Homeಮುಖಪುಟಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

ಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

- Advertisement -
- Advertisement -

ಏಳು ವರ್ಷಗಳ ಹಿಂದೆ ಕೆಳ ನ್ಯಾಯಾಲಯ ಅಪರಾಧಿ ಎಂದು ತೀರ್ಪು ನೀಡಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಮಹಿಳೆಯನ್ನು ಕೆಲವೊಮ್ಮೆ ಹಿಂಬಾಲಿಸುವುದು, ಆಕೆಗೆ ನಿಂದಿಸುವುದು ಆಕೆಯ ಸಭ್ಯತೆಯನ್ನು ಘಾಸಿಗೊಳಿಸುವಂತಹ (ಘನತೆಯನ್ನು ಕುಂದಿಸುವ) ಕೃತ್ಯ ಎನ್ನಲಾಗದು ಎಂದಿದೆ.

ಇಂತಹ ನಡವಳಿಕೆಗಳಿಂದ ಕಿರಿಕಿರಿ ಉಂಟಾಗಬಹುದು. ಆದರೆ, ಮಹಿಳೆಯ ಘನತೆಯನ್ನು ಕುಂದಿಸುತ್ತದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಅನಿಲ್ ಪನ್ಸಾರೆ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ ಡಿಸೆಂಬರ್ 16ರಂದು ನೀಡಿದ ಆದೇಶದಲ್ಲಿ ತಿಳಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಆರೋಪಿ ಸೈಕಲ್‌ನಲ್ಲಿ ಪ್ರಯಣಿಸುತ್ತಿದ್ದ ವೇಳೆ ದೂರುದಾರೆಯನ್ನು ತಳ್ಳಿದ ಅಥವಾ ದಬ್ಬಿದ ಕೃತ್ಯವನ್ನು, ಆಕೆಯನ್ನು ಹಿಂಬಾಲಿಸುವ ಮತ್ತು ಕಿರುಕುಳ ನೀಡುವ ಆತನ ನಡೆಯನ್ನು ಗಮನದಲ್ಲಿಟ್ಟುಕೊಂಡು ಪರಿಗಣಿಸಬೇಕಾಗುತ್ತದೆ ಎಂದು ನ್ಯಾಯಾಲಯ ವಿವರಿಸಿದೆ.

ಆರೋಪಿ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಅಥವಾ ತನ್ನ ದೇಹದ ನಿರ್ದಿಷ್ಟ ಭಾಗವನ್ನು ಸ್ಪರ್ಶಿಸುವ ಮೂಲಕ ತಳ್ಳಿದ್ದಾನೆ ಎಂದು ದೂರುದಾರೆ ಆರೋಪಿಸಿಲ್ಲ ಎಂಬ ಅಂಶವನ್ನು ನ್ಯಾಯಮೂರ್ತಿಗಳು ತೀರ್ಪು ನೀಡುವ ವೇಳೆ ಉಲ್ಲೇಖಿಸಿದ್ದಾರೆ.

ಆದ್ದರಿಂದ, ಐಪಿಸಿ ಸೆಕ್ಷನ್ 354ರ (ಗೌರವಕ್ಕೆ ಧಕ್ಕೆ) ಅಡಿಯಲ್ಲಿ ಮೇಲ್ಮನವಿದಾರನನ್ನು ದೋಷಿ ಎಂದು ಪರಿಗಣಿಸುವಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಲಯ ಎಡವಿವೆ ಎಂಬುದಾಗಿ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ವಾದದ ಪ್ರಕಾರ, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ಆರೋಪಿ ತನ್ನನ್ನು ಹಿಂಬಾಲಿಸಿ ನಿಂದಿಸಿದ್ದಾಗಿ ದೂರುದಾರೆ ಆರೋಪಿಸಿದ್ದರು. ಘಟನೆ ನಡೆದ ದಿನ ನಾನು ಮಾರುಕಟ್ಟೆಗೆ ತೆರಳುತ್ತಿದ್ದಾಗ ಬೈಸಿಕಲ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿ, ನನ್ನನ್ನು ತಳ್ಳಿದ. ನಾನು ಕೋಪಗೊಂಡರೂ ಹಿಂಬಾಲಿಸುವುದನ್ನು ಮುಂದುವರೆಸಿದ್ದ. ಆದ್ದರಿಂದ ನಾನು ಆತನ ಮೇಲೆ ಕೈ ಮಾಡಿದೆ ಎಂದು ದೂರುದಾರೆ ಹೇಳಿದ್ದರು.

ಈ ಸಾಕ್ಷ್ಯ ಆಧರಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಮೇ 9,2016ರಂದು ಆರೋಪಿಯನ್ನು ದೋಷಿ ಎಂದು ಘೋಷಿಸಿತ್ತು. ಆತನಿಗೆ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹2,000 ದಂಡ ವಿಧಿಸಿತ್ತು. ಇದನ್ನು ಸೆಷನ್ಸ್‌ ನ್ಯಾಯಾಲಯದಲ್ಲಿ ಮೇಲ್ಮನವಿದಾರ ಪ್ರಶ್ನಿಸಿದರೂ, ಜುಲೈ 10, 2023ರಂದು ಅರ್ಜಿ ವಜಾಗೊಂಡಿತ್ತು.

ಈ ಪ್ರಕರಣದಲ್ಲಿ ದೂರುದಾರೆಯ ಹೇಳಿಕೆ ಹೊರತುಪಡಿಸಿ ಬೇರೆ ಯಾವುದೇ ಪುರಾವೆಗಳಿಲ್ಲ. ಇದು ಅಪರಾಧವನ್ನು ಸಾಬೀತುಪಡಿಸಲು ಸಾಕಾಗುವುದಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಹೇಳಿದೆ. ಮ್ಯಾಜಿಸ್ಟ್ರೇಟ್ ಮತ್ತು ಸೆಷನ್ಸ್ ನ್ಯಾಯಾಲಯಗಳ ತೀರ್ಪುಗಳನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ಲಿಂಗ ಪರಿವರ್ತಿತ ಶಿಕ್ಷಕಿಯನ್ನು ಕೆಲಸದಿಂದ ಕೈಬಿಟ್ಟ ಶಾಲೆ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...