Homeಮುಖಪುಟಕೇರಳ ರಾಜ್ಯಪಾಲರು ನೇರವಾಗಿ ರಾಜಕೀಯಕ್ಕೆ ಬರುವುದು ಸೂಕ್ತ: ಬೃಂದಾ ಕಾರಟ್

ಕೇರಳ ರಾಜ್ಯಪಾಲರು ನೇರವಾಗಿ ರಾಜಕೀಯಕ್ಕೆ ಬರುವುದು ಸೂಕ್ತ: ಬೃಂದಾ ಕಾರಟ್

- Advertisement -
- Advertisement -

‘ಅವರು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಸ್ಪರ್ಧಿಸುವುದಕ್ಕೆ ಇಷ್ಟೆಲ್ಲಾ ಮಾಡುತ್ತಿದ್ದಾರೆ’ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಮಂಗಳವಾರ ವ್ಯಂಗ್ಯವಾಡಿದ್ದಾರೆ.

‘ಬಿಜೆಪಿಯ ಆಜ್ಞೆಯ ಮೇರೆಗೆ ರಾಜ್ಯಪಾಲರು ಪಿಣರಾಯಿ ವಿಜಯನ್ ಸರ್ಕಾರದ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುತ್ತಿದ್ದಾರೆ. ಖಾನ್ ಅವರು ಚುನಾವಣೆ ಮೂಲಕ ನೇರವಾಗಿ ರಾಜಕೀಯಕ್ಕೆ ಬರಬೇಕು’ ಎಂದು ಹೇಳಿದರು.

ವಿಶ್ವವಿದ್ಯಾಲಯದ ಮಸೂದೆಗಳು ಬಾಕಿ ಉಳಿದಿರುವ ಕುರಿತು ರಾಜ್ಯ ಸರ್ಕಾರದೊಂದಿಗೆ ದೀರ್ಘ ಕಾಲದಿಂದ ತಿಕ್ಕಾಟ ನಡೆಸುತ್ತಿರುವ ರಾಜ್ಯಪಾಲರ ವಿರುದ್ಧ ಸಿಪಿಐ (ಎಂ) ಮತ್ತು ಎಸ್ಎಫ್ಐ ವಾಗ್ದಾಳಿ ನಡೆಸಿವೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಅವರ ಸರ್ಕಾರವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವ ಆರಿಫ್ ಮೊಹಮ್ಮದ್ ಖಾನ್, ‘ಎಡ ಸಂಘಟನೆಗಳ ಕಾರ್ಯಕರ್ತರಿಂದ ಬೆದರಿಕೆ ಇದೆ’ ಎಂದು ಹೇಳಿದ್ದಾರೆ.

‘ಗೌರವಾನ್ವಿತ ರಾಜ್ಯಪಾಲರು ನೇರವಾಗಿ ರಾಜಕೀಯಕ್ಕೆ ಬರಲು ತುಂಬಾ ಆಸಕ್ತಿ ಹೊಂದಿದ್ದರೆ, ಅವರು ಹಾಗೆ ಮಾಡಬೇಕು. ಏಕೆಂದರೆ, 2024 ರ ಲೋಕಸಭೆ ಚುನಾವಣೆಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಅದು ಅವರ ರಾಜಕೀಯ ತಿಳುವಳಿಕೆಯ ಭಾಗವಾಗಿರುತ್ತದೆ’ ಎಂದು ಕಾರಟ್ ಹೇಳಿದ್ದಾರೆ.

‘ಕೇರಳ ರಾಜ್ಯಪಾಲರು ನೇರವಾಗಿ ಚುನಾವಣಾ ರಾಜಕೀಯಕ್ಕೆ ಬರುವುದು ಹೆಚ್ಚು ಸೂಕ್ತವೆನಿಸುತ್ತದೆ. ಬಿಜೆಪಿಯಿಂದ ಟಿಕೆಟ್ ತೆಗೆದುಕೊಂಡು ಕೇರಳದ ಯಾವುದೇ ಕ್ಷೇತ್ರದಿಂದ ಹೋರಾಡಿ. ದೂಧ್ ಕಾ ದೂಧ್ ಪಾನಿ ಕಾ ಪಾನಿ ಹೋ ಜಾಯೇಗಾ’ (ಹಾಲಿಂದು ಹಾಲಿಗೆ, ನೀರಿಂದು ನೀರಿಗೆ ಆಗಿ ಹೋಗಲಿ) ಎಂದು ಅವರು ವ್ಯಂಗ್ಯವಾಡಿದರು.

‘ರಾಜ್ಯಪಾಲರು ದಿನನಿತ್ಯದ ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೂಲಕ ತಮ್ಮದೇ ಹುದ್ದೆಗೆ ಅವಮಾನ ಮಾಡುವ ಬದಲು ಮುಖ್ಯಮಂತ್ರಿಯೊಂದಿಗಿನ ಭಿನ್ನಾಭಿಪ್ರಾಯವನ್ನು ನಿವಾರಿಸಬೇಕು. ಎಲ್ಲವೂ ಹಣಕಾಸಿನ ಮಸೂದೆಗಳಾಗಿರುವುದರಿಂದ ರಾಜ್ಯಪಾಲರ ಒಪ್ಪಿಗೆಯಿಲ್ಲದೆ ವಿಧಾನಸಭೆಯಲ್ಲಿ ಅಂಗೀಕರಿಸಲು ಸಾಧ್ಯವಿಲ್ಲ’ ಎಂದು ಅವರು ಪ್ರತಿಪಾದಿಸಿದರು.

ಕೇರಳ ವಿಧಾನಸಭೆ ಅಂಗೀಕರಿಸಿರುವ ಮಸೂದೆಗಳನ್ನು ತೆರವುಗೊಳಿಸದಿರುವುದು ಸೇರಿದಂತೆ ಹಲವು ವಿಷಯಗಳ ಕುರಿತು ರಾಜ್ಯಪಾಲ ಖಾನ್ ಅವರು ರಾಜ್ಯ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಿದ್ದಾರೆ.

ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದ ಎಸ್ಎಫ್ಐ ಕಾರ್ಯಕರ್ತರು:

ರಾಜ್ಯಪಾಲರು ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಕೇಸರೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಎಸ್ಎಫ್ಐ, ಹೊಸ ವರ್ಷದ ಮುನ್ನಾದಿನದಂದು ಅವರ 30 ಅಡಿ ಎತ್ತರದ ಪ್ರತಿಕೃತಿಯನ್ನು ಕಡಲತೀರದಲ್ಲಿ ದಹಿಸಿದ್ದಾರೆ. ಘಟನೆ ನಂತರ ಕಣ್ಣೂರು ಪಟ್ಟಣ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಯ್ಯಂಬಲಂ ಬೀಚಿನಲ್ಲಿ ಭಾನುವಾರ ಸಂಜೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಬೃಹತ್ ಪ್ರತಿಕೃತಿಯನ್ನು ಪೆಟ್ರೋಲ್ ಬಳಸಿ ದಹಿಸಿದ ಅಪಾಯಕಾರಿ ಕೃತ್ಯಕ್ಕಾಗಿ, ಎಸ್ಎಫ್ಐ ರಾಜ್ಯ ಅಧ್ಯಕ್ಷೆ ಕೆ. ಅನುಶ್ರೀ ಮತ್ತು ಇತರ ಎಂಟು ಜನರ ವಿರುದ್ಧ ಕೇರಳ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

143 (ಕಾನೂನುಬಾಹಿರ ಸಭೆ), 147 (ಗಲಭೆ), ಮತ್ತು 285 (ಬೆಂಕಿ ಅಥವಾ ದಹನಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಸ್ಎಫ್ಐ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಇದನ್ನೂ ಓದಿ; ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...