Homeಮುಖಪುಟರೇಪ್‌ ಕೇಸ್‌: ಬಂಧಿತ ಬಿಜೆಪಿ ನಾಯಕರ ಮನೆಗಳನ್ನು ಯಾವಾಗ ಕೆಡವುತ್ತೀರಿ-ಯೋಗಿಗೆ ಮಹುವಾ ಪ್ರಶ್ನೆ

ರೇಪ್‌ ಕೇಸ್‌: ಬಂಧಿತ ಬಿಜೆಪಿ ನಾಯಕರ ಮನೆಗಳನ್ನು ಯಾವಾಗ ಕೆಡವುತ್ತೀರಿ-ಯೋಗಿಗೆ ಮಹುವಾ ಪ್ರಶ್ನೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್‌ ನಾಯಕಿ ಮಹುವಾ ಮೊಯಿತ್ರಾ ಅವರು ಬಿಎಚ್‌ಯು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಪಿಗಳು ಯೋಗಿ ಆದಿತ್ಯನಾಥ್‌ ಜೊತೆಗಿರುವ ಫೋಟೋ ಹಂಚಿಕೊಂಡು ಅವರ ಆಸ್ತಿಗಳನ್ನು ಬುಲ್ಡೋಜರ್ ಚಲಾಯಿಸಿ ನೆಲಸಮಗೊಳಿಸಲು ಎಷ್ಟು ಸಮಯ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಆದಿತ್ಯನಾಥ್ ಅವರು 2017ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸಂದರ್ಶನವೊಂದರಲ್ಲಿ, ಯಾರಾದರೂ ಅಪರಾಧ ಮಾಡಿದರೆ ಅವರನ್ನು ಗುಂಡಿಕ್ಕಿ ಕೊಲ್ಲಲಾಗುತ್ತದೆ (Agar aparadh karenge, toh thok diye jayenge). ಆ ಬಳಿಕ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಹಲವು ಅಪರಾಧಿಗಳ ಎನ್‌ಕೌಂಟರ್‌ಗಳು ನಡೆದಿದೆ.

ಉತ್ತರ ಪ್ರದೇಶದ ಐಐಟಿ-ಬಿಎಚ್‌ಯು ಕ್ಯಾಂಪಸ್‌ನಲ್ಲಿ ಮಹಿಳಾ ವಿದ್ಯಾರ್ಥಿನಿಯೊಬ್ಬಳು ಸಾಮೂಹಿಕ ಅತ್ಯಾಚಾರಕ್ಕೊಳಗಾದ 2 ತಿಂಗಳ ನಂತರ, ಪೊಲೀಸರು ಭಾನುವಾರ ಮೂವರನ್ನು ಬಂಧಿಸಿದ್ದಾರೆ. ವಿರೋಧ ಪಕ್ಷಗಳು ಆರೋಪಿಗಳು ಬಿಜೆಪಿ ಪದಾಧಿಕಾರಿಗಳು ಎಂದು ಆರೋಪಿಸಿದ್ದು, ಮೂವರು ಆರೋಪಿಗಳು ತಾವು ಬಿಜೆಪಿಯ ಐಟಿ ಸೆಲ್ ಸದಸ್ಯರು ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಿದೆ.

ಕಾಂಗ್ರೆಸ್ ಕೂಡ ಬಿಜೆಪಿಯನ್ನು ಈ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದು,  ಬಿಜೆಪಿ ‘ಬೇಟಿ ಬಚಾವೋ, ಬೇಟಿ ಪಢಾವೋ’ ಘೋಷಣೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ನೆಟ್ಟಾ ಡಿಸೋಜಾ, ಅವರು ಮಹಿಳೆಯರಿಗೆ “ಬಲತ್ಕಾರಿ (ಅತ್ಯಾಚಾರಿ) ಜನತಾ ಪಕ್ಷ” ಆಗಿರುವುದು ಸತ್ಯ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್‌ನ ಡಾಲಿ ಶರ್ಮಾ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉತ್ತರಪ್ರದೇಶದಲ್ಲಿ ದುರ್ಬೀನು ಹಿಡಿದು ಹುಡುಕಿದರೂ ಕ್ರಿಮಿನಲ್‌ಗಳು ಸಿಗುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳುತ್ತಿದ್ದರು. ದುರ್ಬೀನುಗಳ ಅಗತ್ಯವಿಲ್ಲ ಏಕೆಂದರೆ ನಿಮ್ಮ ಪಕ್ಕದಲ್ಲಿ ಅಪರಾಧಿಗಳು ಕುಳಿತಿದ್ದಾರೆ. ಉತ್ತರಪ್ರದೇಶದಲ್ಲಿ ಈ ಕ್ರಿಮಿನಲ್‌ಗಳ ಮನೆಗಳಿಗೆ ಬುಲ್ಡೋಜರ್‌ಗಳು ಹೋಗುತ್ತಿರುವುದು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

ನ.1ರ ರಾತ್ರಿ ಐಐಟಿ ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಮತ್ತು ಸಕ್ಷಮ್ ಪಟೇಲ್ ಅವರನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದರು ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ತನ್ನ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸಂತ್ರಸ್ತೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿ, ಬೆದರಿಕೆ ಹಾಕಿ ಫೋನ್‌ನ್ನು ಕಸಿದುಕೊಂಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 354, ಸಾಮೂಹಿಕ ಅತ್ಯಾಚಾರ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಂಕಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...