Homeಮುಖಪುಟಮಣಿಪುರದಲ್ಲಿ ಕ್ರೈಸ್ತರು ಬದುಕಲಾರದ ಪರಿಸ್ಥಿತಿಯಿದೆ: ಪಿಣರಾಯಿ ವಿಜಯನ್

ಮಣಿಪುರದಲ್ಲಿ ಕ್ರೈಸ್ತರು ಬದುಕಲಾರದ ಪರಿಸ್ಥಿತಿಯಿದೆ: ಪಿಣರಾಯಿ ವಿಜಯನ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಕ್ರೈಸ್ತ ಸಮುದಾಯದ ಜನರೊಂದಿಗೆ ಕ್ರಿಸ್‌ಮಸ್‌ ಆಚರಿಸಿರುವುದನ್ನು ಮತ್ತು ಕ್ರೈಸ್ತರನ್ನು ತಲುಪಲು ಕೇರಳ ಬಿಜೆಪಿ ‘ಸ್ನೇಹಯಾತ್ರೆ’ ಹಮ್ಮಿಕೊಂಡಿರುವುದನ್ನು ಟೀಕಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಮಣಿಪುರದಲ್ಲಿ ಕ್ರೈಸ್ತ ಸಮುದಾಯದ ಜನರು ಬದುಕಲು ಸಾಧ್ಯವಿಲ್ಲದಂತಹ ಪರಿಸ್ಥಿತಿಯಿದೆ” ಎಂದಿದ್ದಾರೆ.

ಸೋಮವಾರ ಎರ್ನಾಕುಲಂ ಜಿಲ್ಲೆಯ ಪಿರವಮ್‌ನಲ್ಲಿ ‘ನವ ಕೇರಳ ಸದಸ್‌’ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಪಿಣರಾಯಿ ವಿಜಯನ್, “ಮಣಿಪುರಲ್ಲಿ ಕ್ರೈಸ್ತ ಸಮುದಾಯದ ಜನರು ಬದುಕಲಾರದಂತಹ ಪರಿಸ್ಥಿಯಿದೆ. ಕ್ರೈಸ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದರೂ ಸರ್ಕಾರ ಆ ಕಡೆ ತಲೆ ಹಾಕುತ್ತಿಲ್ಲ. ಮಾತನಾಡಬೇಕಾದವರು ಮೌನ ಪಾಲಿಸಿದ್ದಾರೆ. ನರಮೇಧವನ್ನು ತಡೆಯಲು ಇಚ್ಛಿಸದ ಕೆಲವು ವ್ಯಕ್ತಿಗಳು ಈಗ ವೇಷ ಧರಿಸುತ್ತಿದ್ದಾರೆ. ಸ್ನೇಹದ ನಾಟಕ ಮಾಡುತ್ತಿದ್ದಾರೆ. ಇದರ ಹಿಂದಿನ ಉದ್ದೇಶ ಎಲ್ಲರಿಗೂ ತಿಳಿದಿದೆ” ಎಂದಿದ್ದಾರೆ.

ಕ್ರಿಸ್‌ಮಸ್‌ ದಿನದಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದ ಬಿಷಪ್‌ಗಳು ವೈನ್‌ ಮತ್ತು ಕೇಕ್‌ ಅನ್ನು ಆನಂದಿಸಿದ್ದಾಗಿ ಹೇಳಿದ್ದನ್ನು ಪಿಣರಾಯಿ ವಿಜಯನ್‌ ಅವರ ಸಂಪುಟ ಸಹೋದ್ಯೋಗಿ ಸಾಜಿ ಚೆರಿಯನ್ ಟೀಕಿಸಿದ್ದರು. “ಬಿಷಪ್‌ಗಳು ವೈನ್, ಕೇಕ್ ಆನಂದಿಸಿದ್ದರು. ಆದರೆ, ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡಿಲ್ಲ” ಎಂದು ಟೀಕಿಸಿದ ಬೆನ್ನಲ್ಲೇ ಸಿಎಂ ಹೇಳಿಕೆ ನೀಡಿದ್ದಾರೆ.

ಸಚಿವ ಸಾಜಿ ಚೆರಿಯನ್ ಟೀಕೆಯ ವಿರುದ್ದ ಕೇರಳ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್ ಸೋಮವಾರ ಹರಿಹಾಯ್ದಿದೆ. “ಸಚಿವರ ಹೇಳಿಕೆ ಸಭ್ಯತೆಯಿಂದ ಕೂಡಿರಲಿಲ್ಲ. ಅವರು ಟೀಕೆ ಮಾಡಬಹದು. ಆದರೆ, ಈ ರೀತಿಯ ಅಸಭ್ಯ ಪದಗಳನ್ನು ಬಳಸಬಾರದಿತ್ತು” ಎಂದು ಬಿಷಪ್ಸ್ ಕೌನ್ಸಿಲ್ ಕಾರ್ಯದರ್ಶಿ ಫಾದರ್ ಜೇಕಬ್ ಪಾಲಕಪ್ಪಳ್ಳಿ ಹೇಳಿದ್ದಾರೆ.

ಕಳೆದ ವಾರ ಸಿಪಿಐ(ಎಂ) ಶಾಸಕ ಕೆ ಟಿ ಜಲೀಲ್ ಅವರು ಕೊಚ್ಚಿಯ ಕೆಸಿಬಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕ್ರಿಸ್‌ಮಸ್ ಆಚರಣೆಗೆ ಬಿಜೆಪಿ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ನಾಯಕರನ್ನು ಆಹ್ವಾನಿಸಿದ್ದಕ್ಕಾಗಿ ಕ್ಯಾಥೋಲಿಕ್ ಚರ್ಚ್ ವಿರುದ್ದ ವಾಗ್ದಾಳಿ ನಡೆಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಐಯುಎಂಎಲ್ ರಾಜ್ಯಾಧ್ಯಕ್ಷ ಪಾಣಕ್ಕಾಡ್ ಸಯ್ಯಿದ್ ಸಾದಿಕ್ ಅಲಿ ಶಿಹಾಬ್ ತಂಗಳ್ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ : ಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...