂತಾರಾಷ್ಟ್ರೀಯ ಮೂಲಗಳಿಂದ ನೆರವು ಪಡೆಯುತ್ತಿರುವ ಪಾಕಿಸ್ತಾನದ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...