Homeಅಂತರಾಷ್ಟ್ರೀಯಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

- Advertisement -
- Advertisement -

ಭಾರತಕ್ಕೆ ನುಸುಳಲು ಇಸ್ರೇಲಿ ನಿರ್ಮಿತ ಲೇಸರ್ ಮಾರ್ಗದರ್ಶಿ ಬಾಂಬುಗಳಿಂದ ಸುಮಾರು 129 ಜೈಶ್ ಭಯೋತ್ಪಾದಕರು ಬಾಲಕೋಟ್ ಶಿಬಿರದಲ್ಲಿ ಕಾಯುತ್ತಿದ್ದಾರೆ ಎಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಫೆಬ್ರವರಿಯಲ್ಲಿ ಭಾರತದಿಂದ ಬಾಂಬ್ ದಾಳಿಗೊಳಗಾದ ಪಾಕಿಸ್ತಾನದ ಬಾಲಕೋಟ್ನಲ್ಲಿನ ಭಯೋತ್ಪಾದಕ ಶಿಬಿರವನ್ನು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಲಾಗಿದ್ದು, ಸುಮಾರು 500 ಭಯೋತ್ಪಾದಕರು ಭಾರತಕ್ಕೆ ನುಸುಳಲು ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಬಾಲಕೋಟ್ ಅನ್ನು ಪಾಕಿಸ್ತಾನವು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಿದೆ. ಬಾಲಾಕೋಟ್ ನಲ್ಲಿ ಸಾಕಷ್ಟು ಹಾನಿ ನಡೆದಿದೆ ಎಂಬುದನ್ನು ಇದು ತೋರಿಸುತ್ತದೆ. ಹಾಗಾಗಿ ಬಾಲಕೋಟ್ ನಲ್ಲಿ ಭಾರತೀಯ ವಾಯುಪಡೆಯು ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದ್ದರಿಂದ ಪಾಕಿಸ್ತಾನ ಈಗ ಅವರ ಜನರನ್ನು ಅಲ್ಲಿಂದ ವಾಪಸ್ ಕರೆಸಿಕೊಳ್ಳುತ್ತಿದ್ದಾರೆ ” ಎಂದು ಜನರಲ್ ರಾವತ್ ರವರಯ ಚೆನ್ನೈನಲ್ಲಿ, ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಹೇಳಿದ್ದಾರೆ.

ನಿನ್ನೆ ಹೂಸ್ಟನ್ ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ಮೋದಿಯವರು, ಭಯೋತ್ಪಾದನೆ ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವವರ ವಿರುದ್ಧ ಹೋರಾಡುವ ಸಮಯ ಇದಾಗಿದೆ ಎಂದು ಹೇಳಿದ್ದಾರೆ. “ಇದು ಅಮೆರಿಕಾದಲ್ಲಿ 9/11 ಆಗಿರಲಿ ಅಥವಾ ಮುಂಬೈಯಲ್ಲಿ 26/11 ಆಗಿರಲಿ, ಅದರ ಸಂಚುಕೋರರು ಎಲ್ಲಿದ್ದಾರೆ? ನೀವು ಮಾತ್ರವಲ್ಲ, ಈ ಜನರು ಯಾರೆಂದು ಇಡೀ ಜಗತ್ತಿಗೆ ತಿಳಿದಿದೆ” ಎಂದು ಅವರು ಪಾಕಿಸ್ತಾನವನ್ನು ಹೆಸರಿಸದೆ ಟೀಕಿಸಿದ್ದಾರೆ.

ಫೆಬ್ರವರಿ 26 ರಂದು, ಭಾರತೀಯ ವಾಯುಸೇನೆಯ ಹಲವು ಫ್ರೆಂಚ್ ಮೂಲದ ಮಿರಾಜ್ 2000 ಜೆಟ್‌ಗಳೊಂದಿಗೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿನ ಜೈಷ್-ಎ-ಮೊಹಮ್ಮದ್ ಕ್ಯಾಂಪ್‌ ಮೇಲೆ ವಾಯುದಾಳಿ ನಡೆಸಿತ್ತು. ಇದರಿಂದ ಹಲವು ಉಗ್ರರು ಹತರಾಗಿದ್ದರು ಎನ್ನಲಾಗುತ್ತಿದೆ.

ಇದಕ್ಕೂ ಮೊದಲು ಕಾಶ್ಮೀರದ ಪುಲ್ವಾಮಾದ ಅರೆಸೈನಿಕ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮೇಲೆ ಉಗ್ರರ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ 45ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು.

ಬಾಲಕೋಟ್ ಜೈಶ್ ಶಿಬಿರವನ್ನು ಪುನಃ ಸಕ್ರಿಯಗೊಳಿಸುವ ಪಾಕಿಸ್ತಾನದ ಕ್ರಮವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡದಿರುವ ಬಗ್ಗೆ ಅಂತರರಾಷ್ಟ್ರೀಯ ಸಮುದಾಯಕ್ಕೆ ತನ್ನ ಬದ್ಧತೆಯನ್ನು ನಿರಾಕರಿಸುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಜಾಗತಿಕ ಭಯೋತ್ಪಾದಕ ಹಣಕಾಸು ವಾಚ್‌ಡಾಗ್ (ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ -ಎಫ್‌ಎಟಿಎಫ್) ಪಾಕಿಸ್ತಾನವನ್ನು “ವರ್ಧಿತ ಕಪ್ಪುಪಟ್ಟಿ” ಯಲ್ಲಿ ಇರಿಸಿದೆ. ಭಯೋತ್ಪಾದಕರನ್ನು ಬಂಧಿಸುವುದು ಮತ್ತು ಅವರ ನಿಧಿ ಮೂಲಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ ಎಫ್‌ಎಟಿಎಫ್‌ನ 27 ಅಂಶಗಳ ಕ್ರಿಯಾ ಯೋಜನೆಯನ್ನು ಪಾಕಿಸ್ತಾನವು ಅಳವಡಿಸಿಕೊಳ್ಳಲು 15 ತಿಂಗಳ ಗಡುವು ಅಕ್ಟೋಬರ್‌ನಲ್ಲಿ ಕೊನೆಗೊಳ್ಳುತ್ತದೆ.

ಎಫ್‌ಎಟಿಎಫ್‌ನ ಗುರಿಯನ್ನು ಪೂರೈಸದಿರುವುದು ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿ, ವಿಶ್ವಬ್ಯಾಂಕ್ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ಗಳು ಯಾವ ರೀತಿ ನೋಡುತ್ತವೆ ಎಂಬುದು ಗೊತ್ತಾಗಲಿದೆ. ಜೊತೆಗೆ ಕ್ರೆಡಿಟ್ ರೇಟಿಂಗ್ ಏಜೆನ್ಸಿಗಳಾದ ಮೂಡಿಸ್, ಸ್ಟ್ಯಾಂಡರ್ಡ್ & ಪೂವರ್ಸ್ ಮತ್ತು ಫಿಚ್‌ನ ಋಣಾತ್ಮಕ ಮೌಲ್ಯಮಾಪನಗಳನ್ನು ಎದುರಿಸಬೇಕಾಗುತ್ತದೆ. ಇದು ಆರ್ಥಿಕ ಕುಸಿತವನ್ನು ನಿವಾರಿಸಲು ಸಾಧ್ಯವಿರುವ ಎಲ್ಲ ಅಂತಾರಾಷ್ಟ್ರೀಯ ಮೂಲಗಳಿಂದ ನೆರವು ಪಡೆಯುತ್ತಿರುವ ಪಾಕಿಸ್ತಾನದ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...