Homeಮುಖಪುಟದಲಿತ ರೈತರಿಗೆ 'ED' ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

- Advertisement -
- Advertisement -

ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಇಬ್ಬರು ದಲಿತ ರೈತರಿಗೆ ‘ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ’ಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್‌ ನೀಡಿದ ಪ್ರಕರಣ ರಾಷ್ಟ್ರಪತಿಯ ಅಂಗಳಕ್ಕೆ ತಲುಪಿದೆ. ಭಾರತೀಯ ಕಂದಾಯ ಸೇವೆ (IRS) ಅಧಿಕಾರಿಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಈ ಬಗ್ಗೆ ಪತ್ರವೊಂದನ್ನು ಬರೆದಿದ್ದು, ಕೇಂದ್ರ ಸರಕಾರಕ್ಕೆ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಅವರಿಗೆ ಮುಜುಗರ ಉಂಟಾಗುವಂತೆ ಮಾಡಿದೆ.

ಚೆನ್ನೈನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಉಪ ಆಯುಕ್ತರಾಗಿ ಕೆಲಸ ಮಾಡುತ್ತಿರುವ ಐಆರ್‌ಎಸ್ ಅಧಿಕಾರಿ ಬಿ ಬಾಲಮುರುಗನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಬರೆದಿದ್ದು,  ಜಾರಿ ನಿರ್ದೇಶನಾಲಯ ಬಿಜೆಪಿಯ ಅಸ್ತ್ರವಾಗಿ ಮರ್ಪಟ್ಟಿದೆ. ಇಡಿಯನ್ನು ಯಶಸ್ವಿಯಾಗಿ ಬಿಜೆಪಿಯ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಅವರನ್ನು ವಜಾಗೊಳಿಸಲು ಆಗ್ರಹಿಸಿದ್ದಾರೆ.

ಸೇಲಂ ಜಿಲ್ಲೆಯ ಅತ್ತೂರಿನ ಇಬ್ಬರು ದಲಿತ ರೈತರು ಸ್ಥಳೀಯ ಬಿಜೆಪಿ ನಾಯಕರೊಬ್ಬರು ತಮ್ಮ ಭೂಮಿಯನ್ನು ಅಕ್ರಮವಾಗಿ ಕಬಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಕೇಸ್‌ ಕೊಟ್ಟ ಬಳಿಕ ಅವರ ವಿರುದ್ಧ ಇಡಿ ಸಮನ್ಸ್ ನೀಡಿದ ಪ್ರಕರಣವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ಅವರು ತಮ್ಮ ಭೂಮಿಯನ್ನು ಕಾನೂನುಬಾಹಿರವಾಗಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದರು. ಸ್ಥಳೀಯ ನ್ಯಾಯಾಲಯದಲ್ಲಿ ಈ ಕುರಿತು ಕ್ರಿಮಿನಲ್ ಪ್ರಕರಣ ಬಾಕಿ ಇದೆ. ಈ ಸಂದರ್ಭದಲ್ಲಿ ದೂರದಾರ ಬಡ ರೈತರಿಗೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್‌ ಜಾರಿ ನಿರ್ದೇಶನಾಲಯವು ಹೇಗೆ ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುದನ್ನು ತೋರಿಸುತ್ತದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರ ವಹಿಸಿಕೊಂಡ ನಂತರ ಜಾರಿ ನಿರ್ದೇಶನಾಲಯವನ್ನು ‘ಬಿಜೆಪಿಯ ನೀತಿ ಜಾರಿ ನಿರ್ದೇಶನಾಲಯ’ವನ್ನಾಗಿ ಪರಿವರ್ತಿಸಿದ್ದಾರೆ ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

ನನ್ನ 30 ವರ್ಷಗಳ ಸೇವೆಯಲ್ಲಿ ಯಾವುದೇ ಸ್ಥಳೀಯ ರಾಜಕಾರಣಿಗಳು ಯಾವುದೇ ಅನುಕೂಲಕ್ಕಾಗಿ ನನ್ನನ್ನು ಸಂಪರ್ಕಿಸುವ ಅಥವಾ ಒತ್ತಡ ಹೇರುವುದನ್ನು ನಾನು ನೋಡಿಲ್ಲ. ಸಾಮಾನ್ಯವಾಗಿ ಅವರು ದೆಹಲಿಯ ಮೂಲಕ ಪ್ರಭಾವವನ್ನು ತರುತ್ತಾರೆ. ಈಗ ಪರಿಸ್ಥಿತಿ ಬದಲಾಗಿದೆ. ಈ ಸ್ಥಿತಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇರ ಹೊಣೆ. ಅವರು ಭಾರತದ ಹಣಕಾಸು ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಐಅರ್‌ಎಸ್‌ ಅಧಿಕಾರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಮಿಳುನಾಡಿನ ಬಡ ದಲಿತ ರೈತರಿಗೆ ನ್ಯಾಯ ಒದಗಿಸಲು ಮತ್ತು ಜಾರಿ ನಿರ್ದೇಶನಾಲಯವನ್ನು ಉಳಿಸಲು ಕೇಂದ್ರ ಸರ್ಕಾರ ನಿರ್ಮಲಾ ಸೀತಾರಾಮನ್‌ ಅವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಅವರು ಪತ್ರದಲ್ಲಿ ರಾಷ್ಟ್ರಪತಿಗಳನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿದ ಬಾಲಮುರುಗನ್,  ರಾಷ್ಟ್ರಪತಿಗಳಿಗೆ ಪತ್ರ ಕಳುಹಿಸಿರುವುದನ್ನು ದೃಢಪಡಿಸಿದರು ಮತ್ತು ತಾವು ಕೃಷಿ ಕುಟುಂಬಕ್ಕೆ ಸೇರಿದವರಾಗಿದ್ದು, ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳುವ ಕಷ್ಟಗಳನ್ನು ತಿಳಿದಿದ್ದೇವೆ. ಇಡಿ ಅಧಿಕಾರಿ ಅಂಕಿತ್ ತಿವಾರಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿರುವುದು ವೈಯಕ್ತಿಕ ವಿಚಾರ. ರೈತರಿಗೆ ಸಮನ್ಸ್ ಕಳುಹಿಸುವುದು ವೈಯಕ್ತಿಕ ಕಾರ್ಯವಲ್ಲ. ಒಂದು ಸಂಸ್ಥೆಯನ್ನು ಭ್ರಷ್ಟಗೊಳಿಸಲಾಗುತ್ತಿದೆ. ಇಡಿ ಸಂಸ್ಥೆಗೆ ಹಾನಿಯಾಗಿದೆ ಮತ್ತು ಅದಕ್ಕಾಗಿಯೇ ನಾನು ಕೇಂದ್ರ ಹಣಕಾಸು ಸಚಿವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ್ದೇನೆ. ಈ ಪತ್ರ ಬರೆಯುವುದರಿಂದ ಆಗುವ ದುಷ್ಪರಿಣಾಮಗಳು ನನಗೆ ಗೊತ್ತು, ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅದನ್ನು ಎದುರಿಸಲು ನಾನು ಸಿದ್ಧ ಎಂದು ಹೇಳಿದ್ದಾರೆ.

ಬಾಲಮುರುಗನ್ ಅವರು ಜ.31, 2024ರಂದು ನಿವೃತ್ತರಾಗಲಿದ್ದಾರೆ. ಅವರು ವಕೀಲ ಪರ್ವಿನಾ ಅವರ ಪತಿಯೂ ಆಗಿದ್ದಾರೆ. ಪರ್ವಿನಾ, ಇಡಿಯಿಂದ ಸಮನ್ಸ್ ಪಡೆದ ಇಬ್ಬರು ರೈತರಾದ ಕಣ್ಣಿಯಾನ್ ಮತ್ತು ಕೃಷ್ಣನ್ ಅವರ ವಕೀಲರಾಗಿದ್ದಾರೆ.

ಏನಿದು ಘಟನೆ:

ಸೇಲಂ ಜಿಲ್ಲೆಯ ಬಿಜೆಪಿ ನಾಯಕ ಗುಣಶೇಖರ್ ವಿರುದ್ದ ಜಮೀನು ಕಬಳಿಕೆ ಯತ್ನದ ವಿರುದ್ಧ ದೂರು ನೀಡಿದ್ದ ಅತ್ತೂರಿನ ದಲಿತ ಸಮುದಾಯದ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು.

ಬರೀ 1,000 ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸುವ ದಲಿತ ರೈತರನ್ನು ಇಡಿ ಹಿಂಬಾಲಿಸಿದೆ. ಈ ರೈತರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನದ ಆರೋಪ ಮಾಡಿದ್ದರು. ಇದೇ ಕಾರಣಕ್ಕೆ ಸಮನ್ಸ್‌ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಬಗ್ಗೆ ಮಾತನಾಡಿದ ಕನ್ನಿಯನ್ ಮತ್ತು ಕೃಷ್ಣನ್ ಪರ ವಕೀಲರಾದ ಪರ್ವಿನಾ, ಸಮನ್ಸ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಲಾಗಿಲ್ಲ. ಇಬ್ಬರು ಸಹೋದರರಿಗೆ ಪ್ರಕರಣ ಏನೆಂದು ತಿಳಿದಿಲ್ಲ. ಸಮನ್ಸ್‌ನಲ್ಲಿ ಸರಿಯಾದ ದಾಖಲೆಗಳೊಂದಿಗೆ ‘ಇಡಿ’ ಮುಂದೆ ಹಾಜರಾಗುವಂತೆ ಕೇಳುವುದನ್ನು ಹೊರತುಪಡಿಸಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಭೂ ಕಬಳಿಕೆ ಆರೋಪಕ್ಕೆ ಪ್ರತಿಯಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದರು. ಇದಲ್ಲದೆ ಇಡಿ ಸಮನ್ಸ್‌ನಲ್ಲಿ ರೈತರ ಜಾತಿಯನ್ನು ‘ಹಿಂದೂ ಪಲ್ಲರ್‌ಸ್’ ಎಂದು ಉಲ್ಲೇಖಿಸಿತ್ತು. ಇದು ವ್ಯಾಪಕವಾದ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ ಘೋಷಣೆಗೆ ಮೊದಲೆ CAA ಬಗ್ಗೆ ಅಧಿಸೂಚನೆಗೆ ಕೇಂದ್ರ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...