Homeಮುಖಪುಟಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

ಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

- Advertisement -
- Advertisement -

ಹಿಟ್‌ ಆಂಡ್‌ ರನ್‌ ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ ದಂಡವನ್ನು ವಿಧಿಸುವ ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತಾ ಕಾನೂನಿನ ವಿರುದ್ಧ ದೇಶದ ವಿವಿಧೆಡೆ ಟ್ರಕ್‌ ಚಾಲಕರು ವ್ಯಾಪಕವಾಗಿ ಪ್ರತಿಭಟನೆ ಮಾಡಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನ ಮತ್ತು ಬಿಹಾರಗಳಲ್ಲಿ ಪ್ರತಿಭಟನೆ ಜನರ ಮೇಲೆ ವ್ಯಾಪಕವಾದ ಪರಿಣಾಮ ಬೀರಿತ್ತು. ಟ್ರಕ್‌ ಚಾಲಕರ ಪ್ರತಿಭಟನೆಯಿಂದಾಗಿ ಹೈದರಾಬಾದ್‌ನ ಪೆಟ್ರೋಲ್ ಪಂಪ್‌ಗಳಾದ್ಯಂತ ಭಾರಿ ಜನಸಂದಣಿ ಸೇರಿದ್ದರು. ಚಾಲಕರ ವ್ಯಾಪಕ ಪ್ರತಿಭಟನೆಗಳಿಂದ ಇಂಧನ ಪೂರೈಕೆ ಸ್ಥಗಿತದ ಭಯದಿಂದ ಜನರು ಪೆಟ್ರೋಲ್‌ ಪಂಪ್‌ಗಳಲ್ಲಿ ಜಮಾಯಿಸಿದ್ದರು.

ಇದರಿಂದ ಹೈದರಾಬಾದ್‌ನ ಝೊಮಾಟೊ ಡೆಲಿವರಿ ಬಾಯ್‌ ಓರ್ವ ತನ್ನ ದ್ವಿಚಕ್ರ ವಾಹನವನ್ನು ಬಿಟ್ಟು ಕುದುರೆಯಲ್ಲಿ ಪಾರ್ಸೆಲ್‌ ಸಾಗಾಟ ಮಾಡಿದ್ದಾನೆ. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ‘ಅರ್ಬಾಜ್ ದಿ ಗ್ರೇಟ್’ ಎಂಬ ಎಕ್ಸ್‌ ಖಾತೆಯಲ್ಲಿ ಈ ಕುರಿತು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಡೆಲಿವರಿ ಏಜೆಂಟ್ ತನ್ನ ಹೆಗಲ ಮೇಲೆ ಡೆಲಿವರಿ ಬ್ಯಾಗ್‌ ಹಾಕಿಕೊಂಡಿದ್ದಾನೆ. ಝೊಮಾಟೊ ಟೀಸರ್ಟ್‌ ಧರಸಿದ್ದ ಯುವಕ ಕುದುರೆಯ ಮೇಲೇರಿ ಜನ ಸಂದಣಿ ಪ್ರದೇಶದಲ್ಲಿ ವಾಹನಗಳ ನಡುವೆ ಪಾರ್ಸೆಲ್‌ ಕೊಂಡೊಯ್ಯುತ್ತಿರುವುದು ಕಂಡು ಬಂದಿದೆ. ಹೈದರಾಬಾದ್‌ನಲ್ಲಿ ಪ್ರತಿಭಟನೆಯಿಂದಾಗಿ ಇಂಧನ ಕೊರತೆಯ ಆತಂಕದಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಜನರು ಜಮಾಯಿಸಿದ್ದರು. ಉದ್ದವಾದ ಸರತಿ ಸಾಲುಗಳಿದ್ದ ಕಾರಣಕ್ಕೆ ಬೈಕ್‌ ಬದಿಗಿಟ್ಟು, ಕುದುರೆಯ ಮೂಲಕ ಪುಡ್‌ ಡೆಲಿವರಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಭಾರತೀಯ ನ್ಯಾಯ ಸಂಹಿತಾ ಶಾಸನವನ್ನು ಖಂಡಿಸಿ ಜ.1 ಮತ್ತು 2ರಂದು ನಡೆದ ರಾಷ್ಟ್ರವ್ಯಾಪಿ ಮುಷ್ಕರವು ಇಂಧನ ವಿತರಣೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ. ಇದು ಗ್ರಾಹಕರಲ್ಲಿ ಇಂಧನದ ಕೊರತೆ ಮತ್ತು ಭೀತಿಗೆ ಕಾರಣವಾಗಿದೆ. ಹೈದರಾಬಾದ್‌ನ ಅಫ್ಜಲ್‌ಗುಂಜ್, ಬಂಜಾರಾ ಹಿಲ್ಸ್, ನಾಂಪಲ್ಲಿ, ಬೇಗಂಪೇಟ್, ಲಂಗರ್ ಹೌಜ್ ಮತ್ತು ಗಚಿಬೌಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪೆಟ್ರೋಲ್ ಪಂಪ್‌ಗಳ ಬಳಿ ಜನರ ಸಾಲುಗಳು ನಿಂತುಕೊಂಡಿರುವುದು ಕಂಡು ಬಂದಿತ್ತು.

ಏನಿದು ಪ್ರತಿಭಟನೆ?

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದರೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಹಿಂದೆ, ಹಿಟ್ ಅಂಡ್‌ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ 2 ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗಿನ ಸಭೆಯ ನಂತರ ಇಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (ಎಐಎಂಟಿಸಿ) ಮುಷ್ಕರ ಕೊನೆಗೊಳಿಸಲು ನಿರ್ಧರಿಸಿದೆ. ಹೊಸ ಕಾನೂನುಗಳು ಇನ್ನೂ ಜಾರಿಗೆ ಬಂದಿಲ್ಲ. ಎಐಎಂಟಿಸಿಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಜಯ್‌ ಭಲ್ಲಾ ಅವರು ಸಾರಿಗೆ ಸಂಸ್ಥೆಯ ಸದಸ್ಯರಿಗೆ ಭರವಸೆ ನೀಡಿದ ಹಿನ್ನೆಲೆ, ಮುಷ್ಕರ ಹಿಂಪಡೆಯಲಾಗಿದೆ ಎನ್ನಲಾಗಿದೆ.

ಇದನ್ನು ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...