Homeಮುಖಪುಟನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಅಂಕಿತ ಹಾಕಿದ್ದ ನೂತನ 3 ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಲಾಗಿದೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ.25 ರಂದು ಅಂಕಿತವನ್ನು ಹಾಕಿದ್ದಾರೆ.

ವಕೀಲ ವಿಶಾಲ್ ತಿವಾರಿ ಅವರು ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದ್ದು,  3 ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ತಡೆ ಮತ್ತು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ತಕ್ಷಣ  ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಿದ್ದಾರೆ.

ಹೆಚ್ಚಿನ ಸಂಸದರು ಅಮಾನತಿನಲ್ಲಿದ್ದಾಗ ಸಂಸತ್ತಿನಲ್ಲಿ ಸರಿಯಾದ ಚರ್ಚೆಯಿಲ್ಲದೆ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಡಿ.20 ರಂದು ಲೋಕಸಭೆಯಲ್ಲಿ ನೂತನ ಕ್ರಿಮಿನಲ್‌ ಮಸೂದೆಗಳನ್ನು ಅಂಗೀಕರಿಸಿದಾಗ 141 ಪ್ರತಿಪಕ್ಷ ಸಂಸದರು (ಎರಡೂ ಸದನಗಳಿಂದ) ಅಮಾನತುಗೊಂಡಿದ್ದರು. 2021ರಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಂಸತ್ತಿನಲ್ಲಿ ಸರಿಯಾದ ಚರ್ಚೆಗಳಿಲ್ಲದೆ ಮಸೂದೆಗಳ ಅಂಗೀಕಾರದ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದರು ಎಂದು ತಿವಾರಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಸಂಸತ್ತಿನಲ್ಲಿ ಚರ್ಚೆಯು ಪ್ರಜಾಸತ್ತಾತ್ಮಕ ಕಾನೂನು ರಚನೆಯ ಮೂಲಭೂತ ಭಾಗವಾಗಿದೆ. ಚರ್ಚೆಗಳ ಮೂಲಕ ಮಸೂದೆಗೆ ಅಗತ್ಯವಾದ ತಿದ್ದುಪಡಿಗಳನ್ನು ಮಾಡಲು ಸಹಾಯ ಮಾಡುತ್ತದೆ. ಈ ಮೂಲಕ ಮಸೂದೆಯು ಪರಿಪೂರ್ಣವಾಗುತ್ತದೆ. ಹೊಸ ಕ್ರಿಮಿನಲ್ ಕಾನೂನುಗಳ ಮೂಲಕ ತಂದ ಬದಲಾವಣೆಗಳು ಕಠೋರವಾಗಿವೆ ಮತ್ತು ವಾಸ್ತವದಲ್ಲಿ ಪೊಲೀಸ್ ರಾಜ್ಯವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿವೆ ಎಂದು ಅದು ಹೇಳುತ್ತದೆ. ಜೊತೆಗೆ ಅವು ಭಾರತದ ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಬ್ರಿಟೀಷ್ ಕಾನೂನುಗಳನ್ನು ವಸಾಹತುಶಾಹಿ ಯುಗದ ಕಠೋರ ಕಾನೂನೆಂದು ಪರಿಗಣಿಸಿದ್ದರೆ, ಬ್ರಿಟಿಷರ ಅವಧಿಯಲ್ಲಿ ನೀವು ಒಬ್ಬ ವ್ಯಕ್ತಿಯನ್ನು ಗರಿಷ್ಠ 15 ದಿನಗಳವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಬಹುದು. ಇದೀಗ 15 ದಿನಗಳಿಂದ 90 ದಿನಗಳವರೆಗೆ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ವಿಸ್ತರಿಸುವುದು. ಆಘಾತಕಾರಿ ನಿಬಂಧನೆಯು ಪೊಲೀಸ್ ಚಿತ್ರಹಿಂಸೆಗೆ ದಾರಿಯಾಗುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ.

3 ಕ್ರಿಮಿನಲ್ ಕಾನೂನುಗಳಿಗೆ ಸಂಬಂಧಿಸಿ ಈ ಹಿಂದೆ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮಾತನಾಡಿ ಮಾನವ ಹಕ್ಕುಗಳ ಸಂಭಾವ್ಯ ಉಲ್ಲಂಘನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಏನಿದು ಮಸೂದೆ?

ಈ ಬಾರಿಯ ಚಳಿಗಾದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯನ್ನು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ. ಈ ಮಸೂದೆ ಡಿ.21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದವು.

ಇದು ಪೊಲೀಸ್ ಬಲವನ್ನು ಮಿತಿಮೀರಿದ ಬಳಕೆಗೆ ಕಾರಣವಾಗಬಹುದು ಮತ್ತು ಮಾನವ ಹಕ್ಕುಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ಕಳವಳದ ನಡುವೆ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಸೂದೆಗಳ ಬಗ್ಗೆ ಚರ್ಚಿಸುವಾಗ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದ್ದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದರು.

ಭಾರತೀಯ ನ್ಯಾಯ (ಎರಡನೇ) ಸಂಹಿತಾ ಪ್ರಸ್ತುತ 358 ವಿಭಾಗಗಳನ್ನು ಹೊಂದಿದೆ. ಭಾರತೀಯ ನಾಗರಿಕಾ ಸುರಕ್ಷಾ (ಎರಡನೇ) ಸಂಹಿತಾ 531 ವಿಭಾಗಗಳನ್ನು ಹೊಂದಿದೆ ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತಾ 170 ವಿಭಾಗಗಳನ್ನು ಹೊಂದಿದೆ. ಮಸೂದೆಗಳನ್ನು ಮೊದಲು ಆ.11ರಂದು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ನಂತರ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ಬಗ್ಗೆ ಹೆಚ್ಚಿನ ಶಿಫಾರಸುಗಳನ್ನು ಮಾಡಿದ ನಂತರ ಸರ್ಕಾರವು ಮಸೂದೆಯನ್ನು ಹಿಂಪಡೆದಿತ್ತು.

ಭಾರತೀಯ ನ್ಯಾಯ ಸಂಹಿತಾ (BNS2) ಅಡಿಯಲ್ಲಿ ದೇಶದ್ರೋಹವನ್ನು ‘ರಾಜ್ಯದ್ರೋಹದ’ (ಸರ್ಕಾರದ ವಿರುದ್ಧ) ಬದಲಾಗಿ ‘ದೇಶದ್ರೋಹ’ (ರಾಷ್ಟ್ರದ ವಿರುದ್ಧ) ಎಂದು ಬದಲಾಯಿಸಲಾಗಿದೆ. ಇದಲ್ಲದೆ, ‘ಸಂಘಟಿತ ಅಪರಾಧ’ವನ್ನು ಅಪರಾಧ ಎಂದು ಸೇರಿಸಲಾಗಿದೆ. ಐದು ಅಥವಾ ಹೆಚ್ಚು ಜನರ ಗುಂಪು ಒಬ್ಬ ವ್ಯಕ್ತಿಯ ಜನಾಂಗ, ಜಾತಿ, ಲಿಂಗ, ಭಾಷೆ ಅಥವಾ ವೈಯಕ್ತಿಕ ನಂಬಿಕೆಯ ಆಧಾರಗಳ ಮೇಲೆ ಕೊಲೆ ಅಥವಾ ಗಂಭೀರ ಗಾಯ ಮಾಡಿದರೆ ಅದು ಗುಂಪು ಹತ್ಯೆಯಾಗಲಿದೆ. ಇಂತಹ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು ನೂತನ ಕಾನೂನಿನಲ್ಲಿ ಅವಕಾಶವಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...