Homeಕರ್ನಾಟಕಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

ಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

- Advertisement -
- Advertisement -

ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ, ರಾಮಜನ್ಮ ಭೂಮಿ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದು, ಹಳೆ ಪ್ರಕರಣ ಮರುಜೀವ ಪಡೆದುಕೊಂಡಿದೆ. ಡಿ.5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೆ ವಿಚಾರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಮಾತಿನ ವಿನಿಮಯ ನಡೆಯುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಗೃಹ ಇಲಾಖೆ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಬೇಕೆಂಬ ಗೃಹ ಇಲಾಖೆಯ ಸೂಚನೆಯಂತೆ ಪೊಲೀಸರು ಕ್ರಮ ಕೈಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

‘ಬಂಧಿತರಲ್ಲಿ ಕೆಲವರು ಹಳೆಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಕರಸೇವಕರು ಇದ್ದಿರಬಹುದು. ರಾಜ್ಯ ಸರ್ಕಾರ ಕರಸೇವಕರನ್ನೇ ಗುರಿಯಾಗಿಟ್ಟುಕೊಂಡು ಕ್ರಮಕೈಗೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆ ಏನಿದೆ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿರುವ ಬಿಜೆಪಿ ರಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ‘ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದವರನ್ನು ಜೈಲಿಗಟ್ಟುವ ಕಾಂಗ್ರೆಸ್ ಸರ್ಕಾರದ ಕ್ರಮ ಹಿಂದೂ ದ್ವೇಷಿ ಹಾಗೂ ರಾಮ ಮಂದಿರ ನಿರ್ಮಾಣದ ವಿರೋಧಿ ಮನಸ್ಥಿತಿಯನ್ನು ಸಾಬೀತು ಪಡಿಸಿದೆ. ಹುಬ್ಬಳ್ಳಿಯಲ್ಲಿ ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು 31 ವರ್ಷಗಳ ಬಳಿಕ ಬಂಧನ ಹಾಗೂ ಉಳಿದ ಹೋರಾಟಗಾರರನ್ನು ಬಂಧಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಕಾನೂನಿನ ಹೆಸರಲ್ಲಿ ರಾಮ ಭಕ್ತರ ಮೇಲೆ ಸೇಡು ತೀರಿಸಿಕೊಳ್ಳುವ ವಿಕೃತ ಮನಸ್ಥಿತಿಯನ್ನು ಪ್ರತಿಬಿಂಬಿಸಿದೆ’ ಎಂದು ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯದಲ್ಲಿ ಸಾವಿರಾರು ಗಂಭೀರ ಕ್ರಿಮಿನಲ್ ಹಾಗೂ ದೇಶ ದ್ರೋಹಿ ಪ್ರಕರಣಗಳು ಮಂದಗತಿಯ ತನಿಖೆಯಿಂದ ದಶಕಗಳಿಂದಲೂ ಧೂಳು ಹಿಡಿಯುತ್ತಿವೆ. ಇದ್ಯಾವುದರತ್ತಲೂ ಗಮನ ಹರಿಸದೇ ರಾಮ ಭಕ್ತರನ್ನೇ ಗುರಿಯನ್ನಾಗಿಸಿಕೊಂಡಿರುವ ಸಿದ್ದರಾಮಯ್ಯ ಅವರ ಸರ್ಕಾರ ಸಮಾಜಕ್ಕೆ ಯಾವ ಸಂದೇಶ ಕೊಡಲು ಹೊರಟಿದೆ? ಶ್ರೀರಾಮ ಮಂದಿರ ನಿರ್ಮಾಣದ ವಿರುದ್ಧ ಪಿತೂರಿ ನಡೆಸಿದವರು ಏನಾದರು? ರಾಮಭಕ್ತರ ಮೇಲೆ ದೌರ್ಜನ್ಯ ನಡೆಸಿದ ಸರ್ಕಾರಗಳು ಏನಾದವು ಎಂಬುದನ್ನು ಇನ್ನೂ ಬುದ್ದಿ ಕಲಿಯದ ಕಾಂಗ್ರೆಸ್ಸಿಗರು ಇತಿಹಾಸವನ್ನೊಮ್ಮೆ ಮೆಲುಕು ಹಾಕಲಿ’ ಎಂದಿದ್ದಾರೆ.

ಕರಸೇವಕರ ಬಂಧನ ಖಂಡನೀಯ: ಬೊಮ್ಮಾಯಿ

‘ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ’ ಎಂದಿದ್ದಾರೆ.

‘ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; 1992ರ ಹುಬ್ಬಳ್ಳಿ ಹಿಂಸಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...