Homeಮುಖಪುಟಲೋಕಸಭೆ ಚುನಾವಣೆ ಘೋಷಣೆಗೆ ಮೊದಲೆ CAA ಬಗ್ಗೆ ಅಧಿಸೂಚನೆಗೆ ಕೇಂದ್ರ ಸಜ್ಜು?

ಲೋಕಸಭೆ ಚುನಾವಣೆ ಘೋಷಣೆಗೆ ಮೊದಲೆ CAA ಬಗ್ಗೆ ಅಧಿಸೂಚನೆಗೆ ಕೇಂದ್ರ ಸಜ್ಜು?

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಮತ್ತೆ ಮುನ್ನಲೆಗೆ ಬಂದಿದೆ. ಸಿಎಎ ಕಾಯ್ದೆಯಡಿಯಲ್ಲಿನ ನಿಯಮಗಳು ಸಿದ್ಧವಾಗಿದ್ದು, 2024ರ ಲೋಕಸಭೆ  ಚುನಾವಣೆ ಘೋಷಣೆಗೆ ಮೊದಲೇ ಈ ಕುರಿತು ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿದೆ.

ನಾವು ಶೀಘ್ರದಲ್ಲೇ ಸಿಎಎ ನಿಯಮಾವಳಿಗಳ ಬಗ್ಗೆ ಅಧಿಸೂಚನೆ ಹೊರಡಿಸಲಿದ್ದೇವೆ. ನಿಯಮಗಳನ್ನು ಹೊರಡಿಸಿದ ನಂತರ ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದೆ.

CAA ನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡುವುದು ಸಂವಿಧಾನಬಾಹಿರವಾಗಿದೆ. ಪ್ರಾಸ್ತವಿತ ಕಾಯ್ದೆಯಲ್ಲಿ ಮುಸಲ್ಮಾನರನ್ನು ಪೌರತ್ವದಿಂದ ಹೊರಗಿಟ್ಟಿದ್ದಕ್ಕೆ ದೇಶದಾದ್ಯಂತ ಭಾರೀ ಚರ್ಚೆ, ಪ್ರತಿಭಟನೆ, ಹಿಂಸಾಚಾರಕ್ಕೆ ಕಾರಣವಾಗಿತ್ತು.

ದಿ ಇಂಡಿಯನ್ ವರದಿಯ ಎಕ್ಸ್‌ಪ್ರೆಸ್ ಪ್ರಕಾರ, ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ. ನಾವು ಮುಂದಿನ ದಿನಗಳಲ್ಲಿ ಸಿಎಎ ನಿಯಮಗಳನ್ನು ಹೊರಡಿಸಲಿದ್ದೇವೆ. ನಿಯಮಗಳನ್ನು ಹೊರಡಿಸಿದ ನಂತರ, ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಿಎಎ ಕುರಿತು ಎಲ್ಲಾ ವಿಷಯಗಳು ಸಿದ್ದವಾಗಿದೆ ಮತ್ತು ಚುನಾವಣೆಯ ಮೊದಲು ಅವುಗಳನ್ನು ಕಾರ್ಯಗತಗೊಳಿಸುವ ಸಾಧ್ಯತೆಯಿದೆ. ಅರ್ಜಿದಾರರು ಪ್ರಯಾಣ ದಾಖಲೆಗಳಿಲ್ಲದಿದ್ದರೂ, ಭಾರತವನ್ನು ಪ್ರವೇಶಿಸಿದ ವರ್ಷವನ್ನು ತಿಳಿಸಬೇಕಾಗುತ್ತದೆ. ಅರ್ಜಿದಾರರಿಂದ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. 2014ರ ನಂತರ ಅರ್ಜಿ ಸಲ್ಲಿಸಿದ ಅರ್ಜಿದಾರರ ಅರ್ಜಿ ಹೊಸ ನಿಯಮಗಳ ಪ್ರಕಾರ ವಿಲೇವಾರಿ ಮಾಡಲಾಗುತ್ತದೆ. ಇದಲ್ಲದೆ ಡಿ.31, 2014ರ ಮೊದಲು ಭಾರತಕ್ಕೆ ಬಂದವರಿಗೆ ಮಾತ್ರ ಸೀಮಿತವಾಗಿದ್ದ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಕಳೆದ ಕೆಲವು ವರ್ಷಗಳಿಂದ ಬಿಜೆಪಿ ನಾಯಕರು ರ್ಯಾಲಿಗಳಲ್ಲಿ ಸಿಎಎ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ. ಕಾಯಿದೆಯು ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿಕೊಂಡಿದ್ದಾರೆ. ಕಳೆದ ವಾರ ಪಶ್ಚಿಮ ಬಂಗಾಳದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದ ಅಮಿತ್‌ ಶಾ, ಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ದೀದಿ ಸಿಎಎಗೆ ಸಂಬಂಧಿಸಿದಂತೆ ನಮ್ಮ ನಿರಾಶ್ರಿತ ಸಹೋದರರನ್ನು ಆಗಾಗ್ಗೆ ದಾರಿ ತಪ್ಪಿಸುತ್ತಾರೆ. ಸಿಎಎ ದೇಶದ ಕಾನೂನು ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ನಮ್ಮ ಪಕ್ಷದ ಬದ್ಧತೆ ಎಂದು ಹೇಳಿದ್ದರು.

ಸಿಎಎಯ ಕಾನೂನು ಮಾನ್ಯತೆಯನ್ನು ಪ್ರಶ್ನಿಸುವ ಹಲವು ಅರ್ಜಿಗಳು ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರವು ನ್ಯಾಯಾಲಯದಲ್ಲಿ ಕಾನೂನನ್ನು ಸಮರ್ಥಿಸಿ ಅಫಿಡವಿತ್‌ ಸಲ್ಲಿಕೆ ಮಾಡಿತ್ತು.

ಕಾಂಗ್ರೆಸ್‌ ಪ್ರತಿಕ್ರಿಯೆ

ಸಿಎಎ ನಿಯಮಗಳ ಅಧಿಸೂಚನೆ ಕುರಿತು ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಸುರೇಂದ್ರ ರಜಪೂತ್, ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ಇಂತಹ ಕಾನೂನನ್ನು ಪರಿಚಯಿಸುತ್ತಿದೆ. ನಿರುದ್ಯೋಗ ಮತ್ತು ಹಣದುಬ್ಬರಗಳಿಂದಾಗಿ  ಬಿಜೆಪಿಗೆ ಬುದ್ದಿ ಕಲಿಸಲು  ದೇಶವು ತಯಾರಿ ನಡೆಸುತ್ತಿದೆ. ಬಿಜೆಪಿಯು 2024ರ ಲೋಕಸಭೆ ಚುನಾವಣೆಯಲ್ಲಿ ಸೋಲುವ ಭಯದಲ್ಲಿದೆ ಮತ್ತು ಅದಕ್ಕಾಗಿಯೇ ಅಂತಹ ಕಾನೂನು ತರಬಹುದು ಎಂದು ರಜಪೂತ್ ಹೇಳಿದರು.

ಇದನ್ನು ಓದಿ: ಸಿಎಎ ಈ ನೆಲದ ಕಾನೂನು, ಅದರ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...