Homeಅಂತರಾಷ್ಟ್ರೀಯBRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

BRICS ರಾಷ್ಟ್ರಗಳ ಒಕ್ಕೂಟಕ್ಕೆ ಸೌದಿ ಅರೇಬಿಯಾ ಸೇರಿ ಐದು ರಾಷ್ಟ್ರಗಳ ಸೇರ್ಪಡೆ

- Advertisement -
- Advertisement -

ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ ಬ್ರಿಕ್ಸ್‌ಗೆ (BRICS) ಹೊಸದಾಗಿ ಐದು ರಾಷ್ಟ್ರಗಳನ್ನು ಸೇರಿಸಲಾಗಿದ್ದು, ಹೊಸದಾಗಿ ಸೇರ್ಪಡೆಗೊಂಡ ರಾಷ್ಟ್ರಗಳಿಗೆ ಬ್ರಿಕ್ಸ್‌ ಪೂರ್ಣ ಸದಸ್ಯತ್ವವನ್ನು ನೀಡಲಾಗಿದೆ.

BRICS ಒಕ್ಕೂಟಕ್ಕೆ ಹೊಸದಾಗಿ ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳನ್ನು ಸೇರ್ಪಡೆಗೊಳಿಸಲಾಗಿದೆ.

ಬ್ರಿಕ್ಸ್‌ನ ಅಧ್ಯಕ್ಷ ಸ್ಥಾನವನ್ನು ಮಾಸ್ಕೋ ವಹಿಸಿಕೊಂಡ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು  ಈ ಗುಂಪು 10-ರಾಷ್ಟ್ರಗಳ ಸಂಸ್ಥೆಯಾಗಿ ಮಾರ್ಪಟ್ಟಿದ್ದು, ಹೊಸ ಸದಸ್ಯರಾಗಿ ಐದು ರಾಷ್ಟ್ರಗಳು ಸೇರ್ಪಡೆಗೊಂಡಿವೆ ಎಂದು ಘೋಷಿಸಿದ್ದಾರೆ.

ಆಗಸ್ಟ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಬ್ರಿಕ್ಸ್‌ ನಾಯಕರು ಅರ್ಜೆಂಟೀನಾ ಸೇರಿದಂತೆ ಆರು ದೇಶಗಳನ್ನು ಜ.1ರಿಂದ ಜಾರಿಗೆ ಬರುವಂತೆ ಒಕ್ಕೂಟಕ್ಕೆ ಸೇರಿಸುವ ಪ್ರಸ್ತಾಪವನ್ನು ಅನುಮೋದಿಸಿದ್ದರು. ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್‌ ಶೃಂಗ ಸಭೆಯಲ್ಲಿ ಒಕ್ಕೂಟದ ವಿಸ್ತರಣೆಯ ಅಗತ್ಯತೆಯನ್ನು ಪ್ರತಿಪಾದಿಸಲಾಗಿತ್ತು. ಒಕ್ಕೂಟದ ವಿಸ್ತರಣೆಯ ಭಾಗವಾಗಿ ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್‌, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಬ್ರಿಕ್ಸ್‌ ಒಕ್ಕೂಟವನ್ನು ಸೇರಿಸಿಕೊಳ್ಳಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು.

ಆದರೆ ಅರ್ಜೆಂಟೀನಾದ ಹೊಸ ಅಧ್ಯಕ್ಷ ಜೇವಿಯರ್ ಮಿಲೀ ಅವರು ತಮ್ಮ ದೇಶವನ್ನು ಬ್ರಿಕ್ಸ್ ಸದಸ್ಯತ್ವದಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು. ಹೀಗಾಗಿ ಉಳಿದ ಐದು ದೇಶಗಳಿಗೆ ಸದಸ್ಯತ್ವ ನೀಡಲಾಗಿದೆ. ಹೊಸ ಸದಸ್ಯ ರಾಷ್ಟ್ರಗಳು ಒಕ್ಕೂಟಕ್ಕೆ ಬರುವುದರಿಂದ ಜಾಗತಿಕ ತೈಲ ರಫ್ತು ವಹಿವಾಟಿನ 80 ಪ್ರತಿಶತ ಬ್ರಿಕ್ಸ್ ಒಕ್ಕೂಟದ ತೆಕ್ಕೆಗೆ ಬರಲಿದೆ ಎನ್ನಲಾಗಿದೆ.

ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ ಭಾರತ, ರಷ್ಯಾ ಮತ್ತು ಚೀನಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಮತ್ತು ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಒಕ್ಕೂಟವಾಗಿದೆ. ಈ ದೇಶಗಳ ಮೊದಲಕ್ಷರಗಳಾದ B –ಬ್ರೆಜಿಲ್, R-ರಷ್ಯಾ, I –ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿ  BRICS ಎಂದು ಹೆಸರಿಡಲಾಗಿತ್ತು.  2001ರಲ್ಲಿ ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿತ್ತು. 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು. 2009ರಿಂದಲೂ ಈ ಸಂಘಟನೆ ವಾರ್ಷಿಕವಾಗಿ ಶೃಂಗಸಭೆ ಸೇರುತ್ತಾ ಬಂದಿದೆ.

2015ರ ಮಾಹಿತಿಯಂತೆ ಬ್ರಿಕ್ಸ್‌ನ ಜನಸಂಖ್ಯೆ 3.6 ಲಕ್ಷ ಕೋಟಿ ಅಥವಾ ಜಾಗತಿಕ ಜನಸಂಖ್ಯೆಯ ಅರ್ಧದಷ್ಟು ಇದೆ. ಈ ದೇಶಗಳ ಒಟ್ಟಾರೆ ಜಿಡಿಪಿ ಅಥವಾ ಒಟ್ಟಾರೆ ಅಂತರಿಕ ಉತ್ಪಾದನೆ 16.6 ಲಕ್ಷ ಕೋಟಿ ಅಮೆರಿಕನ್ ಡಾಲರ್ ಆಗಿದ್ದು, ಇದು ಜಾಗತಿಕ ಒಟ್ಟಾರೆ ಉತ್ಪಾದನೆಯ ಶೇ 22ರಷ್ಟಾಗಿದೆ.

ಬ್ರಿಕ್‌ನ ಮೊದಲ ಶೃಂಗಸಭೆ 2009ರ ಜೂ.16 ರಂದು ರಷ್ಯಾದಲ್ಲಿ ನಡೆಯಿತು. ಮೊದಲ ಶೃಂಗ ಸಭೆಯಲ್ಲಿ  ಅಂದಿನ ಬ್ರೆಜಿಲ್ ಅಧ್ಯಕ್ಷರಾದ ಲುಯಿಜ್ ಇನಾಸಿಯೊ ಲುಲ ಡ ಸಿಲ್ವ, ರಷ್ಯಾದ ಅಂದಿನ ಅಧ್ಯಕ್ಷ ದಿಮಿತ್ರಿ ಮೆಡ್ವಡೇವ್, ಭಾರತದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಮತ್ತು ಚೀನಾದ ಅಂದಿನ ಅಧ್ಯಕ್ಷ ಹು ಜಿಂಟಾವೊ ಹಾಜರಿದ್ದರು.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...