Homeಕರ್ನಾಟಕಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

ಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

- Advertisement -
- Advertisement -

ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ, ರಾಮಜನ್ಮ ಭೂಮಿ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದು, ಹಳೆ ಪ್ರಕರಣ ಮರುಜೀವ ಪಡೆದುಕೊಂಡಿದೆ. ಡಿ.5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೆ ವಿಚಾರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಮಾತಿನ ವಿನಿಮಯ ನಡೆಯುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಗೃಹ ಇಲಾಖೆ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಬೇಕೆಂಬ ಗೃಹ ಇಲಾಖೆಯ ಸೂಚನೆಯಂತೆ ಪೊಲೀಸರು ಕ್ರಮ ಕೈಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

‘ಬಂಧಿತರಲ್ಲಿ ಕೆಲವರು ಹಳೆಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಕರಸೇವಕರು ಇದ್ದಿರಬಹುದು. ರಾಜ್ಯ ಸರ್ಕಾರ ಕರಸೇವಕರನ್ನೇ ಗುರಿಯಾಗಿಟ್ಟುಕೊಂಡು ಕ್ರಮಕೈಗೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆ ಏನಿದೆ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿರುವ ಬಿಜೆಪಿ ರಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ‘ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದವರನ್ನು ಜೈಲಿಗಟ್ಟುವ ಕಾಂಗ್ರೆಸ್ ಸರ್ಕಾರದ ಕ್ರಮ ಹಿಂದೂ ದ್ವೇಷಿ ಹಾಗೂ ರಾಮ ಮಂದಿರ ನಿರ್ಮಾಣದ ವಿರೋಧಿ ಮನಸ್ಥಿತಿಯನ್ನು ಸಾಬೀತು ಪಡಿಸಿದೆ. ಹುಬ್ಬಳ್ಳಿಯಲ್ಲಿ ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು 31 ವರ್ಷಗಳ ಬಳಿಕ ಬಂಧನ ಹಾಗೂ ಉಳಿದ ಹೋರಾಟಗಾರರನ್ನು ಬಂಧಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಕಾನೂನಿನ ಹೆಸರಲ್ಲಿ ರಾಮ ಭಕ್ತರ ಮೇಲೆ ಸೇಡು ತೀರಿಸಿಕೊಳ್ಳುವ ವಿಕೃತ ಮನಸ್ಥಿತಿಯನ್ನು ಪ್ರತಿಬಿಂಬಿಸಿದೆ’ ಎಂದು ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯದಲ್ಲಿ ಸಾವಿರಾರು ಗಂಭೀರ ಕ್ರಿಮಿನಲ್ ಹಾಗೂ ದೇಶ ದ್ರೋಹಿ ಪ್ರಕರಣಗಳು ಮಂದಗತಿಯ ತನಿಖೆಯಿಂದ ದಶಕಗಳಿಂದಲೂ ಧೂಳು ಹಿಡಿಯುತ್ತಿವೆ. ಇದ್ಯಾವುದರತ್ತಲೂ ಗಮನ ಹರಿಸದೇ ರಾಮ ಭಕ್ತರನ್ನೇ ಗುರಿಯನ್ನಾಗಿಸಿಕೊಂಡಿರುವ ಸಿದ್ದರಾಮಯ್ಯ ಅವರ ಸರ್ಕಾರ ಸಮಾಜಕ್ಕೆ ಯಾವ ಸಂದೇಶ ಕೊಡಲು ಹೊರಟಿದೆ? ಶ್ರೀರಾಮ ಮಂದಿರ ನಿರ್ಮಾಣದ ವಿರುದ್ಧ ಪಿತೂರಿ ನಡೆಸಿದವರು ಏನಾದರು? ರಾಮಭಕ್ತರ ಮೇಲೆ ದೌರ್ಜನ್ಯ ನಡೆಸಿದ ಸರ್ಕಾರಗಳು ಏನಾದವು ಎಂಬುದನ್ನು ಇನ್ನೂ ಬುದ್ದಿ ಕಲಿಯದ ಕಾಂಗ್ರೆಸ್ಸಿಗರು ಇತಿಹಾಸವನ್ನೊಮ್ಮೆ ಮೆಲುಕು ಹಾಕಲಿ’ ಎಂದಿದ್ದಾರೆ.

ಕರಸೇವಕರ ಬಂಧನ ಖಂಡನೀಯ: ಬೊಮ್ಮಾಯಿ

‘ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ’ ಎಂದಿದ್ದಾರೆ.

‘ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; 1992ರ ಹುಬ್ಬಳ್ಳಿ ಹಿಂಸಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...