Homeಮುಖಪುಟಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

ಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

- Advertisement -
- Advertisement -

ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಪುತ್ರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಈ ವಾರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಆಂಧ್ರಪ್ರದೇಶದ ಕಾಂಗ್ರೆಸ್ ನೇತೃತ್ವವನ್ನು ಶರ್ಮಿಳಾ ಅವರಿಗೆ ನೀಡಲು ಕಾಂಗ್ರೆಸ್ ಹೈಕಾಂಡ್ ಮುಂದಾಗಿದೆ ಎನ್ನಲಾಗಿದ್ದು, ತಮ್ಮ ಸಹೋದರ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಸೆಣಸಲು ಶರ್ಮಿಳಾ ತಯಾರಾಗಿದ್ದಾರೆ ಎನ್ನಲಾಗಿದೆ.

ಕಳೆದ ತಿಂಗಳು ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ ಪ್ರಾಬಲ್ಯವನ್ನು ಕೊನೆಗೊಳಿಸಿದೆ. ಮುಂದಿನ ಏಪ್ರಿಲ್‌ ಹೊತ್ತಿಗೆ ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಯಲಿದ್ದು, ವೈಎಸ್ಆರ್ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಸೋಲಿಸಲು ಕಾಂಗ್ರೆಸ್ ಪಣ ತೊಟ್ಟಿದೆ.

ಮೂಲಗಳ ಪ್ರಕಾರ, ಚುನಾವಣೆಗೂ ಮುನ್ನ ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕತ್ವವನ್ನು ಶರ್ಮಿಳಾ ಅವರಿಗೆ ವಹಿಸುವುದಕ್ಕೆ ವರಿಷ್ಠರು ನಿರ್ಧರಿಸಿದ್ದಾರೆ. ರಾಜ್ಯ ವಿಭಜನೆಯ ನಂತರ ಕಾಂಗ್ರೆಸ್ ಎರಡೂ ರಾಜ್ಯಗಳಲ್ಲಿ ಹೀನಾಯವಾಗಿ ಸೋಲು ಕಂಡಿತ್ತು. ತೆಲಂಗಾಣದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಶರ್ಮಿಳಾ ನಾಯಕತ್ವದ ಮೂಲಕ ಆಂಧ್ರಪ್ರದೇಶದಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ. ಪ್ರಮುಖ ವಿರೋಧ ಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಪ್ರಭಾವವನ್ನು ಹಿಡಿದಿಟ್ಟುಕೊಳ್ಳಲು ಹೆಣಗಾಡುತ್ತಿರುವ ಸಮಯದಲ್ಲಿ ವೈಎಸ್ಆರ್‌ಸಿಪಿಯನ್ನು ತೊರೆಯಲು ಸಿದ್ಧರಿರುವವರು ಈಗ ಕಾಂಗ್ರೆಸ್ಸಿಗೆ ಸೇರಬಹುದು ಎಂದು ಪಕ್ಷ ನಿರೀಕ್ಷೆಯಲ್ಲಿದೆ.

ಹೊಸ ರಾಜ್ಯ ರಚನೆಯ ಆಂದೋಲನದ ಹಿನ್ನಲೆಯಲ್ಲಿ ಶರ್ಮಿಳಾ ಸಹೋದರ ಜಗನ್ ಮೋಹನ್ ರೆಡ್ಡಿ ಕಾಂಗ್ರೆಸ್‌ನಿಂದ ಬೇರ್ಪಟ್ಟು ವೈಎಸ್ಆರ್‌ಪಿ ಸ್ಥಾಪಿಸಿದರು. ಅವರೊಂದಿಗೆ 18 ಶಾಸಕರು ಸೇರಿಕೊಂಡರು ಮತ್ತು ಕಾಂಗ್ರೆಸ್ ಸಂಸದರೊಬ್ಬರು ರಾಜೀನಾಮೆ ನೀಡಿದರು. ಇದು ಹಲವು ಉಪಚುನಾವಣೆಗಳಿಗೆ ನಾಂದಿ ಹಾಡಿತು. ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿತರಾಗಿ ರೆಡ್ಡಿ ಜೈಲಿನಲ್ಲಿದ್ದಾಗ ಅವರ ತಾಯಿ ವೈಎಸ್ ವಿಜಯಮ್ಮ ಮತ್ತು ಸಹೋದರಿ ವೈಎಸ್ ಶರ್ಮಿಳಾ ಪ್ರಚಾರದ ನೇತೃತ್ವ ವಹಿಸಿದ್ದರು. ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ ಮುನ್ನಡೆ ಸಾಧಿಸಿತು.

ಒಂಬತ್ತು ವರ್ಷಗಳ ನಂತರ, 2021 ರಲ್ಲಿ ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಇರುವ ರಾಜಕೀಯ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ತೆಲಂಗಾಣದಲ್ಲಿ ವೈಎಸ್ಆರ್‌ಸಿಪಿಗೆ ಯಾವುದೇ ಅಸ್ತಿತ್ವವಿಲ್ಲ ಎಂದು ಅವರು ಒತ್ತಿ ಹೇಳಿದರು. ಅದೇ ವರ್ಷ ಜುಲೈನಲ್ಲಿ, ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿ, ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಪ್ರಾರಂಭಿಸಿದರು.

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶರ್ಮಿಳಾ ಅವರು ತೆಲಂಗಾಣ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿ, ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಸುಸಜ್ಜಿತವಾಗಿದ್ದು, ಅದನ್ನು ಹಾಳು ಮಾಡಲು ನಾನು ಬಯಸುವುದಿಲ್ಲ ಎಂದು ಅವರು ಹೇಳಿದ್ದರು.

ಕಾಂಗ್ರೆಸ್ ಮೂಲಗಳ ಪ್ರಕಾರ, ಆಂಧ್ರದಲ್ಲಿ ಪಕ್ಷದ ಮತಗಳಿಕೆಯು ಕಳೆದ 10 ವರ್ಷಗಳಲ್ಲಿ ಹೀನಾಯವಾಗಿ ಕುಸಿದಿದೆ. ಕೇವಲ ಶೇ.1 ಪ್ರತಿಶತದಷ್ಟು ಮತಬ್ಯಾಂಕ್ ಇದ್ದು, ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ಅವರ ಪಕ್ಷದ ಚಟುವಟಿಕೆಗಳನ್ನು ಮುಂದುವರಿಸಲು ಹಣಕಾಸಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...